<p><strong>ನವದೆಹಲಿ:</strong> ಸಮಾಜವಾದಿ ಪಕ್ಷದ ಮಾಜಿ ನಾಯಕ,ರಾಜ್ಯಸಭಾ ಸದಸ್ಯ ಅಮರ್ ಸಿಂಗ್ (64) ಶನಿವಾರ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಪುರದ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.</p>.<p>2013ರಲ್ಲಿ ದುಬೈಗೆ ತೆರಳಿದ್ದಾಗಅಮರ್ ಸಿಂಗ್ ಅವರಿಗೆ ಕಿಡ್ನಿ ವೈಫಲ್ಯ ಉಂಟಾಗಿತ್ತು. ಬಳಿಕ ರಾಜಕೀಯದಿಂದ ದೂರವುಳಿದಿದ್ದ ಅವರು 2016ರಲ್ಲಿ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದರು. ಅವರು ಪತ್ನಿ ಪಂಕಜಾ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ವರ್ಷ ಮಾರ್ಚ್ನಲ್ಲಿ ‘ಅಮರ್ ಸಿಂಗ್ ನಿಧನ’ ಎಂಬ ವದಂತಿ ಹರಡಿತ್ತು. ಆಗ, ‘ಟೈಗರ್ ಜಿಂದಾ ಹೇ’ ಎಂಬ ಸಂದೇಶದೊಂದಿಗೆ ಅವರೇ ಸ್ಪಷ್ಟನೆ ನೀಡಿದ್ದರು.</p>.<p><strong>ತಿಲಕರಿಗೆ ಗೌರವ ಸಲ್ಲಿಸಿ ಟ್ವೀಟ್ ಮಾಡಿದ್ದ ಸಿಂಗ್:</strong>ಸ್ವಾತಂತ್ರ್ಯ ಹೋರಾಟಗಾರಬಾಲಗಂಗಾಧರ ತಿಲಕ್ ಅವರ ಪುಣ್ಯ ತಿಥಿ ಸಂದರ್ಭದಲ್ಲಿ ಇಂದು ಬೆಳಿಗ್ಗೆ ಅಮರ್ ಸಿಂಗ್ ಟ್ವೀಟ್ ಮಾಡಿದ್ದರು. ಬಕ್ರೀದ್ ಶುಭಾಶಯ ಕೋರಿ ಟ್ವೀಟ್ ಮಾಡಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/amar-singh-fighting-a-battle-of-life-and-death-i-regret-for-my-over-reaction-against-amit-ji-family-706266.html" target="_blank">ಅಮರ್ ಸಿಂಗ್ ಜೀವನ್ಮರಣ ಹೋರಾಟ: ಬಚ್ಚನ್ ಕುಟುಂಬ ವಿರುದ್ಧದ ಹೇಳಿಕೆಗಳಿಗೆ ವಿಷಾದ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಮಾಜವಾದಿ ಪಕ್ಷದ ಮಾಜಿ ನಾಯಕ,ರಾಜ್ಯಸಭಾ ಸದಸ್ಯ ಅಮರ್ ಸಿಂಗ್ (64) ಶನಿವಾರ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಪುರದ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.</p>.<p>2013ರಲ್ಲಿ ದುಬೈಗೆ ತೆರಳಿದ್ದಾಗಅಮರ್ ಸಿಂಗ್ ಅವರಿಗೆ ಕಿಡ್ನಿ ವೈಫಲ್ಯ ಉಂಟಾಗಿತ್ತು. ಬಳಿಕ ರಾಜಕೀಯದಿಂದ ದೂರವುಳಿದಿದ್ದ ಅವರು 2016ರಲ್ಲಿ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದರು. ಅವರು ಪತ್ನಿ ಪಂಕಜಾ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ವರ್ಷ ಮಾರ್ಚ್ನಲ್ಲಿ ‘ಅಮರ್ ಸಿಂಗ್ ನಿಧನ’ ಎಂಬ ವದಂತಿ ಹರಡಿತ್ತು. ಆಗ, ‘ಟೈಗರ್ ಜಿಂದಾ ಹೇ’ ಎಂಬ ಸಂದೇಶದೊಂದಿಗೆ ಅವರೇ ಸ್ಪಷ್ಟನೆ ನೀಡಿದ್ದರು.</p>.<p><strong>ತಿಲಕರಿಗೆ ಗೌರವ ಸಲ್ಲಿಸಿ ಟ್ವೀಟ್ ಮಾಡಿದ್ದ ಸಿಂಗ್:</strong>ಸ್ವಾತಂತ್ರ್ಯ ಹೋರಾಟಗಾರಬಾಲಗಂಗಾಧರ ತಿಲಕ್ ಅವರ ಪುಣ್ಯ ತಿಥಿ ಸಂದರ್ಭದಲ್ಲಿ ಇಂದು ಬೆಳಿಗ್ಗೆ ಅಮರ್ ಸಿಂಗ್ ಟ್ವೀಟ್ ಮಾಡಿದ್ದರು. ಬಕ್ರೀದ್ ಶುಭಾಶಯ ಕೋರಿ ಟ್ವೀಟ್ ಮಾಡಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/amar-singh-fighting-a-battle-of-life-and-death-i-regret-for-my-over-reaction-against-amit-ji-family-706266.html" target="_blank">ಅಮರ್ ಸಿಂಗ್ ಜೀವನ್ಮರಣ ಹೋರಾಟ: ಬಚ್ಚನ್ ಕುಟುಂಬ ವಿರುದ್ಧದ ಹೇಳಿಕೆಗಳಿಗೆ ವಿಷಾದ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>