ರಾಷ್ಟ್ರಪತಿಗಳು ಮಾಡಿರುವ ಟ್ವೀಟ್ ಈ ರೀತಿ ಇದೆ:ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ — ರಾಷ್ಟ್ರಪತಿ ಕೊವಿಂದ್.
ಹಾರ್ಧಿಕ ಪದದಲ್ಲಿ ‘ಧಿ’ ಅಕ್ಷರವನ್ನು ಮಹಾಪ್ರಾಣ ಮಾಡಿದ್ದಾರೆ. ‘ದಿ‘ ಅಕ್ಷರ ಅಲ್ಪಪ್ರಾಣವಾಗಬೇಕಿತ್ತು. ಹಾರ್ದಿಕ ಸರಿಯಾದ ಪದ ಬಳಕೆಯಾಗಿದೆ. ಹಾರ್ದಿಕ ಎಂದರೆ ಹೃದಯದಿಂದ ಎಂಬ ಅರ್ಥವನ್ನು ಕೊಡುತ್ತದೆ.
ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ — ರಾಷ್ಟ್ರಪತಿ ಕೊವಿಂದ್.