ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಲ್ವನ್‌ ಹುತಾತ್ಮ ಯೋಧರ ತ್ಯಾಗ ಸ್ಮರಣೆ

Published 15 ಜೂನ್ 2023, 11:22 IST
Last Updated 15 ಜೂನ್ 2023, 11:22 IST
ಅಕ್ಷರ ಗಾತ್ರ

ನವದೆಹಲಿ: ಲಡಾಕ್‌ನ ಗಾಲ್ವನ್‌ ಕಣಿವೆಯಲ್ಲಿ ಹುತಾತ್ಮರಾದ 20 ಮಂದಿ ಭಾರತೀಯ ಯೋಧರ ಧೈರ್ಯ ಹಾಗೂ ತ್ಯಾಗವು ಭವಿಷ್ಯದ ಪೀಳಿಗೆಗೆ ಸ್ಫೂರ್ತಿಯಾಗಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸ್ಮರಿಸಿದ್ದಾರೆ.

2020ರ ಜೂನ್‌ನಲ್ಲಿ ಭಾರತ ಮತ್ತು ಚೀನಾ ಸೇನೆ ನಡುವೆ ನಡೆದ ಘರ್ಷಣೆಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಮೂರನೇ ವರ್ಷದ ಸ್ಮರಣೆ ಅಂಗವಾಗಿ ಟ್ವೀಟ್‌ ಮಾಡಿರುವ ಸಚಿವರು, ಭಾರತಕ್ಕೆ ಸೇರಿದ ಗಾಲ್ವನ್‌ ಕಣಿವೆಯ ರಕ್ಷಣೆಗಾಗಿ ಯೋಧರು ಮಾಡಿರುವ ತ್ಯಾಗ ಅನನ್ಯವಾದುದು ಎಂದು ಬಣ್ಣಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT