ಪ್ರತಿ ವರ್ಷ ವಿಜಯದಶಮಿಯ ದಿನ ಸಚಿವ ರಾಜನಾಥ ಸಿಂಗ್ ಅವರು ಭಾರತೀಯ ಗಡಿ ಪ್ರದೇಶಗಳಿಗೆ ಆಗಮಿಸಿ 'ಶಸ್ತ್ರ' ಪೂಜೆ ಮಾಡುತ್ತಾರೆ. ಕಳೆದ ಕೆಲ ವರ್ಷಗಳಿಂದ ಅರುಣಾಚಲ ಪ್ರದೇಶದ ತವಾಂಗ್ಗೆ ಬಂದು 'ಶಸ್ತ್ರ' ಪೂಜೆ ಮಾಡುತ್ತಿದ್ದಾರೆ. ಈ ಪ್ರದೇಶ ಚೀನಾದ ಗಡಿಯನ್ನು ಹಂಚಿಕೊಂಡಿದೆ.
ಕಳೆದ ಕೆಲವು ವರ್ಷಗಳಲ್ಲಿ ಪೂರ್ವ ಲಡಾಕ್ನಲ್ಲಿ ಭಾರತ ಹಾಗೂ ಚೀನಾ ನಡುವೆ ಸಂಘರ್ಷ ಏರ್ಪಟ್ಟಿರುವಂತೆಯೇ ವಾಸ್ತವ ನಿಯಂತ್ರಣ ರೇಖೆಯ (ಎಲ್ಎಸಿ) ಸಮೀಪದ ಸೇನಾ ನೆಲೆಯಲ್ಲಿ ರಾಜನಾಥ ಸಿಂಗ್ ಸೈನಿಕರೊಂದಿಗೆ ದಸರಾ ಹಬ್ಬ ಆಚರಿಸಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ರಾಜನಾಥ ಸಿಂಗ್ ಅವರು, ಹಿಂದಿನ ಎನ್ಡಿಎ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದಾಗಲೂ ದಸರಾ ಸಂದರ್ಭದಲ್ಲಿ ಇಲ್ಲಿಗೆ ಬಂದು ಶಸ್ತ್ರ ಪೂಜೆಯಲ್ಲಿ ಭಾಗಿಯಾಗಿದ್ದಾರೆ.