<p><strong>ನವದೆಹಲಿ:</strong> ‘ಯಾವ ರಾಮಲೀಲಾ ಕಾರ್ಯಕ್ರಮ ರಾತ್ರಿ 10ಕ್ಕೆ ಕೊನೆಗೊಳ್ಳುತ್ತದೆ? ಹಿಂದೂಗಳ ಹಬ್ಬಗಳು ಸದಾ ಸಂಕಷ್ಟಕ್ಕೆ ಸಿಲುಕಿವೆ? ದೆಹಲಿಯಲ್ಲಿ ರಾಮರಾಜ್ಯ ಸ್ಥಾಪನೆಯಾಗಬೇಕು. ಅದಕ್ಕಾಗಿ ನಾವೆಲ್ಲರೂ ಕೈಜೋಡಿಸಬೇಕು’ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹೇಳಿದ್ದಾರೆ.</p><p>ದುರ್ಗಾಪೂಜೆ ಮತ್ತು ರಾಮಲೀಲಾ ಕಾರ್ಯಕ್ರಮಗಳನ್ನು ಮಧ್ಯರಾತ್ರಿಯವರೆಗೂ ನಡೆಸಲು ಸರ್ಕಾರ ಅನುಮತಿ ನೀಡಿದೆ. </p><p>‘ಗುಜರಾತ್ನಲ್ಲಿ ದಾಂಡಿಯಾ ಇಡೀ ರಾತ್ರಿ ನಡೆಯುತ್ತದೆ. ಹಲವೆಡೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತದೆ. ಹಾಗಿದ್ದರೆ ದೆಹಲಿ ಜನರ ತಪ್ಪಾದರೂ ಏನು? ಹೀಗಾಗಿ ನವರಾತ್ರಿ ಉತ್ಸವಕ್ಕೆ ಈ ಬಾರಿ ರಾತ್ರಿ 12ರವರೆಗೆ ಅನುಮತಿ ನೀಡಲಾಗಿದೆ. ಇದರಿಂದಾಗಿ ರಾಮಲೀಲಾ, ದುರ್ಗಾಪೂಜೆ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಧ್ಯರಾತ್ರಿ 12ರವರೆಗೂ ನಡೆಸಬಹುದು’ ಎಂದಿದ್ದಾರೆ.</p><p>ರಾಮಲೀಲಾ, ದುರ್ಗಾಪೂಜೆ, ದಸರಾ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಸುವ ಅವಧಿಯನ್ನು ದೆಹಲಿ ಸರ್ಕಾರ ಸೋಮವಾರದಿಂದ ವಿಸ್ತರಿಸಿದೆ. ಈ ಆದೇಶವು ಸೆ. 22ರಿಂದ ಅ. 3ರವರೆಗೆ ಇರಲಿದೆ. ಸರ್ಕಾರದ ಈ ನಿರ್ಧಾರಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸೆಕ್ಸೇನಾ ಅನುಮೋದನೆ ನೀಡಿದ್ದಾರೆ.</p><p>ಈ ಆದೇಶವು ಶಬ್ದಮಾಲಿನ್ಯದ ನಿರ್ಬಂಧಗಳಿಗೆ ಒಳಪಟ್ಟು ಕಾರ್ಯಕ್ರಮಗಳನ್ನು ರಾತ್ರಿ 10ರ ಬದಲು ಮಧ್ಯರಾತ್ರಿ 12ರವರೆಗೂ ನಡೆಸಲು ಸರ್ಕಾರ ಅನುಮತಿಸಿದೆ. ವಸತಿ ಪ್ರದೇಶಗಳಲ್ಲಿ ಧ್ವನಿವರ್ಧಕಗಳಿಂದ ಹೊರಹೊಮ್ಮುವ ಶಬ್ದವು 45 ಡೆಸಿಬಲ್ ಮೀರುವಂತಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.</p><p>ಸರ್ಕಾರದ ಈ ನಿರ್ಧಾರಕ್ಕೆ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರು ಮುಖ್ಯಮಂತ್ರಿ ಮತ್ತು ಲೆಪ್ಟಿನೆಂಟ್ ಗವರ್ನರ್ಗೆ ಧನ್ಯವಾದ ಹೇಳಿದ್ದಾರೆ. ರಾಮಲೀಲಾ ಸಮಿತಿಯ ಬಹುದಿನಗಳ ಬೇಡಿಕೆಯಾಗಿತ್ತು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಯಾವ ರಾಮಲೀಲಾ ಕಾರ್ಯಕ್ರಮ ರಾತ್ರಿ 10ಕ್ಕೆ ಕೊನೆಗೊಳ್ಳುತ್ತದೆ? ಹಿಂದೂಗಳ ಹಬ್ಬಗಳು ಸದಾ ಸಂಕಷ್ಟಕ್ಕೆ ಸಿಲುಕಿವೆ? ದೆಹಲಿಯಲ್ಲಿ ರಾಮರಾಜ್ಯ ಸ್ಥಾಪನೆಯಾಗಬೇಕು. ಅದಕ್ಕಾಗಿ ನಾವೆಲ್ಲರೂ ಕೈಜೋಡಿಸಬೇಕು’ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹೇಳಿದ್ದಾರೆ.</p><p>ದುರ್ಗಾಪೂಜೆ ಮತ್ತು ರಾಮಲೀಲಾ ಕಾರ್ಯಕ್ರಮಗಳನ್ನು ಮಧ್ಯರಾತ್ರಿಯವರೆಗೂ ನಡೆಸಲು ಸರ್ಕಾರ ಅನುಮತಿ ನೀಡಿದೆ. </p><p>‘ಗುಜರಾತ್ನಲ್ಲಿ ದಾಂಡಿಯಾ ಇಡೀ ರಾತ್ರಿ ನಡೆಯುತ್ತದೆ. ಹಲವೆಡೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತದೆ. ಹಾಗಿದ್ದರೆ ದೆಹಲಿ ಜನರ ತಪ್ಪಾದರೂ ಏನು? ಹೀಗಾಗಿ ನವರಾತ್ರಿ ಉತ್ಸವಕ್ಕೆ ಈ ಬಾರಿ ರಾತ್ರಿ 12ರವರೆಗೆ ಅನುಮತಿ ನೀಡಲಾಗಿದೆ. ಇದರಿಂದಾಗಿ ರಾಮಲೀಲಾ, ದುರ್ಗಾಪೂಜೆ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಧ್ಯರಾತ್ರಿ 12ರವರೆಗೂ ನಡೆಸಬಹುದು’ ಎಂದಿದ್ದಾರೆ.</p><p>ರಾಮಲೀಲಾ, ದುರ್ಗಾಪೂಜೆ, ದಸರಾ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಸುವ ಅವಧಿಯನ್ನು ದೆಹಲಿ ಸರ್ಕಾರ ಸೋಮವಾರದಿಂದ ವಿಸ್ತರಿಸಿದೆ. ಈ ಆದೇಶವು ಸೆ. 22ರಿಂದ ಅ. 3ರವರೆಗೆ ಇರಲಿದೆ. ಸರ್ಕಾರದ ಈ ನಿರ್ಧಾರಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸೆಕ್ಸೇನಾ ಅನುಮೋದನೆ ನೀಡಿದ್ದಾರೆ.</p><p>ಈ ಆದೇಶವು ಶಬ್ದಮಾಲಿನ್ಯದ ನಿರ್ಬಂಧಗಳಿಗೆ ಒಳಪಟ್ಟು ಕಾರ್ಯಕ್ರಮಗಳನ್ನು ರಾತ್ರಿ 10ರ ಬದಲು ಮಧ್ಯರಾತ್ರಿ 12ರವರೆಗೂ ನಡೆಸಲು ಸರ್ಕಾರ ಅನುಮತಿಸಿದೆ. ವಸತಿ ಪ್ರದೇಶಗಳಲ್ಲಿ ಧ್ವನಿವರ್ಧಕಗಳಿಂದ ಹೊರಹೊಮ್ಮುವ ಶಬ್ದವು 45 ಡೆಸಿಬಲ್ ಮೀರುವಂತಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.</p><p>ಸರ್ಕಾರದ ಈ ನಿರ್ಧಾರಕ್ಕೆ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರು ಮುಖ್ಯಮಂತ್ರಿ ಮತ್ತು ಲೆಪ್ಟಿನೆಂಟ್ ಗವರ್ನರ್ಗೆ ಧನ್ಯವಾದ ಹೇಳಿದ್ದಾರೆ. ರಾಮಲೀಲಾ ಸಮಿತಿಯ ಬಹುದಿನಗಳ ಬೇಡಿಕೆಯಾಗಿತ್ತು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>