<p><strong>ಅಲೀಗಢ (ಉತ್ತರ ಪ್ರದೇಶ)</strong>: ರೈತ ಮುಖಂಡರ ಸಭೆಯಲ್ಲಿ ಭಾಗಿಯಾಗಲು ಗ್ರೇಟರ್ ನೊಯಿಡಾಗೆ ತೆರಳುತ್ತಿದ್ದ ಭಾರತೀಯ ಕಿಸಾನ್ ಯೂನಿಯನ್ನ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಅಲೀಗಢ ಪೊಲೀಸರು ಬುಧವಾರ ವಶಕ್ಕೆ ಪಡೆದರು.</p>.<p>ತನ್ನ ಬೆಂಬಲಿಗರೊಂದಿಗೆ ಟಿಕಾಯತ್ ಪ್ರಯಾಣಿಸುತ್ತಿದ್ದ ಬಸ್ ಅನ್ನು ಯಮುನಾ ಎಕ್ಸ್ಪ್ರೆಸ್ವೇನಲ್ಲಿ ತಡೆದ ಪೊಲೀಸರು, ಟಪ್ಪಲ್ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ.</p>.<p>‘ಟಿಕಾಯತ್ ಅವರನ್ನು ಬಂಧಿಸಿಲ್ಲ. ಆದರೆ ವಶಕ್ಕೆ ಪಡೆದಿದ್ದೇವೆ’ ಎಂದು ಅಲೀಗಢ ಪೊಲೀಸರು ಖಚಿತಪಡಿಸಿದ್ದಾರೆ.</p>.<p>‘ಎಷ್ಟು ದಿನ ವಶದಲ್ಲಿಟ್ಟುಕೊಳ್ಳುತ್ತೀರಿ? ನಮ್ಮನ್ನು ಹೀಗೆ ಹಿಡಿದಿಟ್ಟರೆ, ಯಾರೊಂದಿಗೆ ಮಾತನಾಡಲಿದ್ದೀರಿ. ರೈತರು ನೊಯಿಡಾಗೆ ತೆರಳದಂತೆ ಗೌತಮ ಬುದ್ಧ ನಗರದಲ್ಲೇ ತಡೆಯಲಾಗಿದೆ. ಅಧಿಕಾರಿಗಳ ನಡವಳಿಕೆ ಇದೇ ರೀತಿ ಮುಂದುವರಿದರೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲಿದೆ’ ಎಂದು ಟಿಕಾಯತ್ ಪತ್ರಕರ್ತರಿಗೆ ತಿಳಿಸಿದರು.</p>.<p>ಮುಜಾಪ್ಫರ್ನಗರದ ಸಿಸೌಲಿ ಗ್ರಾಮದ ಕಿಸಾನ್ ಭವನದಲ್ಲಿ ಬಿಕೆಯು ಮುಖಂಡ ನರೇಶ್ ಟಿಕಾಯತ್ ನೇತೃತ್ವದಲ್ಲಿ ಮಂಗಳವಾರ ನಡೆದ ತುರ್ತು ಸಭೆಯಲ್ಲಿ ನೊಯಿಡಾ ಮತ್ತು ಗ್ರೇಟರ್ ನೊಯಿಡಾ ರೈತರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ.</p>.<p>ಗ್ರೇಟರ್ ನೊಯಿಡಾನಲ್ಲಿ ಬುಧವಾರ ಜಮಾಯಿಸುವಂತೆ ಬಿಕೆಯು ಕರೆ ನೀಡಿತ್ತು. ಅದರಂತೆ ನೂರಾರು ರೈತರು ಒಂದೆಡೆ ಸೇರಿ, ಭೂಸ್ವಾಧೀನಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲೀಗಢ (ಉತ್ತರ ಪ್ರದೇಶ)</strong>: ರೈತ ಮುಖಂಡರ ಸಭೆಯಲ್ಲಿ ಭಾಗಿಯಾಗಲು ಗ್ರೇಟರ್ ನೊಯಿಡಾಗೆ ತೆರಳುತ್ತಿದ್ದ ಭಾರತೀಯ ಕಿಸಾನ್ ಯೂನಿಯನ್ನ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಅಲೀಗಢ ಪೊಲೀಸರು ಬುಧವಾರ ವಶಕ್ಕೆ ಪಡೆದರು.</p>.<p>ತನ್ನ ಬೆಂಬಲಿಗರೊಂದಿಗೆ ಟಿಕಾಯತ್ ಪ್ರಯಾಣಿಸುತ್ತಿದ್ದ ಬಸ್ ಅನ್ನು ಯಮುನಾ ಎಕ್ಸ್ಪ್ರೆಸ್ವೇನಲ್ಲಿ ತಡೆದ ಪೊಲೀಸರು, ಟಪ್ಪಲ್ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ.</p>.<p>‘ಟಿಕಾಯತ್ ಅವರನ್ನು ಬಂಧಿಸಿಲ್ಲ. ಆದರೆ ವಶಕ್ಕೆ ಪಡೆದಿದ್ದೇವೆ’ ಎಂದು ಅಲೀಗಢ ಪೊಲೀಸರು ಖಚಿತಪಡಿಸಿದ್ದಾರೆ.</p>.<p>‘ಎಷ್ಟು ದಿನ ವಶದಲ್ಲಿಟ್ಟುಕೊಳ್ಳುತ್ತೀರಿ? ನಮ್ಮನ್ನು ಹೀಗೆ ಹಿಡಿದಿಟ್ಟರೆ, ಯಾರೊಂದಿಗೆ ಮಾತನಾಡಲಿದ್ದೀರಿ. ರೈತರು ನೊಯಿಡಾಗೆ ತೆರಳದಂತೆ ಗೌತಮ ಬುದ್ಧ ನಗರದಲ್ಲೇ ತಡೆಯಲಾಗಿದೆ. ಅಧಿಕಾರಿಗಳ ನಡವಳಿಕೆ ಇದೇ ರೀತಿ ಮುಂದುವರಿದರೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲಿದೆ’ ಎಂದು ಟಿಕಾಯತ್ ಪತ್ರಕರ್ತರಿಗೆ ತಿಳಿಸಿದರು.</p>.<p>ಮುಜಾಪ್ಫರ್ನಗರದ ಸಿಸೌಲಿ ಗ್ರಾಮದ ಕಿಸಾನ್ ಭವನದಲ್ಲಿ ಬಿಕೆಯು ಮುಖಂಡ ನರೇಶ್ ಟಿಕಾಯತ್ ನೇತೃತ್ವದಲ್ಲಿ ಮಂಗಳವಾರ ನಡೆದ ತುರ್ತು ಸಭೆಯಲ್ಲಿ ನೊಯಿಡಾ ಮತ್ತು ಗ್ರೇಟರ್ ನೊಯಿಡಾ ರೈತರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ.</p>.<p>ಗ್ರೇಟರ್ ನೊಯಿಡಾನಲ್ಲಿ ಬುಧವಾರ ಜಮಾಯಿಸುವಂತೆ ಬಿಕೆಯು ಕರೆ ನೀಡಿತ್ತು. ಅದರಂತೆ ನೂರಾರು ರೈತರು ಒಂದೆಡೆ ಸೇರಿ, ಭೂಸ್ವಾಧೀನಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>