<p><strong>ನವದೆಹಲಿ</strong>: ಭಯೋತ್ಪಾದನೆಯನ್ನು ಮಟ್ಟಹಾಕಲು ದ್ವಂದ್ವ ನೀತಿ ಇರಬಾರದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.</p><p>ಬಿಷ್ಕೆಕ್ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಸಭೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ, ಭಯೋತ್ಪಾದಕ ಗುಂಪುಗಳಿಗೆ ನೆರವು ನೀಡುವ ರಾಷ್ಟ್ರಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.</p><p>ಭಯೋತ್ಪಾದನೆಗೆ ಕುಮ್ಮಕ್ಕು ಮತ್ತು ಆಶ್ರಯ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲು ಎಸ್ಸಿಒ ಸಂಘಟನೆಯು ಹಿಂಜರಿಯಬಾರದು ಎಂದು ಸಿಂಗ್ ತಿಳಿಸಿದ್ದಾರೆ.</p>.ಮೇ 1ರಿಂದ ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ.Election | ಟಿಎಂಸಿಯ ಭದ್ರಕೋಟೆ ದಕ್ಷಿಣ ಬಂಗಾಳದಲ್ಲಿ ಬಿಜೆಪಿ ಹಾದಿ ಕಠಿಣ. <p>ಭಯೋತ್ಪಾದನೆ ವಿರುದ್ಧ ಭಾರತವು ತನ್ನ ದೃಢ ಸಂಕಲ್ಪವನ್ನು ಈಗಾಗಲೇ ಪ್ರದರ್ಶಿಸಿದೆ. 'ಆಪರೇಷನ್ ಸಿಂಧೂರ' ಮೂಲಕ ಭಯೋತ್ಪಾದನೆಗಳಿಗೆ ಸಂಚು ರೂಪಿಸುವವರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಭಾರತ ರವಾನಿಸಿದೆ ಎಂದು ಹೇಳಿದ್ದಾರೆ.</p><p>ರಾಷ್ಟ್ರದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಗಡಿಯಾಚೆಗಿನ ಪ್ರಾಯೋಜಿತ ಭಯೋತ್ಪಾದನೆಯನ್ನು ನಾವು ನಿರ್ಲಕ್ಷಿಸಬಾರದು. ಇದು ಇಡೀ ವಿಶ್ವ ವ್ಯವಸ್ಥೆಗೆ ದೊಡ್ಡ ಸವಾಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p><p>ಪ್ರಸ್ತುತ ಜಗತ್ತು ಏಕಪಕ್ಷೀಯ ನಿರ್ಧಾರಗಳು ಮತ್ತು ಹೆಚ್ಚುತ್ತಿರುವ ಸಂಘರ್ಷಗಳಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಉಗ್ರವಾದ ಮತ್ತು ಮೂಲಭೂತವಾದವು ಜಾಗತಿಕ ಸಮಸ್ಯೆಯಾಗಿದೆ ಎಂದಿದ್ದಾರೆ.</p>.ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ .'ಮ್ಯಾರಥಾನ್' ಎನ್ನುವ ದೂರದ ಓಟದ ಸವಾಲು ಎದುರಿಸುವ ಮುನ್ನ ಇದನ್ನೊಮ್ಮೆ ಓದಿ.. .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಯೋತ್ಪಾದನೆಯನ್ನು ಮಟ್ಟಹಾಕಲು ದ್ವಂದ್ವ ನೀತಿ ಇರಬಾರದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.</p><p>ಬಿಷ್ಕೆಕ್ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಸಭೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ, ಭಯೋತ್ಪಾದಕ ಗುಂಪುಗಳಿಗೆ ನೆರವು ನೀಡುವ ರಾಷ್ಟ್ರಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.</p><p>ಭಯೋತ್ಪಾದನೆಗೆ ಕುಮ್ಮಕ್ಕು ಮತ್ತು ಆಶ್ರಯ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲು ಎಸ್ಸಿಒ ಸಂಘಟನೆಯು ಹಿಂಜರಿಯಬಾರದು ಎಂದು ಸಿಂಗ್ ತಿಳಿಸಿದ್ದಾರೆ.</p>.ಮೇ 1ರಿಂದ ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ.Election | ಟಿಎಂಸಿಯ ಭದ್ರಕೋಟೆ ದಕ್ಷಿಣ ಬಂಗಾಳದಲ್ಲಿ ಬಿಜೆಪಿ ಹಾದಿ ಕಠಿಣ. <p>ಭಯೋತ್ಪಾದನೆ ವಿರುದ್ಧ ಭಾರತವು ತನ್ನ ದೃಢ ಸಂಕಲ್ಪವನ್ನು ಈಗಾಗಲೇ ಪ್ರದರ್ಶಿಸಿದೆ. 'ಆಪರೇಷನ್ ಸಿಂಧೂರ' ಮೂಲಕ ಭಯೋತ್ಪಾದನೆಗಳಿಗೆ ಸಂಚು ರೂಪಿಸುವವರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಭಾರತ ರವಾನಿಸಿದೆ ಎಂದು ಹೇಳಿದ್ದಾರೆ.</p><p>ರಾಷ್ಟ್ರದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಗಡಿಯಾಚೆಗಿನ ಪ್ರಾಯೋಜಿತ ಭಯೋತ್ಪಾದನೆಯನ್ನು ನಾವು ನಿರ್ಲಕ್ಷಿಸಬಾರದು. ಇದು ಇಡೀ ವಿಶ್ವ ವ್ಯವಸ್ಥೆಗೆ ದೊಡ್ಡ ಸವಾಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p><p>ಪ್ರಸ್ತುತ ಜಗತ್ತು ಏಕಪಕ್ಷೀಯ ನಿರ್ಧಾರಗಳು ಮತ್ತು ಹೆಚ್ಚುತ್ತಿರುವ ಸಂಘರ್ಷಗಳಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಉಗ್ರವಾದ ಮತ್ತು ಮೂಲಭೂತವಾದವು ಜಾಗತಿಕ ಸಮಸ್ಯೆಯಾಗಿದೆ ಎಂದಿದ್ದಾರೆ.</p>.ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ .'ಮ್ಯಾರಥಾನ್' ಎನ್ನುವ ದೂರದ ಓಟದ ಸವಾಲು ಎದುರಿಸುವ ಮುನ್ನ ಇದನ್ನೊಮ್ಮೆ ಓದಿ.. .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>