‘ಸಂತರು, ಭೂ ವಿಜ್ಞಾನಿಗಳು, ಶಿಲ್ಪಿಗಳು, ಹಿಂದೂ ಧರ್ಮಗ್ರಂಥಗಳನ್ನು ಅಧ್ಯಯನ ಮಾಡಿರುವ ಪರಿಣತರು ಹಾಗೂ ಟ್ರಸ್ಟ್ನ ಪದಾಧಿಕಾರಿಗಳ ಅಭಿಪ್ರಾಯ ಆಲಿಸಿದ ಬಳಿಕವೇ ವಿಗ್ರಹ ಕೆತ್ತಲು ಕೃಷ್ಣ ಶಿಲೆ ಅಂತಿಮಗೊಳಿಸಲಾಗಿದೆ. ಮುಂದಿನ ವರ್ಷದ ಮಕರ ಸಂಕ್ರಾಂತಿ ವೇಳೆಗೆ ವಿಗ್ರಹ ಪ್ರತಿಷ್ಠಾಪಿಸಲಾಗುತ್ತದೆ. ಈ ಮೂರ್ತಿ ಹೇಗಿರಬಹುದು ಎಂಬ ಕುತೂಹಲ ಭಕ್ತರಲ್ಲಿ ಮನೆಮಾಡಿದೆ’ ಎಂದು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ.