ಹೈದರಾಬಾದ್: 2019ರ ಸಾರ್ವತ್ರಿಕ ಚುನಾವಣೆ ಮುನ್ನ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕೆಲಸ ಆರಂಭವಾಗುತ್ತದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಶುಕ್ರವಾರ ಹೈದರಾಬಾದ್ನಲ್ಲಿ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ಚುನಾವಣೆಗೆ ಮುನ್ನ ಮಂದಿರ ನಿರ್ಮಾಣಕ್ಕಿರುವ ಸಮಸ್ಯೆಯನ್ನು ಪರಿಹರಿಸುವುದಾಗಿ ಹೇಳಿದ್ದಾರೆ.