<p><strong>ತಿರುಪತಿ</strong>: ತಿರುಪತಿ ತಿರುಮಲದಲ್ಲಿ ಅದ್ಧೂರಿ ರಥ ಸಪ್ತಮಿ ಆಚರಣೆಗೆ ತಯಾರಿ ನಡೆದಿದೆ. ಈ ದಿನ ಲಕ್ಷಾಂತರ ಭಕ್ತರು ವೆಂಕಟೇಶ್ವರನ ದರ್ಶನಕ್ಕೆ ಆಗಮಿಸುವ ಕಾರಣ ಕೆಲವು ಸೇವೆ ಮತ್ತು ವಿಶೇಷ ದರ್ಶನಗಳನ್ನು ರದ್ದುಗೊಳಿಸಲಾಗಿದೆ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿಳಿಸಿದೆ.</p><p>ಅರ್ಜಿತ ಸೇವೆ, ವಿಶೇಷ ದರ್ಶನ ಮತ್ತು ಜನವರಿ 24 ರಿಂದ 26ರವರೆಗೆ ನೋಂದಾಯಿಸಿದ ಸರ್ವ ಸೇವಾ ದರ್ಶನವನ್ನೂ ರದ್ದುಗೊಳಿಸಲಾಗಿದೆ. </p><p>ಇದರ ಜತೆಗೆ ಎನ್ಆರ್ಐಗಳಿಗೂ ವಿಶೇಷ ದರ್ಶನ ಇರುವುದಿಲ್ಲ. ವಿಐಪಿಗಳ ದರ್ಶನ ಮತ್ತು ಯಾವುದೇ ಶಿಫಾರಸು ಪತ್ರಗಳನ್ನು ಸ್ವೀಕರಿಸುವುದಿಲ್ಲ ಎಂದು ತಿಳಿಸಿದೆ. </p><p>ಅರ್ಜಿತ ಸೇವೆಗಳಾದ ಕಲ್ಯಾಣೋತ್ಸವ, ಉಂಜಲ ಸೇವೆ, ಅರ್ಜಿತ ಬ್ರಹ್ಮೋತ್ಸವ ಮತ್ತು ಸಹಸ್ರ ದೀಪಾಲಂಕಾರ ಸೇವೆಗಳೂ ರಥಸಪ್ತಮಿ ದಿನ ಇರುವುದಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ.</p><p>ಜನವರಿ 25ರಂದು ಭಾನುವಾರ ರಥಸಪ್ತಮಿ ಹಬ್ಬ ಇರುವ ಕಾರಣ ತಿರುಮಲದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈಗಾಗಲೇ ಸರ್ವ ದರ್ಶನಕ್ಕೆ ಟೋಕನ್ ನೀಡುವುದನ್ನು ಸ್ಥಗಿತಗೊಳಿಸಲಾಗಿದ್ದು, ಜನವರಿ 26ರಿಂದ ಟೋಕನ್ಗಳನ್ನು ನೀಡಲಾಗುವುದು ಎಂದು ಟಿಟಿಡಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ</strong>: ತಿರುಪತಿ ತಿರುಮಲದಲ್ಲಿ ಅದ್ಧೂರಿ ರಥ ಸಪ್ತಮಿ ಆಚರಣೆಗೆ ತಯಾರಿ ನಡೆದಿದೆ. ಈ ದಿನ ಲಕ್ಷಾಂತರ ಭಕ್ತರು ವೆಂಕಟೇಶ್ವರನ ದರ್ಶನಕ್ಕೆ ಆಗಮಿಸುವ ಕಾರಣ ಕೆಲವು ಸೇವೆ ಮತ್ತು ವಿಶೇಷ ದರ್ಶನಗಳನ್ನು ರದ್ದುಗೊಳಿಸಲಾಗಿದೆ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿಳಿಸಿದೆ.</p><p>ಅರ್ಜಿತ ಸೇವೆ, ವಿಶೇಷ ದರ್ಶನ ಮತ್ತು ಜನವರಿ 24 ರಿಂದ 26ರವರೆಗೆ ನೋಂದಾಯಿಸಿದ ಸರ್ವ ಸೇವಾ ದರ್ಶನವನ್ನೂ ರದ್ದುಗೊಳಿಸಲಾಗಿದೆ. </p><p>ಇದರ ಜತೆಗೆ ಎನ್ಆರ್ಐಗಳಿಗೂ ವಿಶೇಷ ದರ್ಶನ ಇರುವುದಿಲ್ಲ. ವಿಐಪಿಗಳ ದರ್ಶನ ಮತ್ತು ಯಾವುದೇ ಶಿಫಾರಸು ಪತ್ರಗಳನ್ನು ಸ್ವೀಕರಿಸುವುದಿಲ್ಲ ಎಂದು ತಿಳಿಸಿದೆ. </p><p>ಅರ್ಜಿತ ಸೇವೆಗಳಾದ ಕಲ್ಯಾಣೋತ್ಸವ, ಉಂಜಲ ಸೇವೆ, ಅರ್ಜಿತ ಬ್ರಹ್ಮೋತ್ಸವ ಮತ್ತು ಸಹಸ್ರ ದೀಪಾಲಂಕಾರ ಸೇವೆಗಳೂ ರಥಸಪ್ತಮಿ ದಿನ ಇರುವುದಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ.</p><p>ಜನವರಿ 25ರಂದು ಭಾನುವಾರ ರಥಸಪ್ತಮಿ ಹಬ್ಬ ಇರುವ ಕಾರಣ ತಿರುಮಲದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈಗಾಗಲೇ ಸರ್ವ ದರ್ಶನಕ್ಕೆ ಟೋಕನ್ ನೀಡುವುದನ್ನು ಸ್ಥಗಿತಗೊಳಿಸಲಾಗಿದ್ದು, ಜನವರಿ 26ರಿಂದ ಟೋಕನ್ಗಳನ್ನು ನೀಡಲಾಗುವುದು ಎಂದು ಟಿಟಿಡಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>