<p><strong>ನವದೆಹಲಿ</strong>: ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕಿ ಸೋನಿಯಾಗಾಂಧಿ ಅವರು ಭಾಗವಹಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.</p>.<p>ವರದಿಗಾರರ ಜತೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು, ಸೋನಿಯಾ ಗಾಂಧಿ, ಖರ್ಗೆ ಮತ್ತು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ ಅವರಿಗೂ ಆಹ್ವಾನ ನೀಡಲಾಗಿದೆ. ಈ ಬಗ್ಗೆ ಸೂಕ್ತ ಸಮಯದಲ್ಲಿ ತೀರ್ಮಾನಿಸಿ ತಿಳಿಸಲಾಗುವುದು ಎಂದು ಹೇಳಿದರು.</p>.<p>‘ಈ ವಿಷಯದಲ್ಲಿ ಆತುರಾತುರವಾಗಿ ನಿರ್ಧಾರ ಕೈಗೊಳ್ಳುವ ಅಗತ್ಯ ಇಲ್ಲ. ಇಂದೇ ಅದನ್ನು ನಿರ್ಧರಿಸಬೇಕು ಎಂದೇನೂ ಇಲ್ಲ. ಇದು ಸೂಕ್ಷ್ಮ ವಿಚಾರ. ಆಹ್ವಾನಿತರಾಗದವರು ಈಗ ಟೀಕೆಗಳನ್ನು ಮಾಡುತ್ತಿದ್ದಾರೆ’ ಎಂದರು.</p>.<p>ಕಾರ್ಯಕ್ರಮಕ್ಕೆ ಹಾಜರಾಗುವ ಕುರಿತು ನಾಯಕರು ಪರ ಮತ್ತು ವಿರೋಧ ಹೇಳಿಕೆಗಳನ್ನು ನೀಡುತ್ತಿರುವುದು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ ಎಂದು ಮೂಲಗಳು ಹೇಳಿವೆ.</p>.<p>ಸ್ಯಾಮ್ ಪಿತ್ರೋಡಾ ಅವರು ರಾಮಮಂದಿರ ಪ್ರಮುಖ ವಿಷಯವಲ್ಲ ಎಂದು ಹೇಳಿದ್ದನ್ನು ಕಾಂಗ್ರೆಸ್ ಗುರಿಯಾಗಿಸಲು ಬಿಜೆಪಿ ಬಳಸಿಕೊಂಡಿತು ಎಂದು ಹೇಳಿದ ಹಿರಿಯ ನಾಯಕರೊಬ್ಬರು ಪಿತ್ರೋಡಾ ಅಂಥವರು ಪಕ್ಷದ ಪರವಾಗಿ ಮಾತನಾಡುವುದಿಲ್ಲ ಎಂದರು.</p>.<p>‘ಅವರು ಅವರ ಅಭಿಪ್ರಾಯ ಹೇಳಿದ್ದಾರೆ. ಅದು ಕಾಂಗ್ರೆಸ್ ಅಭಿಪ್ರಾಯ ಅಲ್ಲ. ಕಾಂಗ್ರೆಸ್ ಅಭಿಪ್ರಾಯವನ್ನು ಚರ್ಚಿಸಿ ನಿರ್ಧರಿಸಲಾಗುವುದು’ ಎಂದರು.</p>.<p>ಕಾರ್ಯಕ್ರಮವನ್ನು ಬಿಜೆಪಿ ರಾಜಕೀಯಕರಣಗೊಳಿಸುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್ ಅವರು ಹೇಳಿರುವ ಬಗ್ಗೆ, ಸದಸ್ಯರು ವಿವಿಧ ವಿಷಯಗಳ ಬಗ್ಗೆ ಮಾತನಾಡುತ್ತಾರೆ. ಅವರೆಲ್ಲ ಪಕ್ಷದ ಅಭಿಪ್ರಾಯ ಬಿಂಬಿಸುತ್ತಾರೆ ಎಂದು ಅರ್ಥವಲ್ಲ ಎಂದು ಹೇಳಿದರು.</p>.<p>ಇದೇ ವೇಳೆ ಅವರು, ರಾಜಕೀಯ ಮತ್ತು ಧರ್ಮವನ್ನು ಬೆರೆಸಬಾರದು ಎಂಬ ತರೂರ್ ಅವರ ಅಭಿಪ್ರಾಯವನ್ನು ಒಪ್ಪದಿರಲು ಯಾರಿಗೂ ಸಾಧ್ಯವಿಲ್ಲ. ಧರ್ಮದ ದುರುಪಯೋಗವನ್ನು ಪಕ್ಷವು ಯಾವಾಗಲೂ ವಿರೋಧಿಸುತ್ತದೆ ಎಂದರು.</p>.<p>‘ಇದು ನಂಬಿಕೆಯ ವಿಷಯವೇ ಹೊರತು ಜನರ ವಿಷಯವಲ್ಲ ಅಥವಾ ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ. ಆದರೆ ಕೆಲವರು (ಬಿಜೆಪಿ) ಇದನ್ನು ರಾಜಕೀಯಗೊಳಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>ಇಂಡಿಯಾ ಮೈತ್ರಿಕೂಟದ ಪಕ್ಷಗಳಲ್ಲೇ ವಿಭಿನ್ನ ನಿಲುವುಗಳು ಇವೆ. ಕಾರ್ಯಕ್ರಮದಲ್ಲಿ ತಮ್ಮ ನಾಯಕರು ಭಾಗವಹಿಸುವುದಿಲ್ಲ ಎಂದು ಟಿಎಂಸಿ ಮತ್ತು ಸಿಪಿಎಂ ಸ್ಪಷ್ಟಪಡಿಸಿದ್ದರೆ, ಸಮಾಜವಾದಿ ಪಕ್ಷ, ಜೆಎಂಎಂ ಮತ್ತು ಇತರರು ಆಹ್ವಾನ ಬಂದರೆ ಭಾಗವಹಿಸುವುದಾಗಿ ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕಿ ಸೋನಿಯಾಗಾಂಧಿ ಅವರು ಭಾಗವಹಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.</p>.<p>ವರದಿಗಾರರ ಜತೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು, ಸೋನಿಯಾ ಗಾಂಧಿ, ಖರ್ಗೆ ಮತ್ತು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ ಅವರಿಗೂ ಆಹ್ವಾನ ನೀಡಲಾಗಿದೆ. ಈ ಬಗ್ಗೆ ಸೂಕ್ತ ಸಮಯದಲ್ಲಿ ತೀರ್ಮಾನಿಸಿ ತಿಳಿಸಲಾಗುವುದು ಎಂದು ಹೇಳಿದರು.</p>.<p>‘ಈ ವಿಷಯದಲ್ಲಿ ಆತುರಾತುರವಾಗಿ ನಿರ್ಧಾರ ಕೈಗೊಳ್ಳುವ ಅಗತ್ಯ ಇಲ್ಲ. ಇಂದೇ ಅದನ್ನು ನಿರ್ಧರಿಸಬೇಕು ಎಂದೇನೂ ಇಲ್ಲ. ಇದು ಸೂಕ್ಷ್ಮ ವಿಚಾರ. ಆಹ್ವಾನಿತರಾಗದವರು ಈಗ ಟೀಕೆಗಳನ್ನು ಮಾಡುತ್ತಿದ್ದಾರೆ’ ಎಂದರು.</p>.<p>ಕಾರ್ಯಕ್ರಮಕ್ಕೆ ಹಾಜರಾಗುವ ಕುರಿತು ನಾಯಕರು ಪರ ಮತ್ತು ವಿರೋಧ ಹೇಳಿಕೆಗಳನ್ನು ನೀಡುತ್ತಿರುವುದು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ ಎಂದು ಮೂಲಗಳು ಹೇಳಿವೆ.</p>.<p>ಸ್ಯಾಮ್ ಪಿತ್ರೋಡಾ ಅವರು ರಾಮಮಂದಿರ ಪ್ರಮುಖ ವಿಷಯವಲ್ಲ ಎಂದು ಹೇಳಿದ್ದನ್ನು ಕಾಂಗ್ರೆಸ್ ಗುರಿಯಾಗಿಸಲು ಬಿಜೆಪಿ ಬಳಸಿಕೊಂಡಿತು ಎಂದು ಹೇಳಿದ ಹಿರಿಯ ನಾಯಕರೊಬ್ಬರು ಪಿತ್ರೋಡಾ ಅಂಥವರು ಪಕ್ಷದ ಪರವಾಗಿ ಮಾತನಾಡುವುದಿಲ್ಲ ಎಂದರು.</p>.<p>‘ಅವರು ಅವರ ಅಭಿಪ್ರಾಯ ಹೇಳಿದ್ದಾರೆ. ಅದು ಕಾಂಗ್ರೆಸ್ ಅಭಿಪ್ರಾಯ ಅಲ್ಲ. ಕಾಂಗ್ರೆಸ್ ಅಭಿಪ್ರಾಯವನ್ನು ಚರ್ಚಿಸಿ ನಿರ್ಧರಿಸಲಾಗುವುದು’ ಎಂದರು.</p>.<p>ಕಾರ್ಯಕ್ರಮವನ್ನು ಬಿಜೆಪಿ ರಾಜಕೀಯಕರಣಗೊಳಿಸುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್ ಅವರು ಹೇಳಿರುವ ಬಗ್ಗೆ, ಸದಸ್ಯರು ವಿವಿಧ ವಿಷಯಗಳ ಬಗ್ಗೆ ಮಾತನಾಡುತ್ತಾರೆ. ಅವರೆಲ್ಲ ಪಕ್ಷದ ಅಭಿಪ್ರಾಯ ಬಿಂಬಿಸುತ್ತಾರೆ ಎಂದು ಅರ್ಥವಲ್ಲ ಎಂದು ಹೇಳಿದರು.</p>.<p>ಇದೇ ವೇಳೆ ಅವರು, ರಾಜಕೀಯ ಮತ್ತು ಧರ್ಮವನ್ನು ಬೆರೆಸಬಾರದು ಎಂಬ ತರೂರ್ ಅವರ ಅಭಿಪ್ರಾಯವನ್ನು ಒಪ್ಪದಿರಲು ಯಾರಿಗೂ ಸಾಧ್ಯವಿಲ್ಲ. ಧರ್ಮದ ದುರುಪಯೋಗವನ್ನು ಪಕ್ಷವು ಯಾವಾಗಲೂ ವಿರೋಧಿಸುತ್ತದೆ ಎಂದರು.</p>.<p>‘ಇದು ನಂಬಿಕೆಯ ವಿಷಯವೇ ಹೊರತು ಜನರ ವಿಷಯವಲ್ಲ ಅಥವಾ ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ. ಆದರೆ ಕೆಲವರು (ಬಿಜೆಪಿ) ಇದನ್ನು ರಾಜಕೀಯಗೊಳಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>ಇಂಡಿಯಾ ಮೈತ್ರಿಕೂಟದ ಪಕ್ಷಗಳಲ್ಲೇ ವಿಭಿನ್ನ ನಿಲುವುಗಳು ಇವೆ. ಕಾರ್ಯಕ್ರಮದಲ್ಲಿ ತಮ್ಮ ನಾಯಕರು ಭಾಗವಹಿಸುವುದಿಲ್ಲ ಎಂದು ಟಿಎಂಸಿ ಮತ್ತು ಸಿಪಿಎಂ ಸ್ಪಷ್ಟಪಡಿಸಿದ್ದರೆ, ಸಮಾಜವಾದಿ ಪಕ್ಷ, ಜೆಎಂಎಂ ಮತ್ತು ಇತರರು ಆಹ್ವಾನ ಬಂದರೆ ಭಾಗವಹಿಸುವುದಾಗಿ ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>