ರೈತರ ಪ್ರತಿಭಟನೆ, ವಿದೇಶಿ ನೀತಿ, ಬೆಲೆ ಏರಿಕೆ ಮತ್ತು ನಿರುದ್ಯೋಗ ಹೆಚ್ಚಳದ ಕುರಿತಂತೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಬಿಜೆಪಿಯ ರಾಷ್ಟ್ರೀಯತೆ ಬ್ರಿಟಿಷರ ‘ಒಡೆದು ಆಳುವ ನೀತಿ’ಮೇಲೆ ಆಧಾರಿತವಾಗಿದೆ ಎಂದು ಟೀಕಿಸಿದ್ದಾರೆ.
ವಿದೇಶಾಂಗ ನೀತಿಯ ವಿಷಯದಲ್ಲಿ ಸರ್ಕಾರವು 'ಸಂಪೂರ್ಣ ವಿಫಲವಾಗಿದೆ’ಎಂಬುದು ಸಾಬೀತಾಗಿದೆ. ಚೀನಾ ಸೇನೆಯು ಕಳೆದ ಒಂದು ವರ್ಷದಿಂದ ನಮ್ಮ ಪುಣ್ಯ ಭೂಮಿಯನ್ನು ವಶಪಡಿಸಿಕೊಂಡಿದೆ. ಆದರೆ, ಈ ಸಮಸ್ಯೆಯನ್ನು ಮರೆಮಾಚುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.