ಬೇಗುಸರಾಯ್ (ಬಿಹಾರ)(ಪಿಟಿಐ): ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟದವರು ‘ರಾಮ ದ್ರೋಹಿ’ಗಳು. ಅವರು ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಶನಿವಾರ ಟೀಕಿಸಿದರು.
ಬೇಗುಸರಾಯ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಿರಿರಾಜ್ ಸಿಂಗ್ ಪರ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಗೋ ಹತ್ಯೆ ಮಾಡುವವರಿಗೆ ಬೆಂಬಲ ನೀಡುತ್ತಿದ್ದು, ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿವೆ ಎಂದು ಆರೋಪಿಸಿದರು.
ಈ ಚುನಾವಣೆಯು ‘ರಾಮ ಭಕ್ತರು’ ಮತ್ತು ‘ರಾಮ ದ್ರೋಹಿ’ಗಳ ನಡುವಿನ ಆಯ್ಕೆಯನ್ನು ಜನರಿಗೆ ನೀಡಲಿದೆ ಎಂದರು.