1991ರ ಕಾನೂನಿಗೆ ಬದಲಾಗಿ ಈ ಮಸೂದೆಯನ್ನು ಆಗಸ್ಟ್ 10ರಂದು ಸರ್ಕಾರ ಮಂಡಿಸಿತ್ತು.
ಮಸೂದೆಯ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಕಾನೂನು ಸಚಿವ ಅರ್ಜುನ್ ಮೇಘಾವಾಲ್, ಈ ಹಿಂದಿನ ಕಾನೂನಿನಲ್ಲಿ ಲೋಪಗಳು ಇದ್ದಿದ್ದರಿಂದ ಹೊಸ ಮಸೂದೆ ಮಂಡಿಸಲಾಗಿದೆ ಎಂದರು.
ಮುಖ್ಯ ಚುನಾವಣಾಧಿಕಾರಿ ಹಾಗೂ ಚುನಾವಾಣಾಧಿಕಾರಿಗಳ ನೇಮಕಾತಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ತಪ್ಪಿಸಿಕೊಳ್ಳಲು ಈ ಮಸೂದೆಯನ್ನು ತರಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪಗಳನ್ನು ಅವರು ತಳ್ಳಿಹಾಕಿದರು.