<p class="title"><strong>ಮುಂಬೈ:</strong> ದೇಶದ ಸದ್ಯದ ಕೋವಿಡ್ ಪರಿಸ್ಥಿತಿಯನ್ನು ಕುರಿತು ಚರ್ಚಿಸಲು ಕನಿಷ್ಠ ಎರಡು ದಿನದ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಸೋಮವಾರ ಒತ್ತಾಯಿಸಿದರು.</p>.<p class="title">‘ನಾನು ಚರ್ಚಿಸಿದ ವಿವಿಧ ಮುಖಂಡರು ಪರಿಸ್ಥಿತಿ ಗಂಭೀರ ಎಂದೇ ಹೇಳಿದ್ದಾರೆ. ಈಗ ಹಿಂದೆಂದೂ ಇಲ್ಲದ, ಯುದ್ಧದಂತಹ ಹಾಗೂ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹಾಸಿಗೆ ಇಲ್ಲ, ಆಮ್ಲಜನಕ ಇಲ್ಲ, ಲಸಿಕೆ ಇಲ್ಲ. ಇದು, ಏನೂ ಇಲ್ಲದ ಗೊಂದಲದ ಸ್ಥಿತಿ. ಪರಿಸ್ಥಿತಿ ಚರ್ಚೆಗೆ ವಿಶೇಷ ಅಧಿವೇಶನ ಕರೆಯುವುದು ಅಗತ್ಯವಾಗಿದೆ’ ಎಂದು ತಿಳಿಸಿದರು.</p>.<p class="title">ಕೆಲವು ರಾಜ್ಯಗಳು ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು ಗೌಪ್ಯವಾಗಿಡುತ್ತಿದ್ದವು. ಆದರೆ, ಈಗ ಅದು ನಿಂತಿದೆ. ಸಂಖ್ಯಾಸ್ಫೋಟದ ಬಳಿಕ ಈಗ ಕೆಲವು ರಾಜ್ಯಗಳಲ್ಲಿ ಚಿತೆಗೆ ಬೆಂಕಿ ಇಡುವ ದೃಶ್ಯಗಳು ಕಾಣಿಸಲು ತೊಡಗಿವೆ ಎಂದು ಯಾವುದೇ ಹೆಸರು ಉಲ್ಲೇಖಿಸದೇ ಹೇಳಿದರು.</p>.<p>ಹಿಂದೆ ಸಾಕಷ್ಟು ಪ್ರಕರಣಗಳನ್ನು ಗೋಪ್ಯವಾಗಿಟ್ಟ ಪರಿಣಾಮ ಈಗ ನಿಯಂತ್ರಿಸಲಾಗದ ಪರಿಸ್ಥಿತಿಗೆ ತಲುಪಿದ್ದೇವೆ. ಕೋವಿಡ್ ಪ್ರಕರಣಗಳು ಹೀಗೇ ಹೆಚ್ಚುತ್ತಾ ಹೋದರೆ ದೇಶದಲ್ಲಿ ಅರಾಜಕತೆಯು ಮೂಡುತ್ತದೆ ಎಂದು ಎಚ್ಚರಿಸಿದರು.</p>.<p>‘ರಾವುತ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಬಿಜೆಪಿ ವಕ್ತಾರ ಕೇಶವ ಉಪಾಧ್ಯಾಯ ಅವರು, ಮಹಾರಾಷ್ಟ್ರದಲ್ಲಿಯೂ ಪ್ರಕರಣಗಳು ಹೆಚ್ಚುತ್ತಿವೆ. ನಿಮಗೆ ರಾಜ್ಯದ ಸ್ಥಿತಿ ಸ್ಪಷ್ಟವಾಗಿ ಅರ್ಥವಾಗಿದ್ದರೆ, ಪರಿಸ್ಥಿತಿ ಚರ್ಚಿಸಲು ವಿಶೇಷ ಅಧಿವೇಶನ ಕರೆಯಿರಿ’ ಎಂದು ಸಲಹೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ:</strong> ದೇಶದ ಸದ್ಯದ ಕೋವಿಡ್ ಪರಿಸ್ಥಿತಿಯನ್ನು ಕುರಿತು ಚರ್ಚಿಸಲು ಕನಿಷ್ಠ ಎರಡು ದಿನದ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಸೋಮವಾರ ಒತ್ತಾಯಿಸಿದರು.</p>.<p class="title">‘ನಾನು ಚರ್ಚಿಸಿದ ವಿವಿಧ ಮುಖಂಡರು ಪರಿಸ್ಥಿತಿ ಗಂಭೀರ ಎಂದೇ ಹೇಳಿದ್ದಾರೆ. ಈಗ ಹಿಂದೆಂದೂ ಇಲ್ಲದ, ಯುದ್ಧದಂತಹ ಹಾಗೂ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹಾಸಿಗೆ ಇಲ್ಲ, ಆಮ್ಲಜನಕ ಇಲ್ಲ, ಲಸಿಕೆ ಇಲ್ಲ. ಇದು, ಏನೂ ಇಲ್ಲದ ಗೊಂದಲದ ಸ್ಥಿತಿ. ಪರಿಸ್ಥಿತಿ ಚರ್ಚೆಗೆ ವಿಶೇಷ ಅಧಿವೇಶನ ಕರೆಯುವುದು ಅಗತ್ಯವಾಗಿದೆ’ ಎಂದು ತಿಳಿಸಿದರು.</p>.<p class="title">ಕೆಲವು ರಾಜ್ಯಗಳು ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು ಗೌಪ್ಯವಾಗಿಡುತ್ತಿದ್ದವು. ಆದರೆ, ಈಗ ಅದು ನಿಂತಿದೆ. ಸಂಖ್ಯಾಸ್ಫೋಟದ ಬಳಿಕ ಈಗ ಕೆಲವು ರಾಜ್ಯಗಳಲ್ಲಿ ಚಿತೆಗೆ ಬೆಂಕಿ ಇಡುವ ದೃಶ್ಯಗಳು ಕಾಣಿಸಲು ತೊಡಗಿವೆ ಎಂದು ಯಾವುದೇ ಹೆಸರು ಉಲ್ಲೇಖಿಸದೇ ಹೇಳಿದರು.</p>.<p>ಹಿಂದೆ ಸಾಕಷ್ಟು ಪ್ರಕರಣಗಳನ್ನು ಗೋಪ್ಯವಾಗಿಟ್ಟ ಪರಿಣಾಮ ಈಗ ನಿಯಂತ್ರಿಸಲಾಗದ ಪರಿಸ್ಥಿತಿಗೆ ತಲುಪಿದ್ದೇವೆ. ಕೋವಿಡ್ ಪ್ರಕರಣಗಳು ಹೀಗೇ ಹೆಚ್ಚುತ್ತಾ ಹೋದರೆ ದೇಶದಲ್ಲಿ ಅರಾಜಕತೆಯು ಮೂಡುತ್ತದೆ ಎಂದು ಎಚ್ಚರಿಸಿದರು.</p>.<p>‘ರಾವುತ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಬಿಜೆಪಿ ವಕ್ತಾರ ಕೇಶವ ಉಪಾಧ್ಯಾಯ ಅವರು, ಮಹಾರಾಷ್ಟ್ರದಲ್ಲಿಯೂ ಪ್ರಕರಣಗಳು ಹೆಚ್ಚುತ್ತಿವೆ. ನಿಮಗೆ ರಾಜ್ಯದ ಸ್ಥಿತಿ ಸ್ಪಷ್ಟವಾಗಿ ಅರ್ಥವಾಗಿದ್ದರೆ, ಪರಿಸ್ಥಿತಿ ಚರ್ಚಿಸಲು ವಿಶೇಷ ಅಧಿವೇಶನ ಕರೆಯಿರಿ’ ಎಂದು ಸಲಹೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>