<p><strong>ನವದೆಹಲಿ</strong>: ಸಂಸತ್ತಿನ ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಸದಸ್ಯರು ಪೆಗಾಸಸ್, ನೂತನ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಗದ್ದಲ ಉಂಟಾದ ಪರಿಣಾಮ ಕಲಾಪವನ್ನು ಮಧ್ಯಾಹ್ನ 2 ಗಂಟೆವರೆಗೆ ಮಂದೂಡಲಾಗಿದೆ.</p>.<p>ರಾಜ್ಯಸಭೆಯಲ್ಲಿ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಇತರ ಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಪ್ರತಿಭಟಿಸಿದರೆ, ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರು ಸ್ಪೀಕರ್ ಪೀಠದ ಮುಂಭಾಗಕ್ಕೆ ತೆರಳಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಗೌರವ ನಮನ ಸಲ್ಲಿಸಲಾಯಿತು. ಟೋಕಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು ಅವರನ್ನು ಅಭಿನಂದಿಸಲಾಯಿತು.</p>.<p>ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 2ಕ್ಕೆ ಮುಂದೂಡಿದ ಸಭಾಧ್ಯಕ್ಷ ಎಂ.ವೆಂಕಯ್ಯನಾಯ್ಡು, ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಚರ್ಚಿಸದಂತೆಸದಸ್ಯರನ್ನು ತಡೆಯಲಾಗಿದೆ. ದಿನದಿಂದ ದಿನಕ್ಕೆ ನಾವು ಅಸಹಾಯಕರಾಗುತ್ತಿದ್ದೇವೆ’ ಎಂದರು.</p>.<p>ಲೋಕಸಭೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಕಲಾಪ ನಡೆದಿದ್ದು, ಪ್ರಶ್ನೋತ್ತರ ಅವಧಿಯಲ್ಲಿ ಕೆಲವೊಂದು ಪ್ರಶ್ನೆಗಳಿಗೆ ಉತ್ತರಿಸಲಾಯಿತು. ಬಳಿಕ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 2ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಸತ್ತಿನ ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಸದಸ್ಯರು ಪೆಗಾಸಸ್, ನೂತನ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಗದ್ದಲ ಉಂಟಾದ ಪರಿಣಾಮ ಕಲಾಪವನ್ನು ಮಧ್ಯಾಹ್ನ 2 ಗಂಟೆವರೆಗೆ ಮಂದೂಡಲಾಗಿದೆ.</p>.<p>ರಾಜ್ಯಸಭೆಯಲ್ಲಿ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಇತರ ಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಪ್ರತಿಭಟಿಸಿದರೆ, ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರು ಸ್ಪೀಕರ್ ಪೀಠದ ಮುಂಭಾಗಕ್ಕೆ ತೆರಳಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಗೌರವ ನಮನ ಸಲ್ಲಿಸಲಾಯಿತು. ಟೋಕಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು ಅವರನ್ನು ಅಭಿನಂದಿಸಲಾಯಿತು.</p>.<p>ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 2ಕ್ಕೆ ಮುಂದೂಡಿದ ಸಭಾಧ್ಯಕ್ಷ ಎಂ.ವೆಂಕಯ್ಯನಾಯ್ಡು, ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಚರ್ಚಿಸದಂತೆಸದಸ್ಯರನ್ನು ತಡೆಯಲಾಗಿದೆ. ದಿನದಿಂದ ದಿನಕ್ಕೆ ನಾವು ಅಸಹಾಯಕರಾಗುತ್ತಿದ್ದೇವೆ’ ಎಂದರು.</p>.<p>ಲೋಕಸಭೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಕಲಾಪ ನಡೆದಿದ್ದು, ಪ್ರಶ್ನೋತ್ತರ ಅವಧಿಯಲ್ಲಿ ಕೆಲವೊಂದು ಪ್ರಶ್ನೆಗಳಿಗೆ ಉತ್ತರಿಸಲಾಯಿತು. ಬಳಿಕ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 2ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>