2019ರ ಲೋಕಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ನಟಿ ಜಯಪ್ರದಾ ವಿರುದ್ಧ ಉತ್ತರ ಪ್ರದೇಶದ ರಾಂಪುರ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.ಕೂಡಲೇ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆಯನ್ನೂ ನೀಡಿದೆ.ಈ ವಿಚಾರಕ್ಕೆ ಸಂಬಂಧಪಟ್ಟಂತೆ 7 ಬಾರಿ ನೋಟಿಸ್ ನೀಡಿದ್ದರೂ ಯಾವುದಕ್ಕೂ ಉತ್ತರಿಸದ ಜಯಪ್ರದಾ ಬಂಧನಕ್ಕೆ ತಂಡ ರಚಿಸಲೂ ಕೋರ್ಟ್ ಆದೇಶಿಸಿದೆ.