ನಿರ್ಮಲಾ ಸೀತಾರಾಮನ್ ಅವರು ಗುಣಮುಖರಾಗಿ ಸಂಸತ್ತಿಗೆ ಹಿಂತಿರುಗಿದ ಬಳಿಕ ಚರ್ಚೆಯಲ್ಲಿ ಪಾಲ್ಗೊಂಡು ಪ್ರತಿಕ್ರಿಯೆ ನೀಡಲಿದ್ದಾರೆ. ಪ್ರತಿಪಕ್ಷಗಳ ಬೇಡಿಕೆಯಂತೆ ಬೆಲೆ ಏರಿಕೆ ಮತ್ತು ನಿರ್ದಿಷ್ಟ ಆಹಾರೋತ್ಪನ್ನಗಳ ಮೇಲಿನ ಜಿಎಸ್ಟಿ ಕುರಿತಾಗಿ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಪ್ರಲ್ಹಾದ್ ಜೋಶಿ ಹೇಳಿದ್ದಾರೆ.