ಹೌರಾ ಜಿಲ್ಲೆಯ ಶಿಬ್ಪುರ್ ಮತ್ತು ಹೂಗ್ಲಿಯ ರಿಶ್ರಾದಲ್ಲಿ ರಾಮನವಮಿ ಆಚರಣೆ ವೇಳೆ ಮತ್ತು ನಂತರ ನಡೆದಿದ್ದ ಹಿಂಸಾಚಾರ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಬೇಕು ಎಂದು ಕೋರಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕಲ್ಕತ್ತ ಹೈಕೋರ್ಟ್ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಿ ಏಪ್ರಿಲ್ 27ರಂದು ಆದೇಶ ಹೊರಡಿಸಿತ್ತು.