<p><strong>ಇಂದೋರ್:</strong> ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಲಿ ಕಚ್ಚಿ ಗಾಯಗೊಂಡ ಪ್ರಯಾಣಿಕನೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ವೈದ್ಯರೊಬ್ಬರನ್ನು ಸೇವೆಯಿಂದ ವಜಾಗೊಳಿಸಲು ನಿರ್ಧಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಮಂಗಳವಾರ ಇಂದೋರ್ನಿಂದ ಬೆಂಗಳೂರಿಗೆ ಹೊರಟಿದ್ದ ವ್ಯಕ್ತಿಯೊಬ್ಬರಿಗೆ ಇಂದೋರ್ ವಿಮಾನ ನಿಲ್ದಾಣದ ನಿರ್ಗಮನ ಪ್ರದೇಶದ ಬಳಿ ಇಲಿ ಕಚ್ಚಿದ್ದು, ಅವರು ಗಾಯಗೊಂಡಿದ್ದರು. </p>.<p>ಘಟನೆಯ ಬಳಿಕ ಪ್ರಯಾಣಿಕ ತನ್ನ ವೈಯಕ್ತಿಕ ವೈದ್ಯರ ಸಲಹೆ ಮೇರೆಗೆ ರೇಬಿಸ್ ಲಸಿಕೆ ನೀಡುವಂತೆ ಒತ್ತಾಯಿಸಿ ಪ್ರತಿಭಟಿಸಿದ್ದಾರೆ. ಆದರೆ ವಿಮಾನ ನಿಲ್ದಾಣದ ಆರೋಗ್ಯ ಘಟಕದಲ್ಲಿ ಆ ಲಸಿಕೆ ಲಭ್ಯವಿರಲಿಲ್ಲ. ವಿಮಾನ ನಿಲ್ದಾಣದ ವೈದ್ಯರು ಅವರಿಗೆ ಟೆಟನಸ್ (tetanus) ಇಂಜೆಕ್ಷನ್ ನೀಡಿದ್ದಾರೆ. ಗಾಯಕ್ಕೆ ಪಟ್ಟಿ ಕಟ್ಟಿ, ಪ್ರತಿಜೀವಕ (antibiotic) ಮಾತ್ರೆಗಳನ್ನು ನೀಡಿದ್ದಾರೆ.</p>.<p>ಗಾಯಗೊಂಡ ಪ್ರಯಾಣಿಕನೊಂದಿಗೆ ವೈದ್ಯ ಅನುಚಿತವಾಗಿ ವರ್ತಿಸಿದ್ದಾರೆಂದು ನಮಗೆ ತಿಳಿದುಬಂದಿದೆ. ಆದರೆ ಅವರ ವರ್ತನೆ ಒರಟಾಗಿರಲಿಲ್ಲ. ವಿಮಾನ ನಿಲ್ದಾಣದಲ್ಲಿ ಅವರ ಬದಲಿಗೆ ಬೇರೆ ವೈದ್ಯರನ್ನು ನೇಮಿಸುವಂತೆ ಖಾಸಗಿ ಆಸ್ಪತ್ರೆಗೆ ತಿಳಿಸಿದ್ದೇವೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ವಿಪಿಂಕಾಂತ್ ಸೇಠ್ ಹೇಳಿದ್ದಾರೆ. </p>.<h2>ಕೀಟ ನಿಯಂತ್ರಣ ಏಜೆನ್ಸಿಗೆ ದಂಡ</h2><p>ಟೆಂಡರ್ ಷರತ್ತುಗಳ ಅಡಿಯಲ್ಲಿ ಕೀಟ ನಿಯಂತ್ರಣ ಏಜೆನ್ಸಿಗೆ ₹ 500 ದಂಡ ವಿಧಿಸಲಾಗಿದೆ. ಅಲ್ಲದೇ ಹೌಸ್ಕೀಪಿಂಗ್ ಗುತ್ತಿಗೆದಾರರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.</p>.ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿಗೆ ಇಂದೋರ್ ವಿಮಾನ ನಿಲ್ದಾಣದಲ್ಲಿ ಇಲಿ ಕಡಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್:</strong> ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಲಿ ಕಚ್ಚಿ ಗಾಯಗೊಂಡ ಪ್ರಯಾಣಿಕನೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ವೈದ್ಯರೊಬ್ಬರನ್ನು ಸೇವೆಯಿಂದ ವಜಾಗೊಳಿಸಲು ನಿರ್ಧಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಮಂಗಳವಾರ ಇಂದೋರ್ನಿಂದ ಬೆಂಗಳೂರಿಗೆ ಹೊರಟಿದ್ದ ವ್ಯಕ್ತಿಯೊಬ್ಬರಿಗೆ ಇಂದೋರ್ ವಿಮಾನ ನಿಲ್ದಾಣದ ನಿರ್ಗಮನ ಪ್ರದೇಶದ ಬಳಿ ಇಲಿ ಕಚ್ಚಿದ್ದು, ಅವರು ಗಾಯಗೊಂಡಿದ್ದರು. </p>.<p>ಘಟನೆಯ ಬಳಿಕ ಪ್ರಯಾಣಿಕ ತನ್ನ ವೈಯಕ್ತಿಕ ವೈದ್ಯರ ಸಲಹೆ ಮೇರೆಗೆ ರೇಬಿಸ್ ಲಸಿಕೆ ನೀಡುವಂತೆ ಒತ್ತಾಯಿಸಿ ಪ್ರತಿಭಟಿಸಿದ್ದಾರೆ. ಆದರೆ ವಿಮಾನ ನಿಲ್ದಾಣದ ಆರೋಗ್ಯ ಘಟಕದಲ್ಲಿ ಆ ಲಸಿಕೆ ಲಭ್ಯವಿರಲಿಲ್ಲ. ವಿಮಾನ ನಿಲ್ದಾಣದ ವೈದ್ಯರು ಅವರಿಗೆ ಟೆಟನಸ್ (tetanus) ಇಂಜೆಕ್ಷನ್ ನೀಡಿದ್ದಾರೆ. ಗಾಯಕ್ಕೆ ಪಟ್ಟಿ ಕಟ್ಟಿ, ಪ್ರತಿಜೀವಕ (antibiotic) ಮಾತ್ರೆಗಳನ್ನು ನೀಡಿದ್ದಾರೆ.</p>.<p>ಗಾಯಗೊಂಡ ಪ್ರಯಾಣಿಕನೊಂದಿಗೆ ವೈದ್ಯ ಅನುಚಿತವಾಗಿ ವರ್ತಿಸಿದ್ದಾರೆಂದು ನಮಗೆ ತಿಳಿದುಬಂದಿದೆ. ಆದರೆ ಅವರ ವರ್ತನೆ ಒರಟಾಗಿರಲಿಲ್ಲ. ವಿಮಾನ ನಿಲ್ದಾಣದಲ್ಲಿ ಅವರ ಬದಲಿಗೆ ಬೇರೆ ವೈದ್ಯರನ್ನು ನೇಮಿಸುವಂತೆ ಖಾಸಗಿ ಆಸ್ಪತ್ರೆಗೆ ತಿಳಿಸಿದ್ದೇವೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ವಿಪಿಂಕಾಂತ್ ಸೇಠ್ ಹೇಳಿದ್ದಾರೆ. </p>.<h2>ಕೀಟ ನಿಯಂತ್ರಣ ಏಜೆನ್ಸಿಗೆ ದಂಡ</h2><p>ಟೆಂಡರ್ ಷರತ್ತುಗಳ ಅಡಿಯಲ್ಲಿ ಕೀಟ ನಿಯಂತ್ರಣ ಏಜೆನ್ಸಿಗೆ ₹ 500 ದಂಡ ವಿಧಿಸಲಾಗಿದೆ. ಅಲ್ಲದೇ ಹೌಸ್ಕೀಪಿಂಗ್ ಗುತ್ತಿಗೆದಾರರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.</p>.ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿಗೆ ಇಂದೋರ್ ವಿಮಾನ ನಿಲ್ದಾಣದಲ್ಲಿ ಇಲಿ ಕಡಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>