‘ನಾನು ಇಡೀ ಸದನದ ಪರವಾಗಿ ಹರಿವಂಶ ನಾರಾಯಣ ಸಿಂಗ್ ಅವರನ್ನು ಅಭಿನಂದಿಸುತ್ತೇನೆ. ಅವರು ಬರವಣಿಗೆಯ ಪ್ರತಿಭೆ ಮೂಲಕ ಆಶೀರ್ವಾದ ಪಡೆದಿದ್ದಾರೆ’ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ‘ಜತೆಗೆ, ಹರಿವಂಶ ನಾರಾಯಣ ಸಿಂಗ್ಅವರು ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ನೆಚ್ಚಿನ ವ್ಯಕ್ತಿಯಾಗಿದ್ದವರು’ ಎಂದು ಪ್ರಶಂಸೆ ವ್ಯಕ್ತಪಡಿಸಿದರು.