<p><strong>ಲಖನೌ:</strong> ಅಯೋಧ್ಯೆಯಲ್ಲಿ ಭಾನುವಾರ ನಡೆಯಲಿರುವ ರಾಮಭಕ್ತರ ಧರ್ಮಸಭೆಯಲ್ಲಿ ರಾಮಮಂದಿರ ನಿರ್ಮಾಣ ದಿನಾಂಕವನ್ನು ಘೋಷಿಸುವ ಸುಳಿವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ನೀಡಿದೆ.</p>.<p>ಧರ್ಮಸಭೆಗೆ ಜನರನ್ನು ಆಹ್ವಾನಿಸಲು ಅಯೋಧ್ಯೆ ಸುತ್ತಮುತ್ತ ಸಭೆಗಳನ್ನು ನಡೆಸುತ್ತಿರುವ ವಿಎಚ್ಪಿ ನಾಯಕರು ಸೋಮವಾರ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.</p>.<p>ಧರ್ಮಸಭೆಯಲ್ಲಿ ಭಾಗವಹಿಸಲಿರುವ ಸಾಧು, ಸಂತರು ರಾಮಮಂದಿರ ನಿರ್ಮಾಣ ದಿನವನ್ನು ಘೋಷಿಸಲಿದ್ದಾರೆ. ಇದೊಂದು ನಿರ್ಣಾಯಕ ಯುದ್ಧ ಎಂದು ಅವರು ಹೇಳುತ್ತಿದ್ದಾರೆ.</p>.<p>ಬಿಜೆಪಿ ನಾಯಕರು ಧರ್ಮಸಭೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ, ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಲು ಪಕ್ಷದ ಅಭ್ಯಂತರ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ರಾಮಜನ್ಮಭೂಮಿ–ಬಾಬ್ರಿ ಮಸೀದಿ ವಿವಾದಿತ ಜಾಗದಲ್ಲಿ ಯಥಾಸ್ಥಿತಿ ಕಾಪಾಡುವ ಹೊಣೆ ಹೊತ್ತಿರುವ ಜಿಲ್ಲಾಡಳಿತ ಬಿಗಿ ಪೊಲೀಸ್ ಭದ್ರತೆ ನಿಯೋಜಿಸುತ್ತಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಅಯೋಧ್ಯೆಯಲ್ಲಿ ಭಾನುವಾರ ನಡೆಯಲಿರುವ ರಾಮಭಕ್ತರ ಧರ್ಮಸಭೆಯಲ್ಲಿ ರಾಮಮಂದಿರ ನಿರ್ಮಾಣ ದಿನಾಂಕವನ್ನು ಘೋಷಿಸುವ ಸುಳಿವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ನೀಡಿದೆ.</p>.<p>ಧರ್ಮಸಭೆಗೆ ಜನರನ್ನು ಆಹ್ವಾನಿಸಲು ಅಯೋಧ್ಯೆ ಸುತ್ತಮುತ್ತ ಸಭೆಗಳನ್ನು ನಡೆಸುತ್ತಿರುವ ವಿಎಚ್ಪಿ ನಾಯಕರು ಸೋಮವಾರ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.</p>.<p>ಧರ್ಮಸಭೆಯಲ್ಲಿ ಭಾಗವಹಿಸಲಿರುವ ಸಾಧು, ಸಂತರು ರಾಮಮಂದಿರ ನಿರ್ಮಾಣ ದಿನವನ್ನು ಘೋಷಿಸಲಿದ್ದಾರೆ. ಇದೊಂದು ನಿರ್ಣಾಯಕ ಯುದ್ಧ ಎಂದು ಅವರು ಹೇಳುತ್ತಿದ್ದಾರೆ.</p>.<p>ಬಿಜೆಪಿ ನಾಯಕರು ಧರ್ಮಸಭೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ, ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಲು ಪಕ್ಷದ ಅಭ್ಯಂತರ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ರಾಮಜನ್ಮಭೂಮಿ–ಬಾಬ್ರಿ ಮಸೀದಿ ವಿವಾದಿತ ಜಾಗದಲ್ಲಿ ಯಥಾಸ್ಥಿತಿ ಕಾಪಾಡುವ ಹೊಣೆ ಹೊತ್ತಿರುವ ಜಿಲ್ಲಾಡಳಿತ ಬಿಗಿ ಪೊಲೀಸ್ ಭದ್ರತೆ ನಿಯೋಜಿಸುತ್ತಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>