ಮುಜಾಫರ್ನಗರ: ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದು ಮತ್ತು ಬೆಳೆಗಳಿಗೆ ನೀಡುವ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಕಾನೂನು ಚೌಕಟ್ಟಿನಲ್ಲಿ ತರುವುದು ಸೇರಿದಂತೆ, ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದರು.