<p><strong>ನವದೆಹಲಿ:</strong> ವಿಫಲವಾದ ಅಥವಾ ಮುರಿದುಬಿದ್ದ ಸಂಬಂಧಗಳಿಗೆ ಕೊನೆಗೊಂದು ದಿನ ಅತ್ಯಾಚಾರದಂತಹ ಅಪರಾಧದ ಬಣ್ಣವನ್ನು ನೀಡುವ ‘ಆತಂಕಕಾರಿ ಪ್ರವೃತ್ತಿ’ಯನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. </p>.<p>‘ಈ ವಿಚಾರದಲ್ಲಿ ಅಪರಾಧಿಕ ನ್ಯಾಯದಾನ ವ್ಯವಸ್ಥೆಯ ದುರುಪಯೋಗವು ಕಳವಳಕಾರಿ ಮತ್ತು ಖಂಡನಾರ್ಹ’ ಎಂದು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಆರ್.ಮಹಾದೇವನ್ ಅವರಿದ್ದ ಪೀಠವು ಸೋಮವಾರ ತಿಳಿಸಿದೆ.</p>.<p class="title">ಅತ್ಯಾಚಾರ ಪ್ರಕರಣವೊಂದರ ಎಫ್ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ‘ಮುರಿದುಬಿದ್ದ ಪ್ರತಿಯೊಂದು ಸಂಬಂಧವನ್ನು ಅತ್ಯಾಚಾರದ ಅಪರಾಧವಾಗಿ ಪರಿವರ್ತಿಸುವುದು ಅಪರಾಧದ ಗಂಭೀರತೆಯನ್ನು ಲಘುವಾಗಿ ಕಾಣುವಂತೆ ಮಾಡುವುದಲ್ಲದೆ, ಆರೋಪಿಯ ಮೇಲೆ ಅಳಿಸಲಾಗದ ಕಳಂಕವನ್ನು ಉಂಟುಮಾಡುತ್ತದೆ’ ಎಂದಿದೆ.</p>.<p>ನಿಜವಾದ ಲೈಂಗಿಕ ದೌರ್ಜನ್ಯ, ಬಲವಂತ ನಡೆದಿರುವ ಅಥವಾ ಪರಸ್ಪರ ಸಮ್ಮತಿಯಿಲ್ಲದ ಪ್ರಕರಣಗಳಿಗೆ ಮಾತ್ರ ಅತ್ಯಾಚಾರದ ಅಪರಾಧವನ್ನು ಅನ್ವಯಿಸಹುದು ಎಂದು ಪೀಠವು ಹೇಳಿತು.</p>.<p>2025ರ ಮಾರ್ಚ್ನಲ್ಲಿ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ಛತ್ರಪತಿ ಸಂಭಾಜಿನಗರದಲ್ಲಿ 2024ರ ಆಗಸ್ಟ್ನಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.</p>.<p>‘ಇದು ಮೇಲ್ಮನವಿದಾರ (ಪುರುಷ) ಪ್ರತಿವಾದಿಗೆ (ಮಹಿಳೆ) ಆಮಿಷವೊಡ್ಡಿ ದೈಹಿಕ ಸುಖ ಪಡೆದು, ಆ ಬಳಿಕ ಆಕೆಯಿಂದ ದೂರವಾದ ಪ್ರಕರಣ ಅಲ್ಲ ಎಂಬುದನ್ನು ನಾವು ಕಂಡುಕೊಂಡಿದ್ದೇವೆ. ಇಬ್ಬರ ನಡುವಿನ ಸಂಬಂಧ ಮೂರು ವರ್ಷ ಮುಂದುವರಿಯಿತು. ಮೂರು ವರ್ಷಗಳು ದೀರ್ಘ ಅವಧಿಯಾಗಿದೆ’ ಎಂದು ಪೀಠ ತಿಳಿಸಿತು.</p>.<p>ಇಂತಹ ಪ್ರಕರಣಗಳಲ್ಲಿ, ಸಂಬಂಧವು ಮದುವೆಯಲ್ಲಿ ಕೊನೆಗೊಳ್ಳಲು ವಿಫಲವಾಗಿದೆ ಎಂಬ ಕಾರಣಕ್ಕೆ ಇಬ್ಬರ ನಡುವಿನ ದೈಹಿಕ ಅನ್ಯೋನ್ಯತೆಯನ್ನು ಅತ್ಯಾಚಾರದ ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿಫಲವಾದ ಅಥವಾ ಮುರಿದುಬಿದ್ದ ಸಂಬಂಧಗಳಿಗೆ ಕೊನೆಗೊಂದು ದಿನ ಅತ್ಯಾಚಾರದಂತಹ ಅಪರಾಧದ ಬಣ್ಣವನ್ನು ನೀಡುವ ‘ಆತಂಕಕಾರಿ ಪ್ರವೃತ್ತಿ’ಯನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. </p>.<p>‘ಈ ವಿಚಾರದಲ್ಲಿ ಅಪರಾಧಿಕ ನ್ಯಾಯದಾನ ವ್ಯವಸ್ಥೆಯ ದುರುಪಯೋಗವು ಕಳವಳಕಾರಿ ಮತ್ತು ಖಂಡನಾರ್ಹ’ ಎಂದು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಆರ್.ಮಹಾದೇವನ್ ಅವರಿದ್ದ ಪೀಠವು ಸೋಮವಾರ ತಿಳಿಸಿದೆ.</p>.<p class="title">ಅತ್ಯಾಚಾರ ಪ್ರಕರಣವೊಂದರ ಎಫ್ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ‘ಮುರಿದುಬಿದ್ದ ಪ್ರತಿಯೊಂದು ಸಂಬಂಧವನ್ನು ಅತ್ಯಾಚಾರದ ಅಪರಾಧವಾಗಿ ಪರಿವರ್ತಿಸುವುದು ಅಪರಾಧದ ಗಂಭೀರತೆಯನ್ನು ಲಘುವಾಗಿ ಕಾಣುವಂತೆ ಮಾಡುವುದಲ್ಲದೆ, ಆರೋಪಿಯ ಮೇಲೆ ಅಳಿಸಲಾಗದ ಕಳಂಕವನ್ನು ಉಂಟುಮಾಡುತ್ತದೆ’ ಎಂದಿದೆ.</p>.<p>ನಿಜವಾದ ಲೈಂಗಿಕ ದೌರ್ಜನ್ಯ, ಬಲವಂತ ನಡೆದಿರುವ ಅಥವಾ ಪರಸ್ಪರ ಸಮ್ಮತಿಯಿಲ್ಲದ ಪ್ರಕರಣಗಳಿಗೆ ಮಾತ್ರ ಅತ್ಯಾಚಾರದ ಅಪರಾಧವನ್ನು ಅನ್ವಯಿಸಹುದು ಎಂದು ಪೀಠವು ಹೇಳಿತು.</p>.<p>2025ರ ಮಾರ್ಚ್ನಲ್ಲಿ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ಛತ್ರಪತಿ ಸಂಭಾಜಿನಗರದಲ್ಲಿ 2024ರ ಆಗಸ್ಟ್ನಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.</p>.<p>‘ಇದು ಮೇಲ್ಮನವಿದಾರ (ಪುರುಷ) ಪ್ರತಿವಾದಿಗೆ (ಮಹಿಳೆ) ಆಮಿಷವೊಡ್ಡಿ ದೈಹಿಕ ಸುಖ ಪಡೆದು, ಆ ಬಳಿಕ ಆಕೆಯಿಂದ ದೂರವಾದ ಪ್ರಕರಣ ಅಲ್ಲ ಎಂಬುದನ್ನು ನಾವು ಕಂಡುಕೊಂಡಿದ್ದೇವೆ. ಇಬ್ಬರ ನಡುವಿನ ಸಂಬಂಧ ಮೂರು ವರ್ಷ ಮುಂದುವರಿಯಿತು. ಮೂರು ವರ್ಷಗಳು ದೀರ್ಘ ಅವಧಿಯಾಗಿದೆ’ ಎಂದು ಪೀಠ ತಿಳಿಸಿತು.</p>.<p>ಇಂತಹ ಪ್ರಕರಣಗಳಲ್ಲಿ, ಸಂಬಂಧವು ಮದುವೆಯಲ್ಲಿ ಕೊನೆಗೊಳ್ಳಲು ವಿಫಲವಾಗಿದೆ ಎಂಬ ಕಾರಣಕ್ಕೆ ಇಬ್ಬರ ನಡುವಿನ ದೈಹಿಕ ಅನ್ಯೋನ್ಯತೆಯನ್ನು ಅತ್ಯಾಚಾರದ ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>