<p><strong>ನವದೆಹಲಿ: ವ್ಯ</strong>ಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡುವ ಮತ್ತುಭಯೋತ್ಪಾದನಾ ಕೃತ್ಯಗಳ ತನಿಖೆ ವೇಳೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹೆಚ್ಚಿನ ಅಧಿಕಾರ ನೀಡುವ ‘ಕಾನೂನುಬಾಹಿರ ಚಟುವಟಿಕೆಗಳ ತಡೆ (ತಿದ್ದುಪಡಿ) ಮಸೂದೆ –2019’ಕ್ಕೆ ರಾಜ್ಯಸಭೆಯ ಅನುಮೋದನೆ ಶುಕ್ರವಾರ ದೊರೆತಿದೆ.</p>.<p>ಈ ಮಸೂದೆಗೆ ಈಗ ಸಂಸತ್ತಿನ ಎರಡೂ ಸದನಗಳ ಅನುಮೋದನೆ ದೊರೆತಂತಾಗಿದೆ. ಇನ್ನು ರಾಷ್ಟ್ರಪತಿಗಳ ಅಂಕಿತವಷ್ಟೇ ದೊರೆಯಬೇಕಿದೆ.</p>.<p>ಶುಕ್ರವಾರ ರಾಜ್ಯಸಭೆಯ ಕಲಾಪದ ವೇಳೆ ಮಸೂದೆ ಕುರಿತು ಚರ್ಚೆ ನಡೆಯಿತು. ಮಸೂದೆಯ ಕೆಲವು ಅಂಶಗಳ ಬಗ್ಗೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು. ಮಸೂದೆಯನ್ನು ಸಂಸತ್ತಿನ ಪರಿಶೀಲನಾ ಸಮಿತಿಗೆ ಕಳುಹಿಸುವ ನಿಲುವಳಿಯನ್ನು ಕಾಂಗ್ರೆಸ್ ಮಂಡಿಸಿತು. ಇತರ ವಿರೋಧ ಪಕ್ಷಗಳೂ ಈ ನಿಲುವಳಿಯನ್ನು ಬೆಂಬಲಿಸಿದವು. ಆದರೆ ನಿಲುವಳಿಯ ಪರವಾಗಿ 85 ಮತ್ತು ವಿರುದ್ಧವಾಗಿ 104 ಮತಗಳು ಬಂದವು. ಹೀಗಾಗಿ ನಿಲುವಳಿ ವಿಫಲವಾಯಿತು.</p>.<p>‘ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ. ಭಯೋತ್ಪಾದಕರೆಲ್ಲರೂ ಮನುಷ್ಯ ವಿರೋಧಿಗಳು. ಹೀಗಾಗಿ ಎಲ್ಲಾ ಪಕ್ಷಗಳೂ ಈ ಮಸೂದೆ<br />ಯನ್ನು ಬೆಂಬಲಿಸಬೇಕು’ ಎಂದು ಗೃಹ ಸಚಿವ ಅಮಿತ್ ಶಾ ಮನವಿ ಮಾಡಿಕೊಂಡರು.</p>.<p>ಆನಂತರ ಮಸೂದೆಯನ್ನು ಮತಕ್ಕೆ ಹಾಕಲಾಯಿತು. ಮಸೂದೆಯ ಪರ 147 ಮತ್ತು ವಿರುದ್ಧ 42 ಮತಗಳು ಬಂದವು. ಹೀಗಾಗಿ ಮಸೂದೆಗೆ ರಾಜ್ಯಸಭೆಯ ಅನುಮೋದನೆ ದೊರೆಯಿತು.</p>.<p>* ಸರ್ಕಾರದ ವಿರುದ್ಧದ ದನಿಯನ್ನು ದ್ರೋಹ ಎಂದು ಕರೆಯಲು ಈ ಮಸೂದೆ ಅವಕಾಶ ಮಾಡಿಕೊಡುತ್ತದೆ. ಸರ್ಕಾರವನ್ನು ಟೀಕಿಸಿದವರನ್ನು ದೇಶದ್ರೋಹಿ ಎನ್ನಲಾಗುತ್ತದೆ</p>.<p>–<strong>ಮನೋಜ್ ಕುಮಾರ್ ಝಾ</strong>ಆರ್ಜೆಡಿ ಸಂಸದ</p>.<p>*ಭಯೋತ್ಪಾದನೆಯನ್ನು ಹತ್ತಿಕ್ಕಲು ಕಠಿಣ ಕಾನೂನು ಬೇಕಿದೆ. ಈ ಮಸೂದೆ ದುರ್ಬಳಕೆ ಆಗುವುದಿಲ್ಲ. ಮಾನವ ಹಕ್ಕುಗಳಿಗೆ ಯಾವುದೇ ಧಕ್ಕೆಯಾಗುವುದಿಲ್ಲ</p>.<p>–<strong>ಅಮಿತ್ ಶಾ </strong>ಕೇಂದ್ರ ಗೃಹ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ವ್ಯ</strong>ಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡುವ ಮತ್ತುಭಯೋತ್ಪಾದನಾ ಕೃತ್ಯಗಳ ತನಿಖೆ ವೇಳೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹೆಚ್ಚಿನ ಅಧಿಕಾರ ನೀಡುವ ‘ಕಾನೂನುಬಾಹಿರ ಚಟುವಟಿಕೆಗಳ ತಡೆ (ತಿದ್ದುಪಡಿ) ಮಸೂದೆ –2019’ಕ್ಕೆ ರಾಜ್ಯಸಭೆಯ ಅನುಮೋದನೆ ಶುಕ್ರವಾರ ದೊರೆತಿದೆ.</p>.<p>ಈ ಮಸೂದೆಗೆ ಈಗ ಸಂಸತ್ತಿನ ಎರಡೂ ಸದನಗಳ ಅನುಮೋದನೆ ದೊರೆತಂತಾಗಿದೆ. ಇನ್ನು ರಾಷ್ಟ್ರಪತಿಗಳ ಅಂಕಿತವಷ್ಟೇ ದೊರೆಯಬೇಕಿದೆ.</p>.<p>ಶುಕ್ರವಾರ ರಾಜ್ಯಸಭೆಯ ಕಲಾಪದ ವೇಳೆ ಮಸೂದೆ ಕುರಿತು ಚರ್ಚೆ ನಡೆಯಿತು. ಮಸೂದೆಯ ಕೆಲವು ಅಂಶಗಳ ಬಗ್ಗೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು. ಮಸೂದೆಯನ್ನು ಸಂಸತ್ತಿನ ಪರಿಶೀಲನಾ ಸಮಿತಿಗೆ ಕಳುಹಿಸುವ ನಿಲುವಳಿಯನ್ನು ಕಾಂಗ್ರೆಸ್ ಮಂಡಿಸಿತು. ಇತರ ವಿರೋಧ ಪಕ್ಷಗಳೂ ಈ ನಿಲುವಳಿಯನ್ನು ಬೆಂಬಲಿಸಿದವು. ಆದರೆ ನಿಲುವಳಿಯ ಪರವಾಗಿ 85 ಮತ್ತು ವಿರುದ್ಧವಾಗಿ 104 ಮತಗಳು ಬಂದವು. ಹೀಗಾಗಿ ನಿಲುವಳಿ ವಿಫಲವಾಯಿತು.</p>.<p>‘ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ. ಭಯೋತ್ಪಾದಕರೆಲ್ಲರೂ ಮನುಷ್ಯ ವಿರೋಧಿಗಳು. ಹೀಗಾಗಿ ಎಲ್ಲಾ ಪಕ್ಷಗಳೂ ಈ ಮಸೂದೆ<br />ಯನ್ನು ಬೆಂಬಲಿಸಬೇಕು’ ಎಂದು ಗೃಹ ಸಚಿವ ಅಮಿತ್ ಶಾ ಮನವಿ ಮಾಡಿಕೊಂಡರು.</p>.<p>ಆನಂತರ ಮಸೂದೆಯನ್ನು ಮತಕ್ಕೆ ಹಾಕಲಾಯಿತು. ಮಸೂದೆಯ ಪರ 147 ಮತ್ತು ವಿರುದ್ಧ 42 ಮತಗಳು ಬಂದವು. ಹೀಗಾಗಿ ಮಸೂದೆಗೆ ರಾಜ್ಯಸಭೆಯ ಅನುಮೋದನೆ ದೊರೆಯಿತು.</p>.<p>* ಸರ್ಕಾರದ ವಿರುದ್ಧದ ದನಿಯನ್ನು ದ್ರೋಹ ಎಂದು ಕರೆಯಲು ಈ ಮಸೂದೆ ಅವಕಾಶ ಮಾಡಿಕೊಡುತ್ತದೆ. ಸರ್ಕಾರವನ್ನು ಟೀಕಿಸಿದವರನ್ನು ದೇಶದ್ರೋಹಿ ಎನ್ನಲಾಗುತ್ತದೆ</p>.<p>–<strong>ಮನೋಜ್ ಕುಮಾರ್ ಝಾ</strong>ಆರ್ಜೆಡಿ ಸಂಸದ</p>.<p>*ಭಯೋತ್ಪಾದನೆಯನ್ನು ಹತ್ತಿಕ್ಕಲು ಕಠಿಣ ಕಾನೂನು ಬೇಕಿದೆ. ಈ ಮಸೂದೆ ದುರ್ಬಳಕೆ ಆಗುವುದಿಲ್ಲ. ಮಾನವ ಹಕ್ಕುಗಳಿಗೆ ಯಾವುದೇ ಧಕ್ಕೆಯಾಗುವುದಿಲ್ಲ</p>.<p>–<strong>ಅಮಿತ್ ಶಾ </strong>ಕೇಂದ್ರ ಗೃಹ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>