<p><strong>ಮುಂಬೈ</strong>: ಅಶ್ಲೀಲ ಹೇಳಿಕೆ ನೀಡಿದ ಸಂಬಂಧ ತನಿಖೆ ಎದುರಿಸುತ್ತಿರುವ ಪಾಡ್ಕಾಸ್ಟರ್ ರಣವೀರ್ ಅಲಹಾಬಾದಿಯಾ ಅವರ ಫ್ಲ್ಯಾಟ್ಗೆ ಬೀಗ ಹಾಕಿದ್ದು, ಮೊಬೈಲ್ ಸ್ವಿಚ್ಆಫ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>'India Got Latent’ ಶೋನಲ್ಲಿ ಭಾಗವಹಿಸಿದ್ದ ವೇಳೆ ರಣವೀರ್, ಪೋಷಕರು ಮತ್ತು ಲೈಂಗಿಕತೆ ವಿಚಾರವಾಗಿ ಅಶ್ಲೀಲವಾಗಿ ಮಾತನಾಡಿದ್ದರು. ಈ ಸಂಬಂಧ ರಣವೀರ್, ಕಾರ್ಯಕ್ರಮದ ರೂವಾರಿ ಸಮಯ್ ರೈನಾ ಮತ್ತಿತ್ತರ ವಿರುದ್ಧ ಪ್ರಕರಣ ದಾಖಲಾಗಿದೆ.</p><p>ಪ್ರಕರಣ ಸಂಬಂಧ ಫೆ.13ರಂದು ತನಿಖೆಗೆ ಹಾಜರಾಗುವಂತೆ ರಣವೀರ್ಗೆ ಖಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಸಮನ್ಸ್ ನೀಡಿದ್ದರು. ‘ಮಾಧ್ಯಮಗಳ ಎದುರು ಬರಲು ಭಯವಾಗುತ್ತದೆ’ ಎಂಬ ಕಾರಣ ನೀಡಿ ತನಿಖೆಗೆ ಗೈರಾಗಿದ್ದರು. ಅಲ್ಲದೇ ಮನೆಗೆ ಬಂದು ಹೇಳಿಕೆ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದರು.</p><p>ರಣವೀರ್ ಮನವಿಯನ್ನು ನಿರಾಕರಿಸಿದ್ದ ಪೊಲೀಸರು ಫೆ.14ರಂದು ತನಿಖೆ ಎದುರಿಸುವಂತೆ ತಿಳಿಸಿದ್ದರು. ಆದರೆ ಶುಕ್ರವಾರವೂ ರಣವೀರ್ ತನಿಖೆಗೆ ಹಾಜರಾಗಿರಲಿಲ್ಲ. </p><p>ಮುಂಬೈನ ವೆರ್ಸೋವಾ ಪ್ರದೇಶದಲ್ಲಿರುವ ಅವರ ಫ್ಲ್ಯಾಟ್ಗೆ ಪೊಲೀಸರು ಭೇಟಿ ನೀಡಿದ ವೇಳೆ ಬೀಗ ಹಾಕಿರುವುದು ಕಂಡುಬಂದಿದೆ. ಫೋನ್ ಸ್ವಿಚ್ಆಫ್ ಮಾಡಿಕೊಂಡಿದ್ದರಿಂದ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಇನ್ನು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿರುವ ಸಮಯ್ ರೈನಾ ಪರ ವಕೀಲರು, ತಮ್ಮ ಕಕ್ಷಿದಾರ ಅಮೆರಿಕದಲ್ಲಿರುವುದರಿಂದ ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯ ನೀಡುವಂತೆ ಕೋರಿದ್ದಾರೆ. ವಕೀಲರ ಮನವಿ ಮೇರೆಗೆ ಮಾರ್ಚ್ 10ರ ಒಳಗೆ ತನಿಖೆ ಎದುರಿಸುವಂತೆ ಸೂಚಿಸಿದ್ದಾರೆ.</p><p>ಪ್ರಕರಣ ಸಂಬಂಧ ಇದುವೆರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಂಟು ಜನರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಅಶ್ಲೀಲ ಹೇಳಿಕೆ ನೀಡಿದ ಸಂಬಂಧ ತನಿಖೆ ಎದುರಿಸುತ್ತಿರುವ ಪಾಡ್ಕಾಸ್ಟರ್ ರಣವೀರ್ ಅಲಹಾಬಾದಿಯಾ ಅವರ ಫ್ಲ್ಯಾಟ್ಗೆ ಬೀಗ ಹಾಕಿದ್ದು, ಮೊಬೈಲ್ ಸ್ವಿಚ್ಆಫ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>'India Got Latent’ ಶೋನಲ್ಲಿ ಭಾಗವಹಿಸಿದ್ದ ವೇಳೆ ರಣವೀರ್, ಪೋಷಕರು ಮತ್ತು ಲೈಂಗಿಕತೆ ವಿಚಾರವಾಗಿ ಅಶ್ಲೀಲವಾಗಿ ಮಾತನಾಡಿದ್ದರು. ಈ ಸಂಬಂಧ ರಣವೀರ್, ಕಾರ್ಯಕ್ರಮದ ರೂವಾರಿ ಸಮಯ್ ರೈನಾ ಮತ್ತಿತ್ತರ ವಿರುದ್ಧ ಪ್ರಕರಣ ದಾಖಲಾಗಿದೆ.</p><p>ಪ್ರಕರಣ ಸಂಬಂಧ ಫೆ.13ರಂದು ತನಿಖೆಗೆ ಹಾಜರಾಗುವಂತೆ ರಣವೀರ್ಗೆ ಖಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಸಮನ್ಸ್ ನೀಡಿದ್ದರು. ‘ಮಾಧ್ಯಮಗಳ ಎದುರು ಬರಲು ಭಯವಾಗುತ್ತದೆ’ ಎಂಬ ಕಾರಣ ನೀಡಿ ತನಿಖೆಗೆ ಗೈರಾಗಿದ್ದರು. ಅಲ್ಲದೇ ಮನೆಗೆ ಬಂದು ಹೇಳಿಕೆ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದರು.</p><p>ರಣವೀರ್ ಮನವಿಯನ್ನು ನಿರಾಕರಿಸಿದ್ದ ಪೊಲೀಸರು ಫೆ.14ರಂದು ತನಿಖೆ ಎದುರಿಸುವಂತೆ ತಿಳಿಸಿದ್ದರು. ಆದರೆ ಶುಕ್ರವಾರವೂ ರಣವೀರ್ ತನಿಖೆಗೆ ಹಾಜರಾಗಿರಲಿಲ್ಲ. </p><p>ಮುಂಬೈನ ವೆರ್ಸೋವಾ ಪ್ರದೇಶದಲ್ಲಿರುವ ಅವರ ಫ್ಲ್ಯಾಟ್ಗೆ ಪೊಲೀಸರು ಭೇಟಿ ನೀಡಿದ ವೇಳೆ ಬೀಗ ಹಾಕಿರುವುದು ಕಂಡುಬಂದಿದೆ. ಫೋನ್ ಸ್ವಿಚ್ಆಫ್ ಮಾಡಿಕೊಂಡಿದ್ದರಿಂದ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಇನ್ನು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿರುವ ಸಮಯ್ ರೈನಾ ಪರ ವಕೀಲರು, ತಮ್ಮ ಕಕ್ಷಿದಾರ ಅಮೆರಿಕದಲ್ಲಿರುವುದರಿಂದ ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯ ನೀಡುವಂತೆ ಕೋರಿದ್ದಾರೆ. ವಕೀಲರ ಮನವಿ ಮೇರೆಗೆ ಮಾರ್ಚ್ 10ರ ಒಳಗೆ ತನಿಖೆ ಎದುರಿಸುವಂತೆ ಸೂಚಿಸಿದ್ದಾರೆ.</p><p>ಪ್ರಕರಣ ಸಂಬಂಧ ಇದುವೆರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಂಟು ಜನರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>