<p><strong>ಮೊವ್ (ಮಧ್ಯಪ್ರದೇಶ):</strong> ಅನಿರೀಕ್ಷಿತ ಭೌಗೋಳಿಕ ರಾಜಕೀಯವನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಸೇನೆಯು ಅಲ್ಪಾವಧಿ ಸಂಘರ್ಷಗಳಿಂದ ಹಿಡಿದು ಐದು ವರ್ಷಗಳ ದೀರ್ಘ ಯುದ್ಧಕ್ಕೂ ಸಿದ್ಧವಾಗಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. </p><p>ಮೊವ್ನ ಸೇನಾ ತರಬೇತಿ ಕಾಲೇಜಿನಲ್ಲಿ ಜರುಗಿದ 'ರಣ್ ಸಂವಾದ' ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. </p><p>ಭಾರತ ಯಾರ ಭೂಮಿಯನ್ನು ಕೂಡ ಬಯಸುವುದಿಲ್ಲ. ಆದರೆ, ತನ್ನ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಯಾವುದೇ ಮಟ್ಟಕ್ಕೆ ಹೋಗಲು ಸಿದ್ಧವಾಗಿದೆ. ಎಲ್ಲಾ ರೀತಿಯ ಭದ್ರತಾ ಸವಾಲುಗಳನ್ನು ಎದುರಿಸಲು ಸೇನೆ ಸಿದ್ಧವಾಗಿರಬೇಕು ಎಂದು ತಿಳಿಸಿದ್ದಾರೆ. </p><p>'ಆಪರೇಷನ್ ಸಿಂಧೂರ' ಕಾರ್ಯಚರಣೆಯು ಭಾರತದ ಸ್ಥಳೀಯ ವೇದಿಕೆಗಳು, ಉಪಕರಣಗಳು ಹಾಗೂ ಶಸ್ತ್ರಾಸ್ತ್ರ ವ್ಯವಸ್ಥೆಗಳ ಯಶಸ್ಸಿಗೆ ಉತ್ತಮ ಉದಾಹರಣೆಯಾಗಿದೆ ಎಂದಿದ್ದಾರೆ. </p><p>ಕಾರ್ಯಕ್ರಮದಲ್ಲಿ ಸಿಡಿಎಸ್ ಅನಿಲ್ ಚೌಹಾಣ್, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಎ.ಪಿ. ಸಿಂಗ್ ಮತ್ತು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಸೇರಿದಂತೆ ಇತರ ಪ್ರಮುಖ ಸೇನಾ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊವ್ (ಮಧ್ಯಪ್ರದೇಶ):</strong> ಅನಿರೀಕ್ಷಿತ ಭೌಗೋಳಿಕ ರಾಜಕೀಯವನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಸೇನೆಯು ಅಲ್ಪಾವಧಿ ಸಂಘರ್ಷಗಳಿಂದ ಹಿಡಿದು ಐದು ವರ್ಷಗಳ ದೀರ್ಘ ಯುದ್ಧಕ್ಕೂ ಸಿದ್ಧವಾಗಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. </p><p>ಮೊವ್ನ ಸೇನಾ ತರಬೇತಿ ಕಾಲೇಜಿನಲ್ಲಿ ಜರುಗಿದ 'ರಣ್ ಸಂವಾದ' ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. </p><p>ಭಾರತ ಯಾರ ಭೂಮಿಯನ್ನು ಕೂಡ ಬಯಸುವುದಿಲ್ಲ. ಆದರೆ, ತನ್ನ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಯಾವುದೇ ಮಟ್ಟಕ್ಕೆ ಹೋಗಲು ಸಿದ್ಧವಾಗಿದೆ. ಎಲ್ಲಾ ರೀತಿಯ ಭದ್ರತಾ ಸವಾಲುಗಳನ್ನು ಎದುರಿಸಲು ಸೇನೆ ಸಿದ್ಧವಾಗಿರಬೇಕು ಎಂದು ತಿಳಿಸಿದ್ದಾರೆ. </p><p>'ಆಪರೇಷನ್ ಸಿಂಧೂರ' ಕಾರ್ಯಚರಣೆಯು ಭಾರತದ ಸ್ಥಳೀಯ ವೇದಿಕೆಗಳು, ಉಪಕರಣಗಳು ಹಾಗೂ ಶಸ್ತ್ರಾಸ್ತ್ರ ವ್ಯವಸ್ಥೆಗಳ ಯಶಸ್ಸಿಗೆ ಉತ್ತಮ ಉದಾಹರಣೆಯಾಗಿದೆ ಎಂದಿದ್ದಾರೆ. </p><p>ಕಾರ್ಯಕ್ರಮದಲ್ಲಿ ಸಿಡಿಎಸ್ ಅನಿಲ್ ಚೌಹಾಣ್, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಎ.ಪಿ. ಸಿಂಗ್ ಮತ್ತು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಸೇರಿದಂತೆ ಇತರ ಪ್ರಮುಖ ಸೇನಾ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>