ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ನಂತರ ಅಯೋಧ್ಯೆಯಲ್ಲಿ ಸೇರಿದ್ದ ಸಾವಿರಾರು ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪ್ರಧಾನಿಯೊಬ್ಬರೇ ತಪಸ್ಸು ಮಾಡಿದ್ದಾರೆ. ಈಗ ನಾವೆಲ್ಲರೂ ತಪಸ್ಸು ಮಾಡಬೇಕಾಗಿದೆ’ ಎಂದರು.
ಅಯೋಧ್ಯೆಯಲ್ಲಿ ನಡೆದ ರಾಮ ಪ್ರಾಣ ಪ್ರತಿಷ್ಠಾಪನೆಯೊಂದಿಗೆ ಭಾರತದ ಸ್ವಾಭಿಮಾನವು ಮರಳಿದೆ. ಇಂದಿನ ಸಮಾರಂಭವು ಆಧುನಿಕ ಭಾರತದ ಸಂಕೇತವಾಗಿದೆ ಮತ್ತು ಇಡೀ ಜಗತ್ತಿನಲ್ಲಿ ಸಂಭವಿಸಬಹುದಾದ ದುರಂತಗಳಿಗೆ ಮುಂಚೂಣಿಯಲ್ಲಿ ನಿಂತು ಪರಿಹಾರ ಒದಗಿಸುವ ಕೇಂದ್ರವಾಗಲಿದೆ ಎಂದು ಭಾಗವತ್ ತಿಳಿಸಿದರು.
ಅಯೋಧ್ಯೆಯ ರಾಮಮಂದಿರದಲ್ಲಿ ಇಂದು (ಸೋಮವಾರ) ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿತು.