<p><strong>ಅಯೋಧ್ಯೆ</strong>: ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಸಾರ್ವಜನಿಕರಿಂದ ₹3 ಸಾವಿರ ಕೋಟಿಗೂ ಹೆಚ್ಚು ದೇಣಿಗೆ ಬಂದಿದೆ ಎಂದು ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಬುಧವಾರ ತಿಳಿಸಿದ್ದಾರೆ.</p><p>ರಾಮ ಮಂದಿರ ನಿರ್ಮಾಣ ಯೋಜನೆಯ ಒಟ್ಟು ಮೊತ್ತ ₹1,800 ಕೋಟಿ. ಭಕ್ತರಿಂದ ₹3 ಸಾವಿರ ಕೋಟಿ ಹಣ ಬಂದಿದೆ ಎಂದು ತಿಳಿಸಿದ್ದಾರೆ.</p><p>2022ರಲ್ಲಿ ಧನಸಹಾಯಕ್ಕೆ ಅಭಿಯಾನ ಆರಂಭವಾದಾಗಿನಿಂದ ದೇಶದಾದ್ಯಂತ ಇರುವ ಭಕ್ತರು ದೇಣಿಗೆ ನೀಡಿದ್ದಾರೆ. ಎಲ್ಲಾ ದಾನಿಗಳನ್ನು ನ.25ರಂದು ನಡೆಯುವ ಧ್ವಜಾರೋಹಣಕ್ಕೆ ಆಹ್ವಾನಿಸಲಾಗಿವುದು. ಪ್ರಧಾನಿ ನರೇಂದ್ರ ಮೋದಿಯವರು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿರುತ್ತಾರೆ. ಈ ಭೇಟಿಯಲ್ಲಿ ಪ್ರಧಾನಿಯವರು ದೇವಾಲಯದ 70 ಎಕರೆ ಸಂಕೀರ್ಣದಲ್ಲಿರುವ ಶೇಶವತಾರ ದೇವಾಲಯ, ಸಪ್ತ ಮಂಟಪ ಸೇರಿ ಎಲ್ಲ ದೇವಾಲಯಗಳಿಗೂ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.</p><p>ದೇಗುಲದ ಒಳಭಾಗದಲ್ಲಿ 5 ರಿಂದ 8 ಸಾವಿರ ಭಕ್ತರು ಏಕಕಾಲದಲ್ಲಿ ಸೇರಬಹುದು. ಧ್ವಜಾರೋಹಣ ಕಾರ್ಯಕ್ರಮಕ್ಕೆ 8 ಸಾವಿರ ಜನರಿಗೆ ಆಹ್ವಾನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p><p>ರಾಮಮಂದಿರ ನಿರ್ಮಾಣ ಕಾರ್ಯ ಮುಗಿದಿದೆ ಎಂದು ಸೋಮವಾರ ರಾಮ ಮಂದಿರ ಟ್ರಸ್ಟ್ ಘೋಷಿಸಿದೆ.</p>.ಅಯೋಧ್ಯೆ ರಾಮಮಂದಿರ ನಿರ್ಮಾಣಕಾರ್ಯ ಪೂರ್ಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ</strong>: ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಸಾರ್ವಜನಿಕರಿಂದ ₹3 ಸಾವಿರ ಕೋಟಿಗೂ ಹೆಚ್ಚು ದೇಣಿಗೆ ಬಂದಿದೆ ಎಂದು ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಬುಧವಾರ ತಿಳಿಸಿದ್ದಾರೆ.</p><p>ರಾಮ ಮಂದಿರ ನಿರ್ಮಾಣ ಯೋಜನೆಯ ಒಟ್ಟು ಮೊತ್ತ ₹1,800 ಕೋಟಿ. ಭಕ್ತರಿಂದ ₹3 ಸಾವಿರ ಕೋಟಿ ಹಣ ಬಂದಿದೆ ಎಂದು ತಿಳಿಸಿದ್ದಾರೆ.</p><p>2022ರಲ್ಲಿ ಧನಸಹಾಯಕ್ಕೆ ಅಭಿಯಾನ ಆರಂಭವಾದಾಗಿನಿಂದ ದೇಶದಾದ್ಯಂತ ಇರುವ ಭಕ್ತರು ದೇಣಿಗೆ ನೀಡಿದ್ದಾರೆ. ಎಲ್ಲಾ ದಾನಿಗಳನ್ನು ನ.25ರಂದು ನಡೆಯುವ ಧ್ವಜಾರೋಹಣಕ್ಕೆ ಆಹ್ವಾನಿಸಲಾಗಿವುದು. ಪ್ರಧಾನಿ ನರೇಂದ್ರ ಮೋದಿಯವರು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿರುತ್ತಾರೆ. ಈ ಭೇಟಿಯಲ್ಲಿ ಪ್ರಧಾನಿಯವರು ದೇವಾಲಯದ 70 ಎಕರೆ ಸಂಕೀರ್ಣದಲ್ಲಿರುವ ಶೇಶವತಾರ ದೇವಾಲಯ, ಸಪ್ತ ಮಂಟಪ ಸೇರಿ ಎಲ್ಲ ದೇವಾಲಯಗಳಿಗೂ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.</p><p>ದೇಗುಲದ ಒಳಭಾಗದಲ್ಲಿ 5 ರಿಂದ 8 ಸಾವಿರ ಭಕ್ತರು ಏಕಕಾಲದಲ್ಲಿ ಸೇರಬಹುದು. ಧ್ವಜಾರೋಹಣ ಕಾರ್ಯಕ್ರಮಕ್ಕೆ 8 ಸಾವಿರ ಜನರಿಗೆ ಆಹ್ವಾನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p><p>ರಾಮಮಂದಿರ ನಿರ್ಮಾಣ ಕಾರ್ಯ ಮುಗಿದಿದೆ ಎಂದು ಸೋಮವಾರ ರಾಮ ಮಂದಿರ ಟ್ರಸ್ಟ್ ಘೋಷಿಸಿದೆ.</p>.ಅಯೋಧ್ಯೆ ರಾಮಮಂದಿರ ನಿರ್ಮಾಣಕಾರ್ಯ ಪೂರ್ಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>