<p><strong>ಬೆಂಗಳೂರು:</strong> ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ರಾಹುಲ್ ಗಾಂಧಿ ಬುಧವಾರ ಶೋಕ ವ್ಯಕ್ತಪಡಿಸಿದ್ದಾರೆ. </p><p>‘ಭವಿಷ್ಯದಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ವೇಳೆ ಸುರಕ್ಷತೆಗೆ ಆದ್ಯತೆ ನೀಡಬೇಕು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಉಭಯ ನಾಯಕರು ಸಲಹೆ ನೀಡಿದ್ದಾರೆ. </p><p>‘ಈ ಘಟನೆಯಲ್ಲಿ ಸಂತ್ರಸ್ತರಾದವರೊಂದಿಗೆ ಕಾಂಗ್ರೆಸ್ ಪಕ್ಷ ನಿಲ್ಲುವುದು. ಕರ್ನಾಟಕ ಸರ್ಕಾರದಿಂದ ಪರಿಹಾರ ವೈದ್ಯಕೀಯ ನೆರವು ಒದಗಿಸುವುದಕ್ಕೂ ಪಕ್ಷ ಪ್ರಯತ್ನಿಸಲಿದೆ’ ಎಂದು ಖರ್ಗೆ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ರಾಹುಲ್ ಗಾಂಧಿ ಬುಧವಾರ ಶೋಕ ವ್ಯಕ್ತಪಡಿಸಿದ್ದಾರೆ. </p><p>‘ಭವಿಷ್ಯದಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ವೇಳೆ ಸುರಕ್ಷತೆಗೆ ಆದ್ಯತೆ ನೀಡಬೇಕು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಉಭಯ ನಾಯಕರು ಸಲಹೆ ನೀಡಿದ್ದಾರೆ. </p><p>‘ಈ ಘಟನೆಯಲ್ಲಿ ಸಂತ್ರಸ್ತರಾದವರೊಂದಿಗೆ ಕಾಂಗ್ರೆಸ್ ಪಕ್ಷ ನಿಲ್ಲುವುದು. ಕರ್ನಾಟಕ ಸರ್ಕಾರದಿಂದ ಪರಿಹಾರ ವೈದ್ಯಕೀಯ ನೆರವು ಒದಗಿಸುವುದಕ್ಕೂ ಪಕ್ಷ ಪ್ರಯತ್ನಿಸಲಿದೆ’ ಎಂದು ಖರ್ಗೆ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>