<p><strong>ನವದೆಹಲಿ:</strong> ಭಾರತದ ಆಂತರಿಕ ವ್ಯವಹಾರಗಳಲ್ಲಿ ಮೂರನೇಯವರು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. </p><p>ತೆಲಂಗಾಣದಲ್ಲಿ ನಡೆದ ‘ಹೈದರಾಬಾದ್ ವಿಮೋಚನಾ ದಿನಾಚರಣೆ’ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ದೇಶದ ಹೊರಗಿನವರ ಮಧ್ಯಸ್ಥಿಕೆಯನ್ನು ಭಾರತ ತಿರಸ್ಕರಿಸಿತ್ತು. ಇದರೊಂದಿಗೆ ಭಾರತ ತನ್ನ ನಿರ್ಧಾರಗಳನ್ನು ತಾನೇ ತೆಗೆದುಕೊಳ್ಳುತ್ತದೆ ಎಂಬುದನ್ನು ಸಾಬೀತು ಮಾಡಿತು’ ಎಂದು ಹೇಳಿದ್ದಾರೆ. </p><p>‘ಭಾರತ ಮತ್ತೊಂದು ದೇಶದ ಪರಸ್ಪರ ಹಿತಾಸಕ್ತಿಯನ್ನು ಗೌರವಿಸುತ್ತದೆಯಾದರೂ ಮಾತುಕತೆ ವಿಫಲವಾದಾಗ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ. ಇತ್ತೀಚಿಗಿನ ಆಪರೇಷನ್ ಸಿಂಧೂರ ಕಾರ್ಯಾಚರಣೆ, 2016ರ ಸರ್ಜಿಕಲ್ ಸ್ಟ್ರೈಕ್ ಮತ್ತು 2019ರ ಬಾಲಕೋಟ್ ವಾಯುದಾಳಿಯು ಭಾರತದ ದೃಢಸಂಕಲ್ಪದ ಪುರಾವೆಗಳಾಗಿವೆ’ ಎಂದು ಅವರು ತಿಳಿಸಿದ್ದಾರೆ.</p><p>‘ಭಾರತ ಸಂವಾದದಲ್ಲಿ ನಂಬಿಕೆ ಇಡುತ್ತದೆ. ಆದರೆ, ಶಾಂತಿ ಮತ್ತು ಸದ್ಭಾವನೆಯ ಭಾಷೆಯನ್ನು ಅರ್ಥಮಾಡಿಕೊಳ್ಳಲು ವಿಫಲರಾದವರಿಗೆ ಸೂಕ್ತ ಉತ್ತರವನ್ನು ಹೇಗೆ ನೀಡಬೇಕೆಂದು ನಮಗೆ ತಿಳಿದಿದೆ’ ಎಂದು ಸಿಂಗ್ ತಿಳಿಸಿದ್ದಾರೆ. </p><p>‘ಭಯೋತ್ಪಾದಕರು ಪಹಲ್ಗಾಮ್ನಲ್ಲಿ ಧರ್ಮದ ಆಧಾರದ ಮೇಲೆ ಮುಗ್ಧ ನಾಗರಿಕರನ್ನು ಕೊಂದರೆ, ಭಾರತೀಯ ಸಶಸ್ತ್ರ ಪಡೆಗಳು ಕರ್ಮದ ಆಧಾರದ ಮೇಲೆ ಉಗ್ರರ ಅಡಗುತಾಣಗಳನ್ನು ನಾಶಪಡಿಸಿವೆ. ಸದ್ಯದ ಮಟ್ಟಿಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಗಡಿಯಾಚೆಯಿಂದ ಮತ್ತೊಮ್ಮೆ ದಾಳಿ ನಡೆದರೆ, ನಾವು ಪೂರ್ಣ ಬಲದೊಂದಿಗೆ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತೇವೆ’ ಎಂದು ಸಿಂಗ್ ಎಚ್ಚರಿಕೆ ನೀಡಿದ್ದಾರೆ. </p><p>ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಸಿಂಗ್, ಹೈದರಾಬಾದ್ ವಿಮೋಚನಾ ದಿನವು ಪ್ರಧಾನಿಯವರ ಜನ್ಮದಿನದೊಂದಿಗೆ ಹೊಂದಿಕೆಯಾಗುತ್ತದೆ ಎಂದು ಹೇಳಿದ್ದಾರೆ. ‘ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಂತೆಯೇ ಮೋದಿ ಅವರು ಭಾರತವನ್ನು ಸಾಂಸ್ಕೃತಿಕ, ಸಾಮಾಜಿಕ, ಆಧ್ಯಾತ್ಮಿಕ ಮತ್ತು ಆರ್ಥಿಕವಾಗಿ ಬಲಪಡಿಸಲು ಕೆಲಸ ಮಾಡುತ್ತಿದ್ದಾರೆ. ಹಾಗಾಗಿಯೇ ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವತ್ತ ಸಾಗುತ್ತಿದೆ ಎಂದು ಸಿಂಗ್ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತದ ಆಂತರಿಕ ವ್ಯವಹಾರಗಳಲ್ಲಿ ಮೂರನೇಯವರು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. </p><p>ತೆಲಂಗಾಣದಲ್ಲಿ ನಡೆದ ‘ಹೈದರಾಬಾದ್ ವಿಮೋಚನಾ ದಿನಾಚರಣೆ’ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ದೇಶದ ಹೊರಗಿನವರ ಮಧ್ಯಸ್ಥಿಕೆಯನ್ನು ಭಾರತ ತಿರಸ್ಕರಿಸಿತ್ತು. ಇದರೊಂದಿಗೆ ಭಾರತ ತನ್ನ ನಿರ್ಧಾರಗಳನ್ನು ತಾನೇ ತೆಗೆದುಕೊಳ್ಳುತ್ತದೆ ಎಂಬುದನ್ನು ಸಾಬೀತು ಮಾಡಿತು’ ಎಂದು ಹೇಳಿದ್ದಾರೆ. </p><p>‘ಭಾರತ ಮತ್ತೊಂದು ದೇಶದ ಪರಸ್ಪರ ಹಿತಾಸಕ್ತಿಯನ್ನು ಗೌರವಿಸುತ್ತದೆಯಾದರೂ ಮಾತುಕತೆ ವಿಫಲವಾದಾಗ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ. ಇತ್ತೀಚಿಗಿನ ಆಪರೇಷನ್ ಸಿಂಧೂರ ಕಾರ್ಯಾಚರಣೆ, 2016ರ ಸರ್ಜಿಕಲ್ ಸ್ಟ್ರೈಕ್ ಮತ್ತು 2019ರ ಬಾಲಕೋಟ್ ವಾಯುದಾಳಿಯು ಭಾರತದ ದೃಢಸಂಕಲ್ಪದ ಪುರಾವೆಗಳಾಗಿವೆ’ ಎಂದು ಅವರು ತಿಳಿಸಿದ್ದಾರೆ.</p><p>‘ಭಾರತ ಸಂವಾದದಲ್ಲಿ ನಂಬಿಕೆ ಇಡುತ್ತದೆ. ಆದರೆ, ಶಾಂತಿ ಮತ್ತು ಸದ್ಭಾವನೆಯ ಭಾಷೆಯನ್ನು ಅರ್ಥಮಾಡಿಕೊಳ್ಳಲು ವಿಫಲರಾದವರಿಗೆ ಸೂಕ್ತ ಉತ್ತರವನ್ನು ಹೇಗೆ ನೀಡಬೇಕೆಂದು ನಮಗೆ ತಿಳಿದಿದೆ’ ಎಂದು ಸಿಂಗ್ ತಿಳಿಸಿದ್ದಾರೆ. </p><p>‘ಭಯೋತ್ಪಾದಕರು ಪಹಲ್ಗಾಮ್ನಲ್ಲಿ ಧರ್ಮದ ಆಧಾರದ ಮೇಲೆ ಮುಗ್ಧ ನಾಗರಿಕರನ್ನು ಕೊಂದರೆ, ಭಾರತೀಯ ಸಶಸ್ತ್ರ ಪಡೆಗಳು ಕರ್ಮದ ಆಧಾರದ ಮೇಲೆ ಉಗ್ರರ ಅಡಗುತಾಣಗಳನ್ನು ನಾಶಪಡಿಸಿವೆ. ಸದ್ಯದ ಮಟ್ಟಿಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಗಡಿಯಾಚೆಯಿಂದ ಮತ್ತೊಮ್ಮೆ ದಾಳಿ ನಡೆದರೆ, ನಾವು ಪೂರ್ಣ ಬಲದೊಂದಿಗೆ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತೇವೆ’ ಎಂದು ಸಿಂಗ್ ಎಚ್ಚರಿಕೆ ನೀಡಿದ್ದಾರೆ. </p><p>ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಸಿಂಗ್, ಹೈದರಾಬಾದ್ ವಿಮೋಚನಾ ದಿನವು ಪ್ರಧಾನಿಯವರ ಜನ್ಮದಿನದೊಂದಿಗೆ ಹೊಂದಿಕೆಯಾಗುತ್ತದೆ ಎಂದು ಹೇಳಿದ್ದಾರೆ. ‘ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಂತೆಯೇ ಮೋದಿ ಅವರು ಭಾರತವನ್ನು ಸಾಂಸ್ಕೃತಿಕ, ಸಾಮಾಜಿಕ, ಆಧ್ಯಾತ್ಮಿಕ ಮತ್ತು ಆರ್ಥಿಕವಾಗಿ ಬಲಪಡಿಸಲು ಕೆಲಸ ಮಾಡುತ್ತಿದ್ದಾರೆ. ಹಾಗಾಗಿಯೇ ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವತ್ತ ಸಾಗುತ್ತಿದೆ ಎಂದು ಸಿಂಗ್ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>