<p><strong>ಕೋಲ್ಕತ್ತ</strong>: ದಕ್ಷಿಣ ಕೋಲ್ಕತ್ತದ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಜುಲೈ 8ರವರೆಗೆ ವಿಸ್ತರಿಸಿದೆ.</p><p>ಪ್ರಮುಖ ಆರೋಪಿ, ಕಾಲೇಜಿನ ಹಳೆಯ ವಿದ್ಯಾರ್ಥಿ ಮೊನೊಜಿತ್ ಮಿಶ್ರಾ, ಪ್ರಸ್ತುತ ಕಾಲೇಜಿನ ವಿದ್ಯಾರ್ಥಿಗಳಾದ ಜೈಬ್ ಅಹ್ಮದ್ ಮತ್ತು ಪ್ರಮಿತ್ ಮುಖರ್ಜಿ ಅವರನ್ನು ಕಳೆದ ಗುರುವಾರ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರಂಭದಲ್ಲಿ ಆರೋಪಿಗಳನ್ನು 4 ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿತ್ತು.</p><p>ಕಸ್ಟಡಿ ಅವಧಿ ಮುಗಿದ ನಂತರ ನಿನ್ನೆ (ಸೋಮವಾರ) ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯಿತು. ಜುಲೈ 8ರವರೆಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.</p>.Fact Check: ವಿಮಾನದಲ್ಲಿ 11ಎ ಆಸನಕ್ಕೆ ಪ್ರಯಾಣಿಕರ ಜಗಳ ಎನ್ನುವ ಸುದ್ದಿ ಸುಳ್ಳು.ಪ್ರಶ್ನೋತ್ತರ | ವಿಮೆ ಕುರಿತಾದ ಪ್ರಶ್ನೆಗೆ ತಜ್ಞರ ಉತ್ತರ ಇಲ್ಲಿದೆ. <p>ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಭದ್ರತಾ ಸಿಬ್ಬಂದಿ ಪಿನಾಕಿ ಬ್ಯಾನರ್ಜಿ ಅವರನ್ನು ಶನಿವಾರ ಬಂಧಿಸಲಾಗಿದ್ದು, ಮಂಗಳವಾರದವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಆದರೆ ಬ್ಯಾನರ್ಜಿಯ ಪೊಲೀಸ್ ಕಸ್ಟಡಿ ಅವಧಿಯನ್ನು ಜುಲೈ 4 ರವರೆಗೆ ವಿಸ್ತರಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.</p><p>ಜೂನ್ 25 ರಂದು ದಕ್ಷಿಣ ಕೋಲ್ಕತ್ತ ಕಾನೂನು ಕಾಲೇಜು ಕಸ್ಬಾ ಕ್ಯಾಂಪಸ್ನಲ್ಲಿ ಈ ಘಟನೆ ನಡೆದಿತ್ತು. </p>.ಸೀಮೋಲ್ಲಂಘನ ಅಂಕಣ | ಒಪ್ಪಂದದ ಹೊತ್ತಿಗೆ, ಸಿದ್ಧವಿತ್ತು ಸುತ್ತಿಗೆ.ಸಂಪಾದಕೀಯ | ಹೃದಯಾಘಾತಗಳ ದಿಢೀರ್ ಹೆಚ್ಚಳ: ಅಧ್ಯಯನದಿಂದ ಸತ್ಯ ಹೊರಬರಲಿ. <p>ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಲೇಜಿನ ಹಳೆಯ ವಿದ್ಯಾರ್ಥಿಯು ಅದೇ ಕಾಲೇಜಿನಲ್ಲಿ ಗುತ್ತಿಗೆ ಆಧಾರದಲ್ಲಿ ಬೋಧಕೇತರ ಸಿಬ್ಬಂದಿಯಾಗಿದ್ದ. ಅಲ್ಲದೇ, ಅಲಿಪೋರ್ ಪೊಲೀಸ್ ಹಾಗೂ ಸೆಷನ್ ಕೋರ್ಟ್ನಲ್ಲಿ ಕ್ರಿಮಿನಲ್ ವಕೀಲನಾಗಿ ಕಾರ್ಯನಿರ್ವಹಿಸುತ್ತಿದ್ದನು ಎಂದು ವರದಿಯಾಗಿತ್ತು.</p><p>ಈ ನಡುವೆ ಪ್ರಕರಣದ ಪ್ರಮುಖ ಆರೋಪಿಯನ್ನು ಕಾಲೇಜಿನ ಆಡಳಿತ ಮಂಡಳಿ ಕೆಲಸದಿಂದ ಉಚ್ಚಾಟಿಸಿದೆ. ಇತರ ಇಬ್ಬರು ಆರೋಪಿಗಳನ್ನೂ ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ತಿಳಿದು ಬಂದಿದೆ.</p>.ಬೆಂಗಳೂರು ಗ್ರಾಮಾಂತರ ಇನ್ನು ‘ಉತ್ತರ ಜಿಲ್ಲೆ’?.ಲಾಡು ಪ್ರಸಾದದಲ್ಲಿ ಕೀಟ: ಆರೋಪ ತಳ್ಳಿಹಾಕಿದ ಶ್ರೀಶೈಲ ದೇವಸ್ಥಾನ.ಹಾಸನದಲ್ಲಿ ಹೃದಯಾಘಾತ ಪ್ರಕರಣಗಳ ಹೆಚ್ಚಳ: ಹೃದಯ ತಪಾಸಣೆಗೆ ಯುವಜನರ ದಾಂಗುಡಿ.ಹೊಲದ ಒಡೆಯರನ್ನು ಕೂಲಿಯಾಳಾಗಿಸಬೇಡಿ: ಭೂಸ್ವಾಧೀನಕ್ಕೆ ರೈತರ ವಿರೋಧ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ದಕ್ಷಿಣ ಕೋಲ್ಕತ್ತದ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಜುಲೈ 8ರವರೆಗೆ ವಿಸ್ತರಿಸಿದೆ.</p><p>ಪ್ರಮುಖ ಆರೋಪಿ, ಕಾಲೇಜಿನ ಹಳೆಯ ವಿದ್ಯಾರ್ಥಿ ಮೊನೊಜಿತ್ ಮಿಶ್ರಾ, ಪ್ರಸ್ತುತ ಕಾಲೇಜಿನ ವಿದ್ಯಾರ್ಥಿಗಳಾದ ಜೈಬ್ ಅಹ್ಮದ್ ಮತ್ತು ಪ್ರಮಿತ್ ಮುಖರ್ಜಿ ಅವರನ್ನು ಕಳೆದ ಗುರುವಾರ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆರಂಭದಲ್ಲಿ ಆರೋಪಿಗಳನ್ನು 4 ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿತ್ತು.</p><p>ಕಸ್ಟಡಿ ಅವಧಿ ಮುಗಿದ ನಂತರ ನಿನ್ನೆ (ಸೋಮವಾರ) ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯಿತು. ಜುಲೈ 8ರವರೆಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.</p>.Fact Check: ವಿಮಾನದಲ್ಲಿ 11ಎ ಆಸನಕ್ಕೆ ಪ್ರಯಾಣಿಕರ ಜಗಳ ಎನ್ನುವ ಸುದ್ದಿ ಸುಳ್ಳು.ಪ್ರಶ್ನೋತ್ತರ | ವಿಮೆ ಕುರಿತಾದ ಪ್ರಶ್ನೆಗೆ ತಜ್ಞರ ಉತ್ತರ ಇಲ್ಲಿದೆ. <p>ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಭದ್ರತಾ ಸಿಬ್ಬಂದಿ ಪಿನಾಕಿ ಬ್ಯಾನರ್ಜಿ ಅವರನ್ನು ಶನಿವಾರ ಬಂಧಿಸಲಾಗಿದ್ದು, ಮಂಗಳವಾರದವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಆದರೆ ಬ್ಯಾನರ್ಜಿಯ ಪೊಲೀಸ್ ಕಸ್ಟಡಿ ಅವಧಿಯನ್ನು ಜುಲೈ 4 ರವರೆಗೆ ವಿಸ್ತರಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.</p><p>ಜೂನ್ 25 ರಂದು ದಕ್ಷಿಣ ಕೋಲ್ಕತ್ತ ಕಾನೂನು ಕಾಲೇಜು ಕಸ್ಬಾ ಕ್ಯಾಂಪಸ್ನಲ್ಲಿ ಈ ಘಟನೆ ನಡೆದಿತ್ತು. </p>.ಸೀಮೋಲ್ಲಂಘನ ಅಂಕಣ | ಒಪ್ಪಂದದ ಹೊತ್ತಿಗೆ, ಸಿದ್ಧವಿತ್ತು ಸುತ್ತಿಗೆ.ಸಂಪಾದಕೀಯ | ಹೃದಯಾಘಾತಗಳ ದಿಢೀರ್ ಹೆಚ್ಚಳ: ಅಧ್ಯಯನದಿಂದ ಸತ್ಯ ಹೊರಬರಲಿ. <p>ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಲೇಜಿನ ಹಳೆಯ ವಿದ್ಯಾರ್ಥಿಯು ಅದೇ ಕಾಲೇಜಿನಲ್ಲಿ ಗುತ್ತಿಗೆ ಆಧಾರದಲ್ಲಿ ಬೋಧಕೇತರ ಸಿಬ್ಬಂದಿಯಾಗಿದ್ದ. ಅಲ್ಲದೇ, ಅಲಿಪೋರ್ ಪೊಲೀಸ್ ಹಾಗೂ ಸೆಷನ್ ಕೋರ್ಟ್ನಲ್ಲಿ ಕ್ರಿಮಿನಲ್ ವಕೀಲನಾಗಿ ಕಾರ್ಯನಿರ್ವಹಿಸುತ್ತಿದ್ದನು ಎಂದು ವರದಿಯಾಗಿತ್ತು.</p><p>ಈ ನಡುವೆ ಪ್ರಕರಣದ ಪ್ರಮುಖ ಆರೋಪಿಯನ್ನು ಕಾಲೇಜಿನ ಆಡಳಿತ ಮಂಡಳಿ ಕೆಲಸದಿಂದ ಉಚ್ಚಾಟಿಸಿದೆ. ಇತರ ಇಬ್ಬರು ಆರೋಪಿಗಳನ್ನೂ ಕಾಲೇಜಿನಿಂದ ಹೊರಹಾಕಲಾಗಿದೆ ಎಂದು ತಿಳಿದು ಬಂದಿದೆ.</p>.ಬೆಂಗಳೂರು ಗ್ರಾಮಾಂತರ ಇನ್ನು ‘ಉತ್ತರ ಜಿಲ್ಲೆ’?.ಲಾಡು ಪ್ರಸಾದದಲ್ಲಿ ಕೀಟ: ಆರೋಪ ತಳ್ಳಿಹಾಕಿದ ಶ್ರೀಶೈಲ ದೇವಸ್ಥಾನ.ಹಾಸನದಲ್ಲಿ ಹೃದಯಾಘಾತ ಪ್ರಕರಣಗಳ ಹೆಚ್ಚಳ: ಹೃದಯ ತಪಾಸಣೆಗೆ ಯುವಜನರ ದಾಂಗುಡಿ.ಹೊಲದ ಒಡೆಯರನ್ನು ಕೂಲಿಯಾಳಾಗಿಸಬೇಡಿ: ಭೂಸ್ವಾಧೀನಕ್ಕೆ ರೈತರ ವಿರೋಧ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>