ಅಮರಾವತಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಂಬಟಿ ರಾಯುಡು ಅವರು, ಆಂಧ್ರ ಪ್ರದೇಶದ ವೈಎಸ್ಆರ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ ರೆಡ್ಡಿ ಸಮ್ಮುಖದಲ್ಲಿ ಅಂಬಟಿ ತಿರುಪತಿ ರಾಯುಡು ವೈಎಸ್ಆರ್ಸಿಪಿ ಸೇರಿದ್ದಾರೆ ಎಂದು ಪಕ್ಷವು ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದೆ. ಉಪ ಮುಖ್ಯಮಂತ್ರಿ ಕೆ. ನಾರಾಯಣ ಸ್ವಾಮಿ ಮತ್ತು ರಾಜಂಪೇಟೆ ಸಂಸದ ಆರ್. ಮಿಥುನ್ ರೆಡ್ಡಿ ಈ ಸಂದರ್ಭ ಉಪಸ್ಥಿತರಿದ್ದರು.