<p><strong>ಲಖನೌ:</strong> ‘ಪಾಕಿಸ್ತಾನದಲ್ಲಿ ನೆಲೆ ಹೊಂದಿರುವ ಉಗ್ರರ ತಾಣ ಗುರಿಯಾಗಿಸಿ ಭಾರತದ ಸೇನೆ ನಡೆಸಿದ ನಿರ್ದಿಷ್ಟ ದಾಳಿಯು, ತಜ್ಞ ವೈದ್ಯರು ನಡೆಸುವ ‘ಸರ್ಜರಿ’ಯಂತಿತ್ತು. ಇದು, ಈ ಹೊತ್ತಿನ ಅಗತ್ಯವು ಆಗಿತ್ತು’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಮಂಗಳವಾರ ಇಲ್ಲಿ ವ್ಯಾಖ್ಯಾನಿಸಿದರು.</p>.<p>ಇಲ್ಲಿ ನಡೆದ ಖಾಸಗಿ ಆಸ್ಪತ್ರೆಯೊಂದರ ಬೆಳ್ಳಿ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಹಲವು ರೀತಿಯಲ್ಲಿ ಯೋಧರು, ವೈದ್ಯರು ಒಂದೇ. ಇಬ್ಬರೂ ಜನರ ರಕ್ಷಣೆಗಾಗಿಯೇ ಇದ್ದಾರೆ’ ಎಂದರು.</p>.<p class="title">‘ಜನರ ರಕ್ಷಣೆ ದೃಷ್ಟಿಯಿಂದ ನಿರ್ಣಾಯಕ ಸಂದರ್ಭದಲ್ಲಿ ಸ್ಪಷ್ಟ ತೀರ್ಮಾನ ಕೈಗೊಳ್ಳುತ್ತಾರೆ. ಯಾವುದೇ ಸ್ಥಿತಿ ಎದುರಿಸಲು ಸಿದ್ದರಿರುತ್ತಾರೆ. ಈ ಇಬ್ಬರ ಸೇವೆಯನ್ನು ಸಮಾನವಾಗಿ ಗೌರವಿಸಬೇಕಾಗಿದೆ’ ಎಂದರು.</p>.<p>ಆದರೆ, ಎಲ್ಲರಿಗೂ ತಿಳಿದಂತೆ ಪಾಕಿಸ್ತಾನ ಎಂದಿಗೂ ಸರಿ ಆಗುವುದಿಲ್ಲ. ಭಾರತದ ನೆಲ, ನಾಗರಿಕರು, ಗುರುದ್ವಾರ, ದೇಗುಲ ಗುರಿಯಾಗಿಸಿ ದಾಳಿ ನಡೆಸಲು ಆರಂಭಿಸಿತು. ಆದರೆ, ಭಾರತದ ಯೋಧರ ಉತ್ತರ ಪಾಕಿಸ್ತಾನ ಮಂಡಿಯೂರುವಂತೆ ಮಾಡಿದೆ ಎಂದು ಸಚಿವರು ವ್ಯಾಖ್ಯಾನಿಸಿದರು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ಭವಿಷ್ಯದಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯೇ ನುಂಗಿ ಹಾಕಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ‘ಪಾಕಿಸ್ತಾನದಲ್ಲಿ ನೆಲೆ ಹೊಂದಿರುವ ಉಗ್ರರ ತಾಣ ಗುರಿಯಾಗಿಸಿ ಭಾರತದ ಸೇನೆ ನಡೆಸಿದ ನಿರ್ದಿಷ್ಟ ದಾಳಿಯು, ತಜ್ಞ ವೈದ್ಯರು ನಡೆಸುವ ‘ಸರ್ಜರಿ’ಯಂತಿತ್ತು. ಇದು, ಈ ಹೊತ್ತಿನ ಅಗತ್ಯವು ಆಗಿತ್ತು’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಮಂಗಳವಾರ ಇಲ್ಲಿ ವ್ಯಾಖ್ಯಾನಿಸಿದರು.</p>.<p>ಇಲ್ಲಿ ನಡೆದ ಖಾಸಗಿ ಆಸ್ಪತ್ರೆಯೊಂದರ ಬೆಳ್ಳಿ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಹಲವು ರೀತಿಯಲ್ಲಿ ಯೋಧರು, ವೈದ್ಯರು ಒಂದೇ. ಇಬ್ಬರೂ ಜನರ ರಕ್ಷಣೆಗಾಗಿಯೇ ಇದ್ದಾರೆ’ ಎಂದರು.</p>.<p class="title">‘ಜನರ ರಕ್ಷಣೆ ದೃಷ್ಟಿಯಿಂದ ನಿರ್ಣಾಯಕ ಸಂದರ್ಭದಲ್ಲಿ ಸ್ಪಷ್ಟ ತೀರ್ಮಾನ ಕೈಗೊಳ್ಳುತ್ತಾರೆ. ಯಾವುದೇ ಸ್ಥಿತಿ ಎದುರಿಸಲು ಸಿದ್ದರಿರುತ್ತಾರೆ. ಈ ಇಬ್ಬರ ಸೇವೆಯನ್ನು ಸಮಾನವಾಗಿ ಗೌರವಿಸಬೇಕಾಗಿದೆ’ ಎಂದರು.</p>.<p>ಆದರೆ, ಎಲ್ಲರಿಗೂ ತಿಳಿದಂತೆ ಪಾಕಿಸ್ತಾನ ಎಂದಿಗೂ ಸರಿ ಆಗುವುದಿಲ್ಲ. ಭಾರತದ ನೆಲ, ನಾಗರಿಕರು, ಗುರುದ್ವಾರ, ದೇಗುಲ ಗುರಿಯಾಗಿಸಿ ದಾಳಿ ನಡೆಸಲು ಆರಂಭಿಸಿತು. ಆದರೆ, ಭಾರತದ ಯೋಧರ ಉತ್ತರ ಪಾಕಿಸ್ತಾನ ಮಂಡಿಯೂರುವಂತೆ ಮಾಡಿದೆ ಎಂದು ಸಚಿವರು ವ್ಯಾಖ್ಯಾನಿಸಿದರು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ಭವಿಷ್ಯದಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯೇ ನುಂಗಿ ಹಾಕಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>