<p><strong>ನವದೆಹಲಿ:</strong> ಅಗಲಿದ ಗಣ್ಯರ ನೆನಪಿಗೆ ಒಂದು ನಿಮಿಷ ಮೌನ ಆಚರಿಸಿದ ಬಳಿಕ ರಾಜ್ಯಸಭೆ ಕಲಾಪವನ್ನು ನಾಳೆಗೆ (ಶುಕ್ರವಾರ) ಮುಂದೂಡಲಾಯಿತು.</p><p>ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆಯ ಮಧ್ಯೆ ಕಲಾಪವನ್ನು ಮುಂದೂಡಲಾಯಿತು.</p><p>ಸದನ ಸಮಾವೇಶಗೊಳ್ಳುತ್ತಿದ್ದಂತೆ, ನೂತನವಾಗಿ ಆಯ್ಕೆಯಾದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.</p><p>ನಿಧನರಾದ ಗಾಯಕಿ ಆಶಾ ಭೋಸ್ಲೆ, ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ಮೊಹ್ಸಿನಾ ಕಿದ್ವಾಯಿ ಅವರ ನೆನಪಿಗಾಗಿ ಸದನವು ಒಂದು ನಿಮಿಷ ಮೌನಾಚರಣೆ ಮಾಡಿತು.</p>. <p>ಸಭಾಪತಿ ಸಿ.ಪಿ.ರಾಧಾಕೃಷ್ಣನ್ ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಇತ್ತೀಚಿನ ಪ್ರಗತಿಯನ್ನು ಶ್ಲಾಘಿಸಿದರು. ತಮಿಳುನಾಡಿನ ಕಲ್ಪಕಂನಲ್ಲಿ ಪರಮಾಣ ವಿದ್ಯುತ್ ಸ್ಥಾವರದ ಫಾಸ್ಟ್ ಬ್ರೀಡರ್ ರಿಯಾಕ್ಟರ್ ಮೊದಲ ಬಾರಿಗೆ ಕಾರ್ಯಾಚರಣೆ ಸ್ಥಿತಿ ತಲುಪಿದ ಐತಿಹಾಸಿಕ ಸಾಧನೆಯನ್ನು ಉಲ್ಲೇಖಿಸಿದರು.</p><p>ಭಾರತವು ಅಧಿಕೃತವಾಗಿ ಮೂರು ಹಂತಗಳ ಪರಮಾಣು ಶಕ್ತಿ ಕಾರ್ಯಕ್ರಮದಲ್ಲಿ ಎರಡನೇ ಹಂತ ಪ್ರವೇಶಿಸಿದೆ ಎಂದು ಅವರು ತಿಳಿಸಿದರು.</p><p>ಇದಾದ ನಂತರ ಸದನವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.</p>.ವಿಶ್ಲೇಷಣೆ | ‘ನಾಯಕತ್ವ’ ನಾಯಿಕೊಡೆ ಅಲ್ಲ!.ಆಳ–ಅಗಲ | ಮತ ಸಮರ: ಎಸ್ಐಆರ್ಗೆ ನಲುಗಿದ ಪಶ್ಚಿಮ ಬಂಗಾಳ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಗಲಿದ ಗಣ್ಯರ ನೆನಪಿಗೆ ಒಂದು ನಿಮಿಷ ಮೌನ ಆಚರಿಸಿದ ಬಳಿಕ ರಾಜ್ಯಸಭೆ ಕಲಾಪವನ್ನು ನಾಳೆಗೆ (ಶುಕ್ರವಾರ) ಮುಂದೂಡಲಾಯಿತು.</p><p>ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆಯ ಮಧ್ಯೆ ಕಲಾಪವನ್ನು ಮುಂದೂಡಲಾಯಿತು.</p><p>ಸದನ ಸಮಾವೇಶಗೊಳ್ಳುತ್ತಿದ್ದಂತೆ, ನೂತನವಾಗಿ ಆಯ್ಕೆಯಾದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.</p><p>ನಿಧನರಾದ ಗಾಯಕಿ ಆಶಾ ಭೋಸ್ಲೆ, ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ಮೊಹ್ಸಿನಾ ಕಿದ್ವಾಯಿ ಅವರ ನೆನಪಿಗಾಗಿ ಸದನವು ಒಂದು ನಿಮಿಷ ಮೌನಾಚರಣೆ ಮಾಡಿತು.</p>. <p>ಸಭಾಪತಿ ಸಿ.ಪಿ.ರಾಧಾಕೃಷ್ಣನ್ ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಇತ್ತೀಚಿನ ಪ್ರಗತಿಯನ್ನು ಶ್ಲಾಘಿಸಿದರು. ತಮಿಳುನಾಡಿನ ಕಲ್ಪಕಂನಲ್ಲಿ ಪರಮಾಣ ವಿದ್ಯುತ್ ಸ್ಥಾವರದ ಫಾಸ್ಟ್ ಬ್ರೀಡರ್ ರಿಯಾಕ್ಟರ್ ಮೊದಲ ಬಾರಿಗೆ ಕಾರ್ಯಾಚರಣೆ ಸ್ಥಿತಿ ತಲುಪಿದ ಐತಿಹಾಸಿಕ ಸಾಧನೆಯನ್ನು ಉಲ್ಲೇಖಿಸಿದರು.</p><p>ಭಾರತವು ಅಧಿಕೃತವಾಗಿ ಮೂರು ಹಂತಗಳ ಪರಮಾಣು ಶಕ್ತಿ ಕಾರ್ಯಕ್ರಮದಲ್ಲಿ ಎರಡನೇ ಹಂತ ಪ್ರವೇಶಿಸಿದೆ ಎಂದು ಅವರು ತಿಳಿಸಿದರು.</p><p>ಇದಾದ ನಂತರ ಸದನವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.</p>.ವಿಶ್ಲೇಷಣೆ | ‘ನಾಯಕತ್ವ’ ನಾಯಿಕೊಡೆ ಅಲ್ಲ!.ಆಳ–ಅಗಲ | ಮತ ಸಮರ: ಎಸ್ಐಆರ್ಗೆ ನಲುಗಿದ ಪಶ್ಚಿಮ ಬಂಗಾಳ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>