ರಾಜ್ಕೋಟ್ ಪೊಲೀಸ್ ಆಯುಕ್ತ ರಾಜು ಭಾರ್ಗವ, ಪಾಲಿಕೆ ಆಯುಕ್ತ ಆನಂದ್ ಪಟೇಲ್, ವರ್ಗಾವಣೆಗೊಂಡ ಇಬ್ಬರು ಐಪಿಎಸ್ ಅಧಿಕಾರಿಗಳು ಹಾಗೂ ಅಮಾನತುಗೊಂಡ 9 ಅಧಿಕಾರಿಗಳನ್ನು ಕ್ರಿಮಿನಲ್ ವಿಚಾರಣೆಗೆ ಒಳಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ಈ ಅಧಿಕಾರಿಗಳನ್ನು ವರ್ಗಾವಣೆ / ಅಮಾನತು ಮಾಡಿರುವ ಆಧಾರದ ಮೇಲೆ ಎಫ್ಐಆರ್ ದಾಖಲು ಮಾಡಬೇಕು. ಇವರ ಹೊಣೆಗೇಡಿತನದಿಂದಾಗಿ 27 ಮಂದಿಯ ಸಾವು ಸಂಭವಿಸಿದೆ. ಮೂರು–ನಾಲ್ಕು ವರ್ಷಗಳಿಂದ ಪರವಾನಗಿ ಇಲ್ಲದೆ ಗೇಮ್ ಝೋನ್ ಕಾರ್ಯಾಚರಣೆ ನಡೆಸಿತ್ತು ಎಂದು ಅರ್ಜಿದಾರರು ವಾದಿಸಿದ್ದರು.