<p><strong>ಮುಂಬೈ</strong>: ‘ಉದ್ಧವ್ ಠಾಕ್ರೆ ಪತ್ನಿ ರಶ್ಮಿ ಅವರಿಂದಾಗಿ ಅವಿಭಜಿತ ಶಿವಸೇನಾದಿಂದ ರಾಜ್ ಠಾಕ್ರೆ ಹೊರ ನಡೆಯಬೇಕಾಯಿತು. ಈಗ ಮತ್ತೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದರೆ ಪತ್ನಿ ಅನುಮತಿಯನ್ನು ಉದ್ಧವ್ ಪಡೆದುಕೊಳ್ಳಬೇಕು’ ಎಂದು ಮಹಾರಾಷ್ಟ್ರ ಸಚಿವ, ಬಿಜೆಪಿ ನಾಯಕ ನಿತೀಶ್ ರಾಣೆ ಹೇಳಿದ್ದಾರೆ.</p><p>ಶಿವಸೇನಾ(ಯುಬಿಟಿ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್ಎಸ್) ಮೈತ್ರಿ ವದಂತಿ ಬಗ್ಗೆ ಹಿಂದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಾಣೆ ಪ್ರತಿಕ್ರಿಯಿಸಿದ್ದಾರೆ.</p><p>‘ಎಂಎನ್ಎಸ್ ಜೊತೆ ಕೈಜೋಡಿಸುವ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವ ಮೊದಲು ರಶ್ಮಿ ಠಾಕ್ರೆ ಅವರ ಅನುಮತಿ ಪಡೆದಿದ್ದೀರಾ ಎಂದು ನೀವು ಉದ್ಧವ್ ಠಾಕ್ರೆ ಅವರನ್ನು ಕೇಳಬೇಕು. ಅಂತಹ ನಿರ್ಧಾರಗಳಲ್ಲಿ ಅವರ(ರಶ್ಮಿ) ಅಭಿಪ್ರಾಯವು ಹೆಚ್ಚು ಮಹತ್ವದ್ದಾಗಿದೆ’ ಎಂದು ಹೇಳಿದ್ದಾರೆ.</p><p>‘ಆ ಸಮಯದಲ್ಲಿ ರಾಜ್ ಮತ್ತು ಉದ್ಧವ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿರಲಿಲ್ಲ. ಆದರೂ ರಾಜ್ ಠಾಕ್ರೆ ಶಿವಸೇನಾದಿಂದ ಹೊರ ನಡೆದರು. ರಾಜ್ ನಿರ್ಗಮದಲ್ಲಿ ರಶ್ಮಿ ಪ್ರಮುಖ ಪಾತ್ರ ವಹಿಸಿದ್ದರು’ ಎಂದು ಆರೋಪಿಸಿದ್ದಾರೆ.</p><p>‘ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಯು ಬಲವಾಗಿದ್ದು, ಯಾವ ಮೈತ್ರಿ ಬಗ್ಗೆಯೂ ನಾವು ಚಿಂತಿಸುವುದಿಲ್ಲ’ ಎಂದು ಇದೇ ವೇಳೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ‘ಉದ್ಧವ್ ಠಾಕ್ರೆ ಪತ್ನಿ ರಶ್ಮಿ ಅವರಿಂದಾಗಿ ಅವಿಭಜಿತ ಶಿವಸೇನಾದಿಂದ ರಾಜ್ ಠಾಕ್ರೆ ಹೊರ ನಡೆಯಬೇಕಾಯಿತು. ಈಗ ಮತ್ತೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದರೆ ಪತ್ನಿ ಅನುಮತಿಯನ್ನು ಉದ್ಧವ್ ಪಡೆದುಕೊಳ್ಳಬೇಕು’ ಎಂದು ಮಹಾರಾಷ್ಟ್ರ ಸಚಿವ, ಬಿಜೆಪಿ ನಾಯಕ ನಿತೀಶ್ ರಾಣೆ ಹೇಳಿದ್ದಾರೆ.</p><p>ಶಿವಸೇನಾ(ಯುಬಿಟಿ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್ಎಸ್) ಮೈತ್ರಿ ವದಂತಿ ಬಗ್ಗೆ ಹಿಂದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಾಣೆ ಪ್ರತಿಕ್ರಿಯಿಸಿದ್ದಾರೆ.</p><p>‘ಎಂಎನ್ಎಸ್ ಜೊತೆ ಕೈಜೋಡಿಸುವ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವ ಮೊದಲು ರಶ್ಮಿ ಠಾಕ್ರೆ ಅವರ ಅನುಮತಿ ಪಡೆದಿದ್ದೀರಾ ಎಂದು ನೀವು ಉದ್ಧವ್ ಠಾಕ್ರೆ ಅವರನ್ನು ಕೇಳಬೇಕು. ಅಂತಹ ನಿರ್ಧಾರಗಳಲ್ಲಿ ಅವರ(ರಶ್ಮಿ) ಅಭಿಪ್ರಾಯವು ಹೆಚ್ಚು ಮಹತ್ವದ್ದಾಗಿದೆ’ ಎಂದು ಹೇಳಿದ್ದಾರೆ.</p><p>‘ಆ ಸಮಯದಲ್ಲಿ ರಾಜ್ ಮತ್ತು ಉದ್ಧವ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿರಲಿಲ್ಲ. ಆದರೂ ರಾಜ್ ಠಾಕ್ರೆ ಶಿವಸೇನಾದಿಂದ ಹೊರ ನಡೆದರು. ರಾಜ್ ನಿರ್ಗಮದಲ್ಲಿ ರಶ್ಮಿ ಪ್ರಮುಖ ಪಾತ್ರ ವಹಿಸಿದ್ದರು’ ಎಂದು ಆರೋಪಿಸಿದ್ದಾರೆ.</p><p>‘ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಯು ಬಲವಾಗಿದ್ದು, ಯಾವ ಮೈತ್ರಿ ಬಗ್ಗೆಯೂ ನಾವು ಚಿಂತಿಸುವುದಿಲ್ಲ’ ಎಂದು ಇದೇ ವೇಳೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>