ನವದೆಹಲಿ: ದೇಶದ ಭದ್ರತೆ ಹಾಗೂ ಭಾರತ–ಪಾಕಿಸ್ತಾನ ಗಡಿಯಲ್ಲಿನಸ್ಥಿತಿಗತಿ ಅವಲೋಕನ ನಡೆಸುವ ಸಲುವಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಭಾಲ್, ಗೃಹ ಕಾರ್ಯದರ್ಶಿ ರಾಜೀವ್ ಗೌಬಾ, ಗುಪ್ತಚರ ಇಲಾಖೆ ಮುಖ್ಯಸ್ಥ ರಾಜೀವ್ ಜೈನ್ ಹಾಗೂ ಇನ್ನೂ ಕೆಲವು ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಪಾಕಿಸ್ತಾನದ ಗಡಿಯೊಳಗಿನ ಜೈಷ್–ಎ–ಮೊಹಮ್ಮದ್ ಉಗ್ರ ಶಿಬಿರಗಳ ಮೇಲೆ ಭಾರತೀಯ ವಾಯುಪಡೆಯ ವೈಮಾನಿಕ ದಾಳಿ ನಡೆದ ಬೆನ್ನಲೇ ಪಾಕಿಸ್ತಾನ ಸೇನೆಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಮೇಲೆ ಶೆಲ್ ದಾಳಿ ನಡೆಸಿವೆ. ಹೀಗಾಗಿ ಸಭೆ ಮಹತ್ವ ಪಡೆದುಕೊಂಡಿದೆ.