ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ: ಬಿಲ್ಲು–ಬಾಣ ಹಿಡಿದ ರಾಮನ ವಿಗ್ರಹ ಪ್ರತಿಷ್ಠಾಪನೆ

ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರಿಂದ ಶೀಘ್ರ ಕೆತ್ತನೆ ಕಾರ್ಯ ಆರಂಭ
Last Updated 19 ಏಪ್ರಿಲ್ 2023, 11:36 IST
ಅಕ್ಷರ ಗಾತ್ರ

ಅಯೋಧ್ಯೆ (ಉತ್ತರ ಪ್ರದೇಶ): ಇಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದಲ್ಲಿ ಬಿಲ್ಲು–ಬಾಣ ಹಿಡಿದು ನಿಂತಿರುವ ರಾಮನ ಐದು ಅಡಿ ಎತ್ತರದ ವಿಗ್ರಹ ಪ್ರತಿಷ್ಠಾಪಿಸಲು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಬುಧವಾರ ತೀರ್ಮಾನಿಸಿದೆ.

ಮೈಸೂರಿನ ಪ್ರಸಿದ್ಧ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ರಾಮನು ಐದು ವರ್ಷದ ಬಾಲಕನಾಗಿದ್ದಾಗ ಹೊಂದಿದ್ದ ರೂಪದ ಮೂರ್ತಿಯನ್ನು ಕೆತ್ತಲಿದ್ದಾರೆ. ಕರ್ನಾಟಕದಿಂದ ತರಲಾಗಿರುವ ಕೃಷ್ಣ ಶಿಲೆಯಲ್ಲಿ ಇದನ್ನು ರೂಪಿಸಲಾಗುತ್ತದೆ.

‘ಕರ್ನಾಟಕದ ಕಾರ್ಕಳ ಮತ್ತು ಹೆಗ್ಗಡೆ ದೇವನ ಕೋಟೆಯಿಂದ ಕೃಷ್ಣ ಶಿಲೆಗಳನ್ನು ತರಲಾಗಿದೆ. ಇವುಗಳಲ್ಲಿ ವಿಗ್ರಹ ಕೆತ್ತಲು ಯಾವ ಶಿಲೆ ಬಳಸಬೇಕು ಎಂಬುದನ್ನು ಶಿಲ್ಪಿಯೇ ನಿರ್ಧರಿಸಲಿದ್ದಾರೆ’ ಎಂದು ಟ್ರಸ್ಟ್‌ನ ಸದಸ್ಯ ಸ್ವಾಮಿ ತೀರ್ಥ ಪ್ರಸನ್ನಾಚಾರ್ಯ ಅವರು ತಿಳಿಸಿದ್ದಾರೆ.

‘ಸಂತರು, ಭೂ ವಿಜ್ಞಾನಿಗಳು, ಶಿಲ್ಪಿಗಳು, ಹಿಂದೂ ಧರ್ಮಗ್ರಂಥಗಳನ್ನು ಅಧ್ಯಯನ ಮಾಡಿರುವ ಪರಿಣತರು ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳ ಅಭಿಪ್ರಾಯ ಆಲಿಸಿದ ಬಳಿಕವೇ ವಿಗ್ರಹ ಕೆತ್ತಲು ಕೃಷ್ಣ ಶಿಲೆ ಅಂತಿಮಗೊಳಿಸಲಾಗಿದೆ. ಮುಂದಿನ ವರ್ಷದ ಮಕರ ಸಂಕ್ರಾಂತಿ ವೇಳೆಗೆ ವಿಗ್ರಹ ಪ್ರತಿಷ್ಠಾಪಿಸಲಾಗುತ್ತದೆ. ಈ ಮೂರ್ತಿ ಹೇಗಿರಬಹುದು ಎಂಬ ಕುತೂಹಲ ಭಕ್ತರಲ್ಲಿ ಮನೆಮಾಡಿದೆ’ ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ಹೇಳಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT