<p><strong>ಲಖನೌ (ಉತ್ತರ ಪ್ರದೇಶ)</strong>: ಕಾನ್ಪುರದಲ್ಲಿ ರಾಮನವಮಿಯಂದು ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ನಯಿ ಸಡಕ್ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದ ಶೋಭಾಯಾತ್ರೆ ವೇಳೆ ಕಟ್ಟಡಗಳ ಮೇಲಿಂದ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಉಲ್ಲೇಖಿಸಿ ಕಾರ್ಯಕ್ರಮದ ಆಯೋಜಕರು ದೂರು ನೀಡಿರುವುದಾಗಿ ಉಪ ಪೊಲೀಸ್ ಆಯುಕ್ತ (ಪೂರ್ವ) ಶ್ರವಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ.</p><p>ಕಲ್ಲು ತೂರಾಟದಲ್ಲಿ ಹಲವು ಮಂದಿ ಓಡಿ ಹೋಗುತ್ತಿರುವ ದೃಶ್ಯಗಳನ್ನೊಂಡ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಆದರೆ ಈ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲಿಸಬೇಕಿದೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.</p>.ಆಳ–ಅಗಲ | ಸ್ಮಾರ್ಟ್ ಸಿಟಿ: ಈಡೇರಿತೇ ಆಶಯ?.ವಿಶ್ಲೇಷಣೆ | ಹೂಡಿಕೆ ವಂಚನೆ ತಡೆಗಿದೆ ಮಾರ್ಗ. <p>ಜನರು ಶಾಂತಿಯುತವಾಗಿ ವರ್ತಿಸಬೇಕು. ಯಾವುದೇ ವದಂತಿಗಳಿಗೆ ಕಿವಿಕೊಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.</p><p>ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ಆದರೆ ಆರೋಪಿಗಳು ಪತ್ತೆಯಾಗಿಲ್ಲ. ಘಟನೆ ಸಂಬಂಧ ಸಾಕ್ಷಿ ಒದಗಿಸುವ ಯಾವುದೇ ವಿಡಿಯೊಗಳಿದ್ದರೂ ಸಾರ್ವಜನಿಕರು ಪೊಲೀಸರಿಗೆ ನೀಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ.</p><p>ಮುನ್ನೆಚ್ಚರಿಕೆ ಕ್ರಮವಾಗಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೀಸಲು ಪೊಲೀಸ್ ಪಡೆಗಳು ಮತ್ತು ನೆರೆಯ ಪೊಲೀಸ್ ಠಾಣೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಉತ್ತರ ಪ್ರದೇಶ: ವಕ್ಫ್ನ ಕಾನೂನುಬಾಹಿರ ಆಸ್ತಿ ವಶಕ್ಕೆ.ಮುಂದಿನ 3 ವರ್ಷಗಳಲ್ಲಿ ಬಡತನ ನಿರ್ಮೂಲನೆ, ರಾಜ್ಯ ಸಮೃದ್ಧ: ಸಿಎಂ ಯೋಗಿ .ರಾಮೇಶ್ವರಂ: ಪಂಬನ್ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ: ಸಿಎಂ ಸ್ಟಾಲಿನ್ ಗೈರು.ರಾಮೇಶ್ವರಂನ ಪಂಬನ್: ದೇಶದ ಮೊದಲ ಲಿಫ್ಟ್ ಸೇತುವೆಗೆ PM ಮೋದಿ ನಾಳೆ ಚಾಲನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ (ಉತ್ತರ ಪ್ರದೇಶ)</strong>: ಕಾನ್ಪುರದಲ್ಲಿ ರಾಮನವಮಿಯಂದು ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ನಯಿ ಸಡಕ್ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದ ಶೋಭಾಯಾತ್ರೆ ವೇಳೆ ಕಟ್ಟಡಗಳ ಮೇಲಿಂದ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಉಲ್ಲೇಖಿಸಿ ಕಾರ್ಯಕ್ರಮದ ಆಯೋಜಕರು ದೂರು ನೀಡಿರುವುದಾಗಿ ಉಪ ಪೊಲೀಸ್ ಆಯುಕ್ತ (ಪೂರ್ವ) ಶ್ರವಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ.</p><p>ಕಲ್ಲು ತೂರಾಟದಲ್ಲಿ ಹಲವು ಮಂದಿ ಓಡಿ ಹೋಗುತ್ತಿರುವ ದೃಶ್ಯಗಳನ್ನೊಂಡ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಆದರೆ ಈ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲಿಸಬೇಕಿದೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.</p>.ಆಳ–ಅಗಲ | ಸ್ಮಾರ್ಟ್ ಸಿಟಿ: ಈಡೇರಿತೇ ಆಶಯ?.ವಿಶ್ಲೇಷಣೆ | ಹೂಡಿಕೆ ವಂಚನೆ ತಡೆಗಿದೆ ಮಾರ್ಗ. <p>ಜನರು ಶಾಂತಿಯುತವಾಗಿ ವರ್ತಿಸಬೇಕು. ಯಾವುದೇ ವದಂತಿಗಳಿಗೆ ಕಿವಿಕೊಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.</p><p>ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ಆದರೆ ಆರೋಪಿಗಳು ಪತ್ತೆಯಾಗಿಲ್ಲ. ಘಟನೆ ಸಂಬಂಧ ಸಾಕ್ಷಿ ಒದಗಿಸುವ ಯಾವುದೇ ವಿಡಿಯೊಗಳಿದ್ದರೂ ಸಾರ್ವಜನಿಕರು ಪೊಲೀಸರಿಗೆ ನೀಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ.</p><p>ಮುನ್ನೆಚ್ಚರಿಕೆ ಕ್ರಮವಾಗಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೀಸಲು ಪೊಲೀಸ್ ಪಡೆಗಳು ಮತ್ತು ನೆರೆಯ ಪೊಲೀಸ್ ಠಾಣೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಉತ್ತರ ಪ್ರದೇಶ: ವಕ್ಫ್ನ ಕಾನೂನುಬಾಹಿರ ಆಸ್ತಿ ವಶಕ್ಕೆ.ಮುಂದಿನ 3 ವರ್ಷಗಳಲ್ಲಿ ಬಡತನ ನಿರ್ಮೂಲನೆ, ರಾಜ್ಯ ಸಮೃದ್ಧ: ಸಿಎಂ ಯೋಗಿ .ರಾಮೇಶ್ವರಂ: ಪಂಬನ್ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ: ಸಿಎಂ ಸ್ಟಾಲಿನ್ ಗೈರು.ರಾಮೇಶ್ವರಂನ ಪಂಬನ್: ದೇಶದ ಮೊದಲ ಲಿಫ್ಟ್ ಸೇತುವೆಗೆ PM ಮೋದಿ ನಾಳೆ ಚಾಲನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>