<p><strong>ಮುಂಬೈ</strong>: ಡಿಪೋದಲ್ಲಿ ನಿಂತಿದ್ದ ಬಸ್ ಒಳಗೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ ₹1 ಲಕ್ಷ ಬಹುಮಾನ ನೀಡುವುದಾಗಿ ಪುಣೆ ಪೊಲೀಸರು ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಆರೋಪಿಯನ್ನು ಪತ್ತೆ ಹಚ್ಚಲು 13 ಪೊಲೀಸ್ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್, ‘ಆರೋಪಿಯ ಬಗ್ಗೆ ಮಾಹಿತಿ ನೀಡುವವರಿಗೆ ₹1 ಲಕ್ಷ ಬಹುಮಾನ ನೀಡಲಾಗುವುದು. ಆರೋಪಿಯ ಸುಳಿವು ಸಿಕ್ಕಲ್ಲಿ 020-24442769 ಅಥವಾ 9881670659 ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ಹೆಸರನ್ನು ಗೌಪ್ಯವಾಗಿ ಇಡಲಾಗುವುದ’ ಎಂದು ತಿಳಿಸಿದ್ದಾರೆ.</p><p>ಮಂಗಳವಾರ ಬೆಳಿಗ್ಗೆ ಪುಣೆ ನಗರದ ಸ್ವಾರ್ಗೇಟ್ ಬಸ್ ನಿಲ್ದಾಣದ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಬಸ್ ಒಳಗಡೆ 26 ವರ್ಷದ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಕೃತ್ಯದ ಬಳಿಕ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮಹಿಳೆಯ ಮೇಲೆ ನಡೆದ ಅತ್ಯಾಚಾರ ಕೃತ್ಯವನ್ನು ಖಂಡಿಸಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ಘಟನೆ ಕುರಿತು ತನಿಖೆ ನಡೆಸಿ ಆರೋಪಿಯನ್ನು ಶೀಘ್ರ ಬಂಧಿಸುವಂತೆ ನಿರ್ದೇಶಿಸಿದ್ದಾರೆ.</p>.ಬಸ್ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ; ಅತ್ಯಂತ ನಾಚಿಗೇಡಿನ ಸಂಗತಿ: ಅಜಿತ್ ಪವಾರ್.ರಾಯಗಢ | ಪ್ರವಾಸದ ವೇಳೆ ಹೃದಯಾಘಾತ; 14 ವರ್ಷದ ವಿದ್ಯಾರ್ಥಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಡಿಪೋದಲ್ಲಿ ನಿಂತಿದ್ದ ಬಸ್ ಒಳಗೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ ₹1 ಲಕ್ಷ ಬಹುಮಾನ ನೀಡುವುದಾಗಿ ಪುಣೆ ಪೊಲೀಸರು ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಆರೋಪಿಯನ್ನು ಪತ್ತೆ ಹಚ್ಚಲು 13 ಪೊಲೀಸ್ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್, ‘ಆರೋಪಿಯ ಬಗ್ಗೆ ಮಾಹಿತಿ ನೀಡುವವರಿಗೆ ₹1 ಲಕ್ಷ ಬಹುಮಾನ ನೀಡಲಾಗುವುದು. ಆರೋಪಿಯ ಸುಳಿವು ಸಿಕ್ಕಲ್ಲಿ 020-24442769 ಅಥವಾ 9881670659 ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ಹೆಸರನ್ನು ಗೌಪ್ಯವಾಗಿ ಇಡಲಾಗುವುದ’ ಎಂದು ತಿಳಿಸಿದ್ದಾರೆ.</p><p>ಮಂಗಳವಾರ ಬೆಳಿಗ್ಗೆ ಪುಣೆ ನಗರದ ಸ್ವಾರ್ಗೇಟ್ ಬಸ್ ನಿಲ್ದಾಣದ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಬಸ್ ಒಳಗಡೆ 26 ವರ್ಷದ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಕೃತ್ಯದ ಬಳಿಕ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮಹಿಳೆಯ ಮೇಲೆ ನಡೆದ ಅತ್ಯಾಚಾರ ಕೃತ್ಯವನ್ನು ಖಂಡಿಸಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ಘಟನೆ ಕುರಿತು ತನಿಖೆ ನಡೆಸಿ ಆರೋಪಿಯನ್ನು ಶೀಘ್ರ ಬಂಧಿಸುವಂತೆ ನಿರ್ದೇಶಿಸಿದ್ದಾರೆ.</p>.ಬಸ್ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ; ಅತ್ಯಂತ ನಾಚಿಗೇಡಿನ ಸಂಗತಿ: ಅಜಿತ್ ಪವಾರ್.ರಾಯಗಢ | ಪ್ರವಾಸದ ವೇಳೆ ಹೃದಯಾಘಾತ; 14 ವರ್ಷದ ವಿದ್ಯಾರ್ಥಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>