<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ಪಿಎಂಕೆ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿರುವ ಎಸ್.ರಾಮದಾಸ್ ತಮ್ಮ ಪುತ್ರ ಅನ್ಬುಮಣಿ ರಾಮದಾಸ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ. </p><p>ಹಲವು ತಿಂಗಳುಗಳಿಂದ ರಾಮದಾಸ್ ಕುಟುಂಬದಲ್ಲಿ ಪಕ್ಷದ ಮೇಲೆ ಹಿಡಿತ ಸಾಧಿಸಲು ಕಲಹ ನಡೆಯುತ್ತಿತ್ತು. ಇದೀಗ ರಾಮದಾಸ್ ಅವರು ಪುತ್ರನನ್ನು ಪಕ್ಷದಿಂದ ಹೊರ ಹಾಕಿದ್ದಾರೆ.</p><p>ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿದ ರಾಮದಾಸ್ ಅವರು ಅನ್ಬುಮಣಿಯನ್ನು ಪಕ್ಷದಿಂದ ಹೊರ ಹಾಕಲಾಗಿದೆ ಎಂದು ಹೇಳಿದ್ದಾರೆ. </p><p>ಪಕ್ಷದ ಅಧ್ಯಕ್ಷರ ನಿರ್ಧಾರವೇ ಅಂತಿಮವಾಗಿದ್ದು ಇದನ್ನು ಯಾರು ವಿರೋಧಿಸಲು ಸಾಧ್ಯವಿಲ್ಲ ಎಂದರು. ಅನ್ಬುಮಣಿ ಪಿಎಂಕೆ ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ. ಅವರು ರಾಜಕೀಯದಲ್ಲಿ ಇರಲು ಅರ್ಹರಲ್ಲ ಎಂದರು. ನನ್ನ ಅನುಮತಿ ಇಲ್ಲದೇ ಅವರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು ಎಂದು ಆರೋಪಿಸಿದರು.</p><p>ಅನ್ಬುಮಣಿ ಅವರು ಈ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಉತ್ತರ ತಮಿಳುನಾಡಿನಲ್ಲಿ ಅವರು ತಮ್ಮ ಪಾದಯಾತ್ರೆಯನ್ನು ಮುಂದುವರಿಸಿದ್ದಾರೆ. </p><p>ಕಳೆದ ಏಪ್ರಿಲ್ ತಿಂಗಳಲ್ಲಿ ರಾಮದಾಸ್ ಅವರು ಪಿಎಂಕೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅನ್ಬುಮಣಿಯನ್ನು ಕಾರ್ಯಕಾರಿ ಅಧ್ಯಕ್ಷರಾಗಿ ನಿಯೋಜಿಸಿದ್ದರು. ಅನ್ಬುಮಣಿಗೆ ಪಕ್ಷದ ಅಧ್ಯಕ್ಷ ಹುದ್ದೆಯ ಮೇಲೆ ಕಣ್ಣಿತ್ತು. ಆಗಿನಿಂದ ಅಪ್ಪ–ಮಗನ ನಡುವೆ ಕಲಹ ಆರಂಭವಾಗಿತ್ತು.</p><p>ಅನ್ಬುಮಣಿ ಬಿಜೆಪಿಗೆ ಹತ್ತಿರವಾಗುತ್ತಿರುವುದು ರಾಮದಾಸ್ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ. ಬಿಜೆಪಿಯೊಂದಿಗಿನ ಮೈತ್ರಿಯ ಪರಿಣಾಮ ಪಿಎಂಕೆಗೆ ತೀವ್ರ ಹಿನ್ನಡೆಯಾಗಿದೆ ಎಂಬುದು ರಾಮದಾಸ್ ವಾದ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ಪಿಎಂಕೆ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿರುವ ಎಸ್.ರಾಮದಾಸ್ ತಮ್ಮ ಪುತ್ರ ಅನ್ಬುಮಣಿ ರಾಮದಾಸ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ. </p><p>ಹಲವು ತಿಂಗಳುಗಳಿಂದ ರಾಮದಾಸ್ ಕುಟುಂಬದಲ್ಲಿ ಪಕ್ಷದ ಮೇಲೆ ಹಿಡಿತ ಸಾಧಿಸಲು ಕಲಹ ನಡೆಯುತ್ತಿತ್ತು. ಇದೀಗ ರಾಮದಾಸ್ ಅವರು ಪುತ್ರನನ್ನು ಪಕ್ಷದಿಂದ ಹೊರ ಹಾಕಿದ್ದಾರೆ.</p><p>ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿದ ರಾಮದಾಸ್ ಅವರು ಅನ್ಬುಮಣಿಯನ್ನು ಪಕ್ಷದಿಂದ ಹೊರ ಹಾಕಲಾಗಿದೆ ಎಂದು ಹೇಳಿದ್ದಾರೆ. </p><p>ಪಕ್ಷದ ಅಧ್ಯಕ್ಷರ ನಿರ್ಧಾರವೇ ಅಂತಿಮವಾಗಿದ್ದು ಇದನ್ನು ಯಾರು ವಿರೋಧಿಸಲು ಸಾಧ್ಯವಿಲ್ಲ ಎಂದರು. ಅನ್ಬುಮಣಿ ಪಿಎಂಕೆ ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ. ಅವರು ರಾಜಕೀಯದಲ್ಲಿ ಇರಲು ಅರ್ಹರಲ್ಲ ಎಂದರು. ನನ್ನ ಅನುಮತಿ ಇಲ್ಲದೇ ಅವರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು ಎಂದು ಆರೋಪಿಸಿದರು.</p><p>ಅನ್ಬುಮಣಿ ಅವರು ಈ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಉತ್ತರ ತಮಿಳುನಾಡಿನಲ್ಲಿ ಅವರು ತಮ್ಮ ಪಾದಯಾತ್ರೆಯನ್ನು ಮುಂದುವರಿಸಿದ್ದಾರೆ. </p><p>ಕಳೆದ ಏಪ್ರಿಲ್ ತಿಂಗಳಲ್ಲಿ ರಾಮದಾಸ್ ಅವರು ಪಿಎಂಕೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅನ್ಬುಮಣಿಯನ್ನು ಕಾರ್ಯಕಾರಿ ಅಧ್ಯಕ್ಷರಾಗಿ ನಿಯೋಜಿಸಿದ್ದರು. ಅನ್ಬುಮಣಿಗೆ ಪಕ್ಷದ ಅಧ್ಯಕ್ಷ ಹುದ್ದೆಯ ಮೇಲೆ ಕಣ್ಣಿತ್ತು. ಆಗಿನಿಂದ ಅಪ್ಪ–ಮಗನ ನಡುವೆ ಕಲಹ ಆರಂಭವಾಗಿತ್ತು.</p><p>ಅನ್ಬುಮಣಿ ಬಿಜೆಪಿಗೆ ಹತ್ತಿರವಾಗುತ್ತಿರುವುದು ರಾಮದಾಸ್ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ. ಬಿಜೆಪಿಯೊಂದಿಗಿನ ಮೈತ್ರಿಯ ಪರಿಣಾಮ ಪಿಎಂಕೆಗೆ ತೀವ್ರ ಹಿನ್ನಡೆಯಾಗಿದೆ ಎಂಬುದು ರಾಮದಾಸ್ ವಾದ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>