ಟ್ರಸ್ಟ್ನ ಮೇಲ್ವಿಚಾರಣೆಯಲ್ಲಿ ದೇವಾಲಯದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
ನೆಲಮಹಡಿಯಲ್ಲಿರುವ ಗರ್ಭಗುಡಿಯಲ್ಲಿ ರಾಮನ ವಿಗ್ರಹವನ್ನು ಸ್ಥಾಪಿಸಲಾಗುತ್ತದೆ. ದೇವಾಲಯದ ನೆಲಮಹಡಿ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ. ಹೀಗಾಗಿ ಪ್ರಾಣ ಪ್ರತಿಷ್ಠಾಪನೆಗೆ ಯಾವುದೇ ಸಮಸ್ಯೆಯಿಲ್ಲ. ಕಾರ್ಯಕ್ರಮಕ್ಕೆ 4 ಸಾವಿರ ಸಾಧುಗಳಿಗೆ ಆಹ್ವಾನ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಜ.22 ರಂದು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದ ವಿಧಿವಿಧಾನಗಳು ಜನವರಿ 16 ರಿಂದ ಆರಂಭಗೊಳ್ಳಲಿದೆ ಎಂದು ಟ್ರಸ್ಟ್ ತಿಳಿಸಿದೆ.