ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ನಡ್ಡಾ, ಅಶೋಕ್ ಚವ್ಹಾಣ್‌ ಕಣಕ್ಕೆ

Published 14 ಫೆಬ್ರುವರಿ 2024, 9:51 IST
Last Updated 14 ಫೆಬ್ರುವರಿ 2024, 9:51 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಎರಡು ದಿನಗಳ ಹಿಂದೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವ್ಹಾಣ್‌ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಮಹಾರಾಷ್ಟ್ರದಿಂದ ರಾಜ್ಯಸಭೆಗೆ ಸ್ಪರ್ಧಿಸಲಿದ್ದಾರೆ.

ಗುಜರಾತ್‌ನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ , ಗೋವಿಂದಭಾಯಿ ಧೋಲಾಕಿಯಾ, ಮಾಯಾಂಕ್ ಭಾಯ್ ನಾಯಕ್‌, ಮತ್ತು ಡಾ. ಜಶ್ವಂತ್‌ ಸಿನ್ಹ ಪರ್ಮಾರ್‌ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಮಹಾರಾಷ್ಟ್ರದಿಂದ ಚವ್ಹಾಣ್‌ ಸೇರಿದಂತೆ ಮೇಧಾ ಕುಲಕರ್ಣಿ, ಅಜಿತ್ ಗೋಪ್ಛಡೆ ಸ್ಪರ್ಧಿಸಲಿದ್ದಾರೆ.

ಒಟ್ಟು 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ.

ಮಧ್ಯಪ್ರದೇಶದಿಂದ ಕೇಂದ್ರ ಸಚಿವ ಎಲ್. ಮುರುಗನ್, ಉಮೇಶ್‌ನಾಥ್ ಮಹಾರಾಜ್, ಮಾಯಾ ನರೋಲಿಯಾ, ಬನ್ಸಿಲಾಲ್‌ ಗುರ್ಜರ್ ಹಾಗೂ ಒಡಿಶಾದಿಂದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಈಗಾಗಲೇ ಟಿಕೆಟ್‌ ಘೋಷಿಸಿದೆ. ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವರಿಗೆ ಟಿಕೆಟ್ ನೀಡಲಾಗಿದೆ.

ಕೇಂದ್ರದ ಮಾಜಿ ಸಚಿವ ಆರ್‌.ಪಿ.ಎನ್. ಸಿಂಗ್, ಉತ್ತರಾಖಂಡ ಬಿಜೆಪಿ ಘಟಕದ ಅಧ್ಯಕ್ಷ ಮಹೇಂದ್ರ ಭಟ್ ಅವರ ಹೆಸರು ಅಭ್ಯರ್ಥಿಗಳ ಪಟ್ಟಿಯಲ್ಲಿ ಇದೆ.

ರಾಜ್ಯಸಭೆಯ ಸದಸ್ಯತ್ವದ ಅವಧಿ ಪೂರ್ಣಗೊಳ್ಳುತ್ತಿರುವ ಕೇಂದ್ರ ಸಚಿವರಲ್ಲಿ ಯಾರೊಬ್ಬರ ಹೆಸರೂ ಪಟ್ಟಿಯಲ್ಲಿ ಇಲ್ಲ. ಇವರಲ್ಲಿ ಹೆಚ್ಚಿನವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT