<p><strong>ನವದೆಹಲಿ:</strong> ‘ರಾಜ್ಯಸಭೆಗೆ ಹೋಗುವ ಯಾವುದೇ ಇಚ್ಛೆ ಹೊಂದಿಲ್ಲ’ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.</p><p>ಪಂಜಾಬ್ನ ಪಶ್ಚಿಮ ಲೂಧಿಯಾನ ಕ್ಷೇತ್ರದ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸಿದ್ದ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಗೆಲುವು ಪಡೆದಿದ್ದಾರೆ. ಶಾಸಕರಾಗಿ ಆಯ್ಕೆಯಾಗಿರುವ ಕಾರಣ, ಅರೋರಾ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ. </p><p>ನವದೆಹಲಿಯಲ್ಲಿ ಕೇಜ್ರಿವಾಲ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ‘ರಾಜ್ಯಸಭಾ ಸ್ಥಾನಕ್ಕೆ ನನ್ನ ಹೆಸರನ್ನು ಕೆಲವರು ಹೇಳುತ್ತಿದ್ದಾರೆ. ರಾಜ್ಯಸಭೆಗೆ ಹೋಗುವುದಿಲ್ಲ ಎಂದು ನಾನು ನಿಮಗೆ ಸ್ಪಷ್ಟಪಡಿಸುತ್ತೇನೆ. ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯು ಅಭ್ಯರ್ಥಿಯ ಹೆಸರು ಸೂಚಿಸಲಿದೆ’ ಎಂದು ತಿಳಿಸಿದರು.</p><p><strong>ಉಪಚುನಾವಣೆ ಗೆಲುವು ಸೆಮಿಫೈನಲ್ ಇದ್ದಂತೆ:</strong> ಗುಜರಾತ್, ಪಂಜಾಬ್ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನ ಕುರಿತು ಸಂತಸ ವ್ಯಕ್ತಪಡಿಸಿರುವ ಅರವಿಂದ್ ಕೇಜ್ರಿವಾಲ್, ಈ ಗೆಲುವು 2027ರ ಚುನಾವಣೆಯ ಸೆಮಿಫೈನಲ್ ಎಂದು ತಿಳಿಸಿದ್ದಾರೆ. ಈ ಫಲಿತಾಂಶದಿಂದ ಬಿಜೆಪಿ, ಕಾಂಗ್ರೆಸ್ ಪಕ್ಷವನ್ನು ಜನರು ಸ್ಪಷ್ಟವಾಗಿ ತಿರಸ್ಕರಿಸಿರುವ ಸಂಕೇತ ನೀಡಿದ್ದಾರೆ ಎಂದರು.</p><p>ಕೇಜ್ರಿವಾಲ್ ಹೇಳಿಕೆ ಬೆನ್ನಲ್ಲೇ, ರಾಜ್ಯಸಭೆಗೆ ಪಕ್ಷದ ಮುಖಂಡರಾದ ಮನೀಶ್ ಸಿಸೋಡಿಯಾ ಹಾಗೂ ಸತ್ಯೇಂದರ ಜೈನ್ ಹೆಸರು ಮುಂಚೂಣಿಗೆ ಬಂದಿದೆ.</p><p>ಪಂಜಾಬ್ ಘಟಕದ ಉಸ್ತುವಾರಿಯನ್ನಾಗಿ ಸಿಸೊಡಿಯಾ ಅವರನ್ನು ಎಎಪಿ ನಿಯೋಜಿಸಿತ್ತು. ಜೈನ್ ಅವರನ್ನು ಸಹ ಉಸ್ತುವಾರಿಯನ್ನಾಗಿ ನಿಯೋಜಿಸಲಾಗಿತ್ತು. ಈ ಇಬ್ಬರು ಕೇಜ್ರಿವಾಲ್ ಆಪ್ತರಾಗಿದ್ದಾರೆ. ಸಿಸೋಡಿಯಾ ಅವರು ಬಹುತೇಕ ಸಮಯ ಪಂಜಾಬ್ನಲ್ಲೇ ಕಳೆದಿದ್ದಾರೆ. ಹೀಗಾಗಿ ಲೂಧಿಯಾನ ಕ್ಷೇತ್ರದ ಗೆಲುವಿನಲ್ಲಿ ಇವರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ರಾಜ್ಯಸಭೆಗೆ ಸಿಸೋಡಿಯಾ ಅವರ ಹೆಸರೇ ಬಹುತೇಕ ಅಂತಿಮಗೊಳ್ಳಲಿದೆ ಎಂದೆನ್ನಲಾಗಿದೆ.</p><p>ಆದರೆ ಪಕ್ಷದ ಮುಖಂಡರು ಇದನ್ನು ಅಲ್ಲಗಳೆದಿದ್ದು, ಅಭ್ಯರ್ಥಿಯ ನಿರ್ಧಾರವನ್ನು ಪಕ್ಷವೇ ಮಾಡಲಿದೆ ಎಂದಿದ್ದಾರೆ. </p><p>‘ರಾಜ್ಯದಲ್ಲಿ ಪರಿವರ್ತನೆ ತರುವುದು ಪಕ್ಷದ ಸದ್ಯದ ಗುರಿಯಾಗಿದೆ. ಅವುಗಳಲ್ಲಿ ಪ್ರಮುಖವಾದ ಶಿಕ್ಷಣ ಕ್ಷೇತ್ರದಲ್ಲಿ ಪಕ್ಷ ಹೆಚ್ಚು ತೊಡಗಿಸಿಕೊಳ್ಳಲು ಬಯಸಿದೆ. ರಾಜ್ಯಸಭಾ ಚುನಾವಣೆ ಎಂದು ನಡೆಯುವುದು ಎಂಬುದು ಗೊತ್ತಿಲ್ಲ. ಹೀಗಾಗಿ ಅಭ್ಯರ್ಥಿಯ ಹೆಸರನ್ನು ಈಗಲೇ ಅಂತಿಮಗೊಳಿಸಲಾಗದು’ ಎಂದು ಮುಖಂಡರು ಹೇಳಿದ್ದಾರೆ. </p><p>ಪಂಜಾಬ್ನ ಮುಖಂಡರೊಬ್ಬರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗುವುದು ಎಂದು ಪಕ್ಷದ ಮತ್ತೊಬ್ಬ ಮುಖಂಡ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ರಾಜ್ಯಸಭೆಗೆ ಹೋಗುವ ಯಾವುದೇ ಇಚ್ಛೆ ಹೊಂದಿಲ್ಲ’ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.</p><p>ಪಂಜಾಬ್ನ ಪಶ್ಚಿಮ ಲೂಧಿಯಾನ ಕ್ಷೇತ್ರದ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸಿದ್ದ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಗೆಲುವು ಪಡೆದಿದ್ದಾರೆ. ಶಾಸಕರಾಗಿ ಆಯ್ಕೆಯಾಗಿರುವ ಕಾರಣ, ಅರೋರಾ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ. </p><p>ನವದೆಹಲಿಯಲ್ಲಿ ಕೇಜ್ರಿವಾಲ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ‘ರಾಜ್ಯಸಭಾ ಸ್ಥಾನಕ್ಕೆ ನನ್ನ ಹೆಸರನ್ನು ಕೆಲವರು ಹೇಳುತ್ತಿದ್ದಾರೆ. ರಾಜ್ಯಸಭೆಗೆ ಹೋಗುವುದಿಲ್ಲ ಎಂದು ನಾನು ನಿಮಗೆ ಸ್ಪಷ್ಟಪಡಿಸುತ್ತೇನೆ. ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯು ಅಭ್ಯರ್ಥಿಯ ಹೆಸರು ಸೂಚಿಸಲಿದೆ’ ಎಂದು ತಿಳಿಸಿದರು.</p><p><strong>ಉಪಚುನಾವಣೆ ಗೆಲುವು ಸೆಮಿಫೈನಲ್ ಇದ್ದಂತೆ:</strong> ಗುಜರಾತ್, ಪಂಜಾಬ್ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನ ಕುರಿತು ಸಂತಸ ವ್ಯಕ್ತಪಡಿಸಿರುವ ಅರವಿಂದ್ ಕೇಜ್ರಿವಾಲ್, ಈ ಗೆಲುವು 2027ರ ಚುನಾವಣೆಯ ಸೆಮಿಫೈನಲ್ ಎಂದು ತಿಳಿಸಿದ್ದಾರೆ. ಈ ಫಲಿತಾಂಶದಿಂದ ಬಿಜೆಪಿ, ಕಾಂಗ್ರೆಸ್ ಪಕ್ಷವನ್ನು ಜನರು ಸ್ಪಷ್ಟವಾಗಿ ತಿರಸ್ಕರಿಸಿರುವ ಸಂಕೇತ ನೀಡಿದ್ದಾರೆ ಎಂದರು.</p><p>ಕೇಜ್ರಿವಾಲ್ ಹೇಳಿಕೆ ಬೆನ್ನಲ್ಲೇ, ರಾಜ್ಯಸಭೆಗೆ ಪಕ್ಷದ ಮುಖಂಡರಾದ ಮನೀಶ್ ಸಿಸೋಡಿಯಾ ಹಾಗೂ ಸತ್ಯೇಂದರ ಜೈನ್ ಹೆಸರು ಮುಂಚೂಣಿಗೆ ಬಂದಿದೆ.</p><p>ಪಂಜಾಬ್ ಘಟಕದ ಉಸ್ತುವಾರಿಯನ್ನಾಗಿ ಸಿಸೊಡಿಯಾ ಅವರನ್ನು ಎಎಪಿ ನಿಯೋಜಿಸಿತ್ತು. ಜೈನ್ ಅವರನ್ನು ಸಹ ಉಸ್ತುವಾರಿಯನ್ನಾಗಿ ನಿಯೋಜಿಸಲಾಗಿತ್ತು. ಈ ಇಬ್ಬರು ಕೇಜ್ರಿವಾಲ್ ಆಪ್ತರಾಗಿದ್ದಾರೆ. ಸಿಸೋಡಿಯಾ ಅವರು ಬಹುತೇಕ ಸಮಯ ಪಂಜಾಬ್ನಲ್ಲೇ ಕಳೆದಿದ್ದಾರೆ. ಹೀಗಾಗಿ ಲೂಧಿಯಾನ ಕ್ಷೇತ್ರದ ಗೆಲುವಿನಲ್ಲಿ ಇವರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ರಾಜ್ಯಸಭೆಗೆ ಸಿಸೋಡಿಯಾ ಅವರ ಹೆಸರೇ ಬಹುತೇಕ ಅಂತಿಮಗೊಳ್ಳಲಿದೆ ಎಂದೆನ್ನಲಾಗಿದೆ.</p><p>ಆದರೆ ಪಕ್ಷದ ಮುಖಂಡರು ಇದನ್ನು ಅಲ್ಲಗಳೆದಿದ್ದು, ಅಭ್ಯರ್ಥಿಯ ನಿರ್ಧಾರವನ್ನು ಪಕ್ಷವೇ ಮಾಡಲಿದೆ ಎಂದಿದ್ದಾರೆ. </p><p>‘ರಾಜ್ಯದಲ್ಲಿ ಪರಿವರ್ತನೆ ತರುವುದು ಪಕ್ಷದ ಸದ್ಯದ ಗುರಿಯಾಗಿದೆ. ಅವುಗಳಲ್ಲಿ ಪ್ರಮುಖವಾದ ಶಿಕ್ಷಣ ಕ್ಷೇತ್ರದಲ್ಲಿ ಪಕ್ಷ ಹೆಚ್ಚು ತೊಡಗಿಸಿಕೊಳ್ಳಲು ಬಯಸಿದೆ. ರಾಜ್ಯಸಭಾ ಚುನಾವಣೆ ಎಂದು ನಡೆಯುವುದು ಎಂಬುದು ಗೊತ್ತಿಲ್ಲ. ಹೀಗಾಗಿ ಅಭ್ಯರ್ಥಿಯ ಹೆಸರನ್ನು ಈಗಲೇ ಅಂತಿಮಗೊಳಿಸಲಾಗದು’ ಎಂದು ಮುಖಂಡರು ಹೇಳಿದ್ದಾರೆ. </p><p>ಪಂಜಾಬ್ನ ಮುಖಂಡರೊಬ್ಬರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗುವುದು ಎಂದು ಪಕ್ಷದ ಮತ್ತೊಬ್ಬ ಮುಖಂಡ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>