<p><strong>ನವದೆಹಲಿ:</strong> ಬಿಹಾರ ಮತ್ತು ಇತರ ರಾಜ್ಯಗಳಲ್ಲಿನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ರಾಜ್ಯಸಭೆಯ ಸಭಾಪತಿಯ ಪೀಠದ ಮುಂಭಾಗ ಪ್ರತಿಭಟಿಸಲು ಮುಂದಾದಾಗ ಮಾರ್ಷಲ್ಗಳು ಅಡ್ಡಿಪಡಿಸಿದ್ದು ಸರಿಯಲ್ಲ ಎಂದು ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಸದಸ್ಯರು ಶುಕ್ರವಾರ ಆಕ್ಷೇಪಿಸಿದರು.</p>.<p>ರಾಜ್ಯಸಭೆಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಏನಾದರೂ ವಶಕ್ಕೆ ಪಡೆದಿದೆಯೇ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. </p>.<p>ಸದನವು ಮಧ್ಯಾಹ್ನ 12 ಗಂಟೆಗೆ ಮತ್ತೆ ಸೇರಿದಾಗ, ತೃಣಮೂಲ ಕಾಂಗ್ರೆಸ್, ಡಿಎಂಕೆ ಸದಸ್ಯರು ಸಭಾಪತಿಯ ಪೀಠದ ಮುಂಭಾಗ ಪ್ರವೇಶಿಸಲು ಮುಂದಾದರು. ಆಗ ಅವರನ್ನು ಮಾರ್ಷಲ್ಗಳು ತಡೆದರು. ಇದು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. </p>.<p>ಮಾರ್ಷಲ್ಗಳ ಕ್ರಮವನ್ನು ವಿರೋಧಿಸಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉಪಸಭಾಪತಿ ಹರಿವಂಶ್ ಅವರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. </p>.<p>‘ಸದಸ್ಯರು ತಮ್ಮ ಪ್ರಜಾಪ್ರಭುತ್ವದ ಹಕ್ಕುಗಳನ್ನು ಚಲಾಯಿಸುವಾಗ ಸಿಐಎಸ್ಎಫ್ ಸಿಬ್ಬಂದಿ ಸದನದೊಳಗೆ ಓಡೋಡಿ ಬರುವುದನ್ನು ನೋಡಿ ಆಶ್ಚರ್ಯ ಮತ್ತು ಆಘಾತವಾಯಿತು’ ಎಂದು ಖರ್ಗೆ ಪತ್ರದಲ್ಲಿ ಹೇಳಿದ್ದಾರೆ. </p>.<p>‘ಗುರುವಾರ ಮತ್ತು ಶುಕ್ರವಾರ ಎರಡೂ ದಿನವೂ ಈ ದೃಶ್ಯಗಳನ್ನು ನೋಡಿದ್ದೇವೆ. ನಮ್ಮ ಸಂಸತ್ತು ಈ ಮಟ್ಟಕ್ಕೆ ಇಳಿದಿದೆಯೇ? ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಭವಿಷ್ಯದಲ್ಲಿ ಸಿಐಎಸ್ಎಫ್ ಸಿಬ್ಬಂದಿಯಿಂದ ಈ ರೀತಿಯ ವರ್ತನೆ ಮರುಕಳಿಸಬಾರದು ಎಂದು ನಿರೀಕ್ಷಿಸುತ್ತೇವೆ’ ಎಂದು ಅವರು ತಿಳಿಸಿದ್ದಾರೆ.</p>.<div><blockquote>ರಾಜ್ಯಸಭೆಯ ಕಲಾಪಗಳನ್ನು ತಡೆಯಲು ಕೆಲ ಸದಸ್ಯರು ಆಕ್ರಮಣಕಾರಿಯಾಗಿ ನಡೆದುಕೊಂಡರು. ಅದಾಗ್ಯೂ ಸದನದೊಳಗಿನ ಭದ್ರತಾ ವಿಷಯ ಸಭಾಪತಿ ನೋಡಿಕೊಳ್ಳುತ್ತಾರೆಯೇ ಹೊರತು ಸರ್ಕಾರವಲ್ಲ </blockquote><span class="attribution">– ಕಿರಣ್ ರಿಜಿಜು ಸಂಸದೀಯ ವ್ಯವಹಾರಗಳ ಸಚಿವ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಹಾರ ಮತ್ತು ಇತರ ರಾಜ್ಯಗಳಲ್ಲಿನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ರಾಜ್ಯಸಭೆಯ ಸಭಾಪತಿಯ ಪೀಠದ ಮುಂಭಾಗ ಪ್ರತಿಭಟಿಸಲು ಮುಂದಾದಾಗ ಮಾರ್ಷಲ್ಗಳು ಅಡ್ಡಿಪಡಿಸಿದ್ದು ಸರಿಯಲ್ಲ ಎಂದು ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಸದಸ್ಯರು ಶುಕ್ರವಾರ ಆಕ್ಷೇಪಿಸಿದರು.</p>.<p>ರಾಜ್ಯಸಭೆಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಏನಾದರೂ ವಶಕ್ಕೆ ಪಡೆದಿದೆಯೇ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. </p>.<p>ಸದನವು ಮಧ್ಯಾಹ್ನ 12 ಗಂಟೆಗೆ ಮತ್ತೆ ಸೇರಿದಾಗ, ತೃಣಮೂಲ ಕಾಂಗ್ರೆಸ್, ಡಿಎಂಕೆ ಸದಸ್ಯರು ಸಭಾಪತಿಯ ಪೀಠದ ಮುಂಭಾಗ ಪ್ರವೇಶಿಸಲು ಮುಂದಾದರು. ಆಗ ಅವರನ್ನು ಮಾರ್ಷಲ್ಗಳು ತಡೆದರು. ಇದು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. </p>.<p>ಮಾರ್ಷಲ್ಗಳ ಕ್ರಮವನ್ನು ವಿರೋಧಿಸಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉಪಸಭಾಪತಿ ಹರಿವಂಶ್ ಅವರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. </p>.<p>‘ಸದಸ್ಯರು ತಮ್ಮ ಪ್ರಜಾಪ್ರಭುತ್ವದ ಹಕ್ಕುಗಳನ್ನು ಚಲಾಯಿಸುವಾಗ ಸಿಐಎಸ್ಎಫ್ ಸಿಬ್ಬಂದಿ ಸದನದೊಳಗೆ ಓಡೋಡಿ ಬರುವುದನ್ನು ನೋಡಿ ಆಶ್ಚರ್ಯ ಮತ್ತು ಆಘಾತವಾಯಿತು’ ಎಂದು ಖರ್ಗೆ ಪತ್ರದಲ್ಲಿ ಹೇಳಿದ್ದಾರೆ. </p>.<p>‘ಗುರುವಾರ ಮತ್ತು ಶುಕ್ರವಾರ ಎರಡೂ ದಿನವೂ ಈ ದೃಶ್ಯಗಳನ್ನು ನೋಡಿದ್ದೇವೆ. ನಮ್ಮ ಸಂಸತ್ತು ಈ ಮಟ್ಟಕ್ಕೆ ಇಳಿದಿದೆಯೇ? ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಭವಿಷ್ಯದಲ್ಲಿ ಸಿಐಎಸ್ಎಫ್ ಸಿಬ್ಬಂದಿಯಿಂದ ಈ ರೀತಿಯ ವರ್ತನೆ ಮರುಕಳಿಸಬಾರದು ಎಂದು ನಿರೀಕ್ಷಿಸುತ್ತೇವೆ’ ಎಂದು ಅವರು ತಿಳಿಸಿದ್ದಾರೆ.</p>.<div><blockquote>ರಾಜ್ಯಸಭೆಯ ಕಲಾಪಗಳನ್ನು ತಡೆಯಲು ಕೆಲ ಸದಸ್ಯರು ಆಕ್ರಮಣಕಾರಿಯಾಗಿ ನಡೆದುಕೊಂಡರು. ಅದಾಗ್ಯೂ ಸದನದೊಳಗಿನ ಭದ್ರತಾ ವಿಷಯ ಸಭಾಪತಿ ನೋಡಿಕೊಳ್ಳುತ್ತಾರೆಯೇ ಹೊರತು ಸರ್ಕಾರವಲ್ಲ </blockquote><span class="attribution">– ಕಿರಣ್ ರಿಜಿಜು ಸಂಸದೀಯ ವ್ಯವಹಾರಗಳ ಸಚಿವ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>