‘ಬಿಜೆಪಿಯವರಿಗೆ ನೈತಿಕತೆ ಎಂಬುದೇ ಇಲ್ಲ.ನೈತಿಕತೆ ಮತ್ತು ಘನತೆ– ಗೌರವವನ್ನು ಪಾಲಿಸದವರು ರಾಮನ ಭಕ್ತರಾಗಿರಲು ಸಾಧ್ಯವಿಲ್ಲ. ನೈತಿಕತೆ ಹಾಗೂ ಸಂವಿಧಾನದ ಮೇಲೆ ನಮಗೆ ನಂಬಿಕೆ ಇದೆ. ಹೀಗಾಗಿ ನಾವು ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣ ಖಚಿತ’ ಎಂದು ಅವರು ಪತ್ರಕರ್ತರಿಗೆ ತಿಳಿಸಿದರು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದ ರಾವತ್, ‘ವಿರೋಧ ಪಕ್ಷಗಳನ್ನು ಅಧಿಕಾರದಿಂದ ಹೇಗಾದರೂ ಮಾಡಿ ಕೆಳಗಿಸುವುದು ಬಿಜೆಪಿ ಉದ್ದೇಶ’ ಎಂದು ಆರೋಪಿಸಿದರು.