<p class="title"><strong>ಚೆನ್ನೈ: </strong>‘ವಿವಿಧ ಸಮುದಾಯಗಳ ನಿಖರವಾದ ಜನಸಂಖ್ಯೆಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಜಾತಿ ಆಧಾರಿತ ಗಣತಿ ಅಗತ್ಯವಾಗಿದೆ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಅವರು ಭಾನುವಾರ ಹೇಳಿದ್ದಾರೆ.</p>.<p class="title">ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಾತಿ ಗಣತಿಯಿಂದಾಗಿ ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಬಿಜೆಪಿ ನೇತೃತ್ವದ ಸರ್ಕಾರವು ನೀಡಿರುವ ಶೇ 10 ರಷ್ಟು ಮೀಸಲಾತಿ ವ್ಯವಸ್ಥೆ ಮೇಲೆ ಇದು ಯಾವುದೇ ಪರಿಣಾಮ ಬೀರವುದಿಲ್ಲ’ ಎಂದೂ ಸ್ಪಷ್ಟಪಡಿಸಿದ್ದಾರೆ.</p>.<p class="title">‘ಮೀಸಲಾತಿ ಹೆಚ್ಚಿಸುವಂತೆ ಕೋರಿ ವಿವಿಧ ಸಮುದಾಯಗಳಿಂದ ಬೇಡಿಕೆ ಬರುತ್ತಿದೆ. ಉದಾಹರಣೆಗೆ ತಮಿಳುನಾಡು ಶೇ 69ರಷ್ಟು ಪ್ರಮಾಣದಲ್ಲಿ ಮೀಸಲಾತಿಯನ್ನು ಖಾತ್ರಿ ಪಡಿಸುತ್ತದೆ. ಅಂತೆಯೇ ದೇಶದಾದ್ಯಂತ ಹಲವು ಸಮುದಾಯಗಳಿಗೆ ಮೀಸಲಾತಿಯನ್ನು ಹೆಚ್ಚಿಸುವ ಅಗತ್ಯವಿದೆ ಎಂಬುದನ್ನು ಗಮನಿಸಬೇಕಿದೆ’ ಎಂದೂ ಅವರು ಹೇಳಿದರು.</p>.<p class="title">‘ವೈಯಕ್ತಿಕವಾಗಿ ನಾನು ಜಾತಿ ಆಧಾರಿತ ಜನಗಣತಿಗೆ ಆದ್ಯತೆ ನೀಡುತ್ತೇನೆ. ಆದರೆ ಅದನ್ನು ನಿರ್ಧರಿಸುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟ ವಿಷಯ’ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಮುಖ್ಯಸ್ಥರೂ ಆಗಿರುವ ರಾಮದಾಸ್ ತಿಳಿಸಿದರು.</p>.<p class="title">‘ದಶಕದ ನಂತರ ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದಿದೆ. ರಾಜ್ಯದ ಜನರು ನೀಡಿರುವ ಸ್ಪಷ್ಟಸಂದೇಶವನ್ನು ಒಪ್ಪಿಕೊಳ್ಳಬೇಕು. ಆದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿನ ಜನರು ಎಐಎಡಿಎಂಕೆ–ಬಿಜೆಪಿ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತರುತ್ತಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ರಾಜ್ಯದಲ್ಲಿ ದಲಿತರು ದೌರ್ಜನ್ಯಕ್ಕೊಳಗಾಗದಂತೆ ರಕ್ಷಣೆ ನೀಡಬೇಕು. ಅಂತೆಯೇ ಭೂರಹಿತ ಬಡವರಿಗೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಉಚಿತವಾಗಿ ಭೂಮಿಯನ್ನು ನೀಡಬೇಕು’ ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚೆನ್ನೈ: </strong>‘ವಿವಿಧ ಸಮುದಾಯಗಳ ನಿಖರವಾದ ಜನಸಂಖ್ಯೆಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಜಾತಿ ಆಧಾರಿತ ಗಣತಿ ಅಗತ್ಯವಾಗಿದೆ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಅವರು ಭಾನುವಾರ ಹೇಳಿದ್ದಾರೆ.</p>.<p class="title">ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಾತಿ ಗಣತಿಯಿಂದಾಗಿ ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಬಿಜೆಪಿ ನೇತೃತ್ವದ ಸರ್ಕಾರವು ನೀಡಿರುವ ಶೇ 10 ರಷ್ಟು ಮೀಸಲಾತಿ ವ್ಯವಸ್ಥೆ ಮೇಲೆ ಇದು ಯಾವುದೇ ಪರಿಣಾಮ ಬೀರವುದಿಲ್ಲ’ ಎಂದೂ ಸ್ಪಷ್ಟಪಡಿಸಿದ್ದಾರೆ.</p>.<p class="title">‘ಮೀಸಲಾತಿ ಹೆಚ್ಚಿಸುವಂತೆ ಕೋರಿ ವಿವಿಧ ಸಮುದಾಯಗಳಿಂದ ಬೇಡಿಕೆ ಬರುತ್ತಿದೆ. ಉದಾಹರಣೆಗೆ ತಮಿಳುನಾಡು ಶೇ 69ರಷ್ಟು ಪ್ರಮಾಣದಲ್ಲಿ ಮೀಸಲಾತಿಯನ್ನು ಖಾತ್ರಿ ಪಡಿಸುತ್ತದೆ. ಅಂತೆಯೇ ದೇಶದಾದ್ಯಂತ ಹಲವು ಸಮುದಾಯಗಳಿಗೆ ಮೀಸಲಾತಿಯನ್ನು ಹೆಚ್ಚಿಸುವ ಅಗತ್ಯವಿದೆ ಎಂಬುದನ್ನು ಗಮನಿಸಬೇಕಿದೆ’ ಎಂದೂ ಅವರು ಹೇಳಿದರು.</p>.<p class="title">‘ವೈಯಕ್ತಿಕವಾಗಿ ನಾನು ಜಾತಿ ಆಧಾರಿತ ಜನಗಣತಿಗೆ ಆದ್ಯತೆ ನೀಡುತ್ತೇನೆ. ಆದರೆ ಅದನ್ನು ನಿರ್ಧರಿಸುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟ ವಿಷಯ’ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಮುಖ್ಯಸ್ಥರೂ ಆಗಿರುವ ರಾಮದಾಸ್ ತಿಳಿಸಿದರು.</p>.<p class="title">‘ದಶಕದ ನಂತರ ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದಿದೆ. ರಾಜ್ಯದ ಜನರು ನೀಡಿರುವ ಸ್ಪಷ್ಟಸಂದೇಶವನ್ನು ಒಪ್ಪಿಕೊಳ್ಳಬೇಕು. ಆದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿನ ಜನರು ಎಐಎಡಿಎಂಕೆ–ಬಿಜೆಪಿ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತರುತ್ತಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ರಾಜ್ಯದಲ್ಲಿ ದಲಿತರು ದೌರ್ಜನ್ಯಕ್ಕೊಳಗಾಗದಂತೆ ರಕ್ಷಣೆ ನೀಡಬೇಕು. ಅಂತೆಯೇ ಭೂರಹಿತ ಬಡವರಿಗೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಉಚಿತವಾಗಿ ಭೂಮಿಯನ್ನು ನೀಡಬೇಕು’ ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>