<p><strong>ನವದೆಹಲಿ:</strong> ‘ಅಯೋಧ್ಯೆಯ ರಾಮಮಂದಿರದ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಜೂನ್ 5ರಂದು ‘ರಾಮ ದರ್ಬಾರ್’ನಲ್ಲಿ ಮೂರ್ತಿಗಳ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಆದರೆ, ಈ ಬಾರಿ ಪ್ರಾಣಪ್ರತಿಷ್ಠಾಪನೆಗೆ ಆಗಮಿಸುವ ಅತಿಥಿಗಳ ಪಟ್ಟಿಯಲ್ಲಿ ರಾಜ್ಯ ಅಥವಾ ಕೇಂದ್ರದ ವಿಐಪಿಗಳ ಹೆಸರು ಇರುವುದಿಲ್ಲ’ ಎಂದು ಶ್ರೀ ರಾಮ ಜನ್ಮಭೂಮಿ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.</p>.<p>ಪಿಟಿಐಗೆ ಬುಧವಾರ ಸಂದರ್ಶನ ನೀಡಿರುವ ಅವರು, ‘ಜೂನ್ 3ರಿಂದಲೇ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಗಳು ಆರಂಭವಾಗಲಿವೆ. ವಿವಿಧ ಧಾರ್ಮಿಕ ಗುರುಗಳನ್ನು ಆಹ್ವಾನಿಸಲಾಗುವುದು. ಕೇಂದ್ರ ಅಥವಾ ರಾಜ್ಯದ ವಿಐಪಿಗಳನ್ನು ಆಹ್ವಾನಿಸದೇ ಇರಲು ಟ್ರಸ್ಟ್ ನಿರ್ಧರಿಸಿದೆ’ ಎಂದಿದ್ದಾರೆ. </p>.<p>ರಾಮ ದರ್ಬಾರ್ ಜತೆಗೆ ದೇವಾಲಯದ ಆವರಣದಲ್ಲಿರುವ ಇತರೆ 7 ದೇಗುಲಗಳ ಧಾರ್ಮಿಕ ಸಮಾರಂಭವೂ ಅದೇ ದಿನ ನಡೆಯಲಿದೆ. ರಾಮಾಯಣದ ಕಥೆಯನ್ನು ಪ್ರದರ್ಶಿಸುವ ಭಿತ್ತಿಚಿತ್ರಗಳನ್ನು ಹೊರತುಪಡಿಸಿ ದೇಗುಲದ ಮಿಕ್ಕೆಲ್ಲಾ ನಿರ್ಮಾಣ ಕಾಮಗಾರಿ ಜೂ.5ರ ಒಳಗೆ ಪೂರ್ಣಗೊಳ್ಳಲಿದೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಅಯೋಧ್ಯೆಯ ರಾಮಮಂದಿರದ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಜೂನ್ 5ರಂದು ‘ರಾಮ ದರ್ಬಾರ್’ನಲ್ಲಿ ಮೂರ್ತಿಗಳ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಆದರೆ, ಈ ಬಾರಿ ಪ್ರಾಣಪ್ರತಿಷ್ಠಾಪನೆಗೆ ಆಗಮಿಸುವ ಅತಿಥಿಗಳ ಪಟ್ಟಿಯಲ್ಲಿ ರಾಜ್ಯ ಅಥವಾ ಕೇಂದ್ರದ ವಿಐಪಿಗಳ ಹೆಸರು ಇರುವುದಿಲ್ಲ’ ಎಂದು ಶ್ರೀ ರಾಮ ಜನ್ಮಭೂಮಿ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.</p>.<p>ಪಿಟಿಐಗೆ ಬುಧವಾರ ಸಂದರ್ಶನ ನೀಡಿರುವ ಅವರು, ‘ಜೂನ್ 3ರಿಂದಲೇ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಗಳು ಆರಂಭವಾಗಲಿವೆ. ವಿವಿಧ ಧಾರ್ಮಿಕ ಗುರುಗಳನ್ನು ಆಹ್ವಾನಿಸಲಾಗುವುದು. ಕೇಂದ್ರ ಅಥವಾ ರಾಜ್ಯದ ವಿಐಪಿಗಳನ್ನು ಆಹ್ವಾನಿಸದೇ ಇರಲು ಟ್ರಸ್ಟ್ ನಿರ್ಧರಿಸಿದೆ’ ಎಂದಿದ್ದಾರೆ. </p>.<p>ರಾಮ ದರ್ಬಾರ್ ಜತೆಗೆ ದೇವಾಲಯದ ಆವರಣದಲ್ಲಿರುವ ಇತರೆ 7 ದೇಗುಲಗಳ ಧಾರ್ಮಿಕ ಸಮಾರಂಭವೂ ಅದೇ ದಿನ ನಡೆಯಲಿದೆ. ರಾಮಾಯಣದ ಕಥೆಯನ್ನು ಪ್ರದರ್ಶಿಸುವ ಭಿತ್ತಿಚಿತ್ರಗಳನ್ನು ಹೊರತುಪಡಿಸಿ ದೇಗುಲದ ಮಿಕ್ಕೆಲ್ಲಾ ನಿರ್ಮಾಣ ಕಾಮಗಾರಿ ಜೂ.5ರ ಒಳಗೆ ಪೂರ್ಣಗೊಳ್ಳಲಿದೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>