<p><strong>ತಿರುವನಂತಪುರ:</strong> ಕೊಚ್ಚಿಗೆ ಬರುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ತುಂಬಿದ ಕಂಟೇನರ್ಗಳು ಸಮುದ್ರಕ್ಕೆ ಬಿದ್ದ ಕಾರಣ ಆತಂಕ ಸೃಷ್ಟಿಯಾಗಿದೆ. ಕಂಟೇನರ್ಗಳು ದಡಕ್ಕೆ ಬಂದರೆ ಅವುಗಳ ಬಳಿ ತೆರಳದಂತೆ ಕೇರಳ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಪ್ರಾಧಿಕಾರವು (ಕೆಎಸ್ಡಿಎಂಎ) ಜನರಿಗೆ ಎಚ್ಚರಿಸಿದೆ. </p>.<p>ಕೊಚ್ಚಿ ಕರಾವಳಿಯಿಂದ ನೈರುತ್ಯಕ್ಕೆ 38 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಅರಬ್ಬಿ ಸಮುದ್ರದಲ್ಲಿ ಅಪಘಾತ ಸಂಭವಿಸಿದೆ. ಲೈಬೀರಿಯಾ ಧ್ವಜ ಹೊತ್ತಿದ್ದ ಹಡಗು ವಿಝಿಂಜಂನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದಾಗ ಒಂದು ಭಾಗಕ್ಕೆ ವಾಲಿದ್ದರಿಂದ ಸುಮಾರು ಹತ್ತು ಕಂಟೇನರ್ಗಳು ಸಮುದ್ರಕ್ಕೆ ಬಿದ್ದಿವೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. </p>.<p>ಹಡಗಿನಲ್ಲಿದ್ದ ಎಲ್ಲ 24 ಸಿಬ್ಬಂದಿಯನ್ನು ಕರಾವಳಿ ಕಾವಲು ಪಡೆ ಮತ್ತು ನೌಕಾಪಡೆ ರಕ್ಷಿಸಿದೆ. ಕಂಟೇನರ್ಗಳಲ್ಲಿ ಮರೀನ್ ಗ್ಯಾಸ್ ಆಯಿಲ್ (ಹಡಗು, ನೌಕೆಗಳಲ್ಲಿ ಬಳಸುವ ಇಂಧನ) ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. </p>.<p>'ಅಪಾಯಕಾರಿ ವಸ್ತು' ಹೊಂದಿರುವ ಕಂಟೇನರ್ಗಳು ಸಮುದ್ರಕ್ಕೆ ಬಿದ್ದಿದ್ದು, ಅವು ದಡಕ್ಕೆ ಸೇರಬಹುದು ಎಂದು ಕರಾವಳಿ ಕಾವಲು ಪಡೆ ಎಚ್ಚರಿಸಿದೆ. ಆದ್ದರಿಂದ, ಜನರು ಕಂಟೇನರ್ಗಳು ಬಳಿ ಹೋಗಬಾರದು ಎಂದು ಕೆಎಸ್ಡಿಎಂಎ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೊಚ್ಚಿಗೆ ಬರುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ ತೈಲ ತುಂಬಿದ ಕಂಟೇನರ್ಗಳು ಸಮುದ್ರಕ್ಕೆ ಬಿದ್ದ ಕಾರಣ ಆತಂಕ ಸೃಷ್ಟಿಯಾಗಿದೆ. ಕಂಟೇನರ್ಗಳು ದಡಕ್ಕೆ ಬಂದರೆ ಅವುಗಳ ಬಳಿ ತೆರಳದಂತೆ ಕೇರಳ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಪ್ರಾಧಿಕಾರವು (ಕೆಎಸ್ಡಿಎಂಎ) ಜನರಿಗೆ ಎಚ್ಚರಿಸಿದೆ. </p>.<p>ಕೊಚ್ಚಿ ಕರಾವಳಿಯಿಂದ ನೈರುತ್ಯಕ್ಕೆ 38 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಅರಬ್ಬಿ ಸಮುದ್ರದಲ್ಲಿ ಅಪಘಾತ ಸಂಭವಿಸಿದೆ. ಲೈಬೀರಿಯಾ ಧ್ವಜ ಹೊತ್ತಿದ್ದ ಹಡಗು ವಿಝಿಂಜಂನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದಾಗ ಒಂದು ಭಾಗಕ್ಕೆ ವಾಲಿದ್ದರಿಂದ ಸುಮಾರು ಹತ್ತು ಕಂಟೇನರ್ಗಳು ಸಮುದ್ರಕ್ಕೆ ಬಿದ್ದಿವೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. </p>.<p>ಹಡಗಿನಲ್ಲಿದ್ದ ಎಲ್ಲ 24 ಸಿಬ್ಬಂದಿಯನ್ನು ಕರಾವಳಿ ಕಾವಲು ಪಡೆ ಮತ್ತು ನೌಕಾಪಡೆ ರಕ್ಷಿಸಿದೆ. ಕಂಟೇನರ್ಗಳಲ್ಲಿ ಮರೀನ್ ಗ್ಯಾಸ್ ಆಯಿಲ್ (ಹಡಗು, ನೌಕೆಗಳಲ್ಲಿ ಬಳಸುವ ಇಂಧನ) ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. </p>.<p>'ಅಪಾಯಕಾರಿ ವಸ್ತು' ಹೊಂದಿರುವ ಕಂಟೇನರ್ಗಳು ಸಮುದ್ರಕ್ಕೆ ಬಿದ್ದಿದ್ದು, ಅವು ದಡಕ್ಕೆ ಸೇರಬಹುದು ಎಂದು ಕರಾವಳಿ ಕಾವಲು ಪಡೆ ಎಚ್ಚರಿಸಿದೆ. ಆದ್ದರಿಂದ, ಜನರು ಕಂಟೇನರ್ಗಳು ಬಳಿ ಹೋಗಬಾರದು ಎಂದು ಕೆಎಸ್ಡಿಎಂಎ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>